ಕೆರೆ ಕಾಮೇಗೌಡರು ಬೇಗನೆ ಗುಣಮುಖರಾಗಲಿ: ಸುಮಲತಾ ಟ್ವೀಟ್

ಮಂಡ್ಯ, ಜುಲೈ 25: ಕೆರೆ ಕಾಮೇಗೌಡರಿಗೆ ಕೊರೊನಾ ವೈರಸ್ ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದರು.

Recommended Video

      America ಜೊತೆ ಸೇಡು ತೀರಿಸಿಕೊಂಡ China | Oneindia Kannada

      ಇದೀಗ, ಮಂಡ್ಯ ಸಂಸದೆ ಸುಮಲತಾ ಅವರು ಕಾಮೇಗೌಡರು ಆದಷ್ಟೂ ಬೇಗ ಕೊವಿಡ್ ಸೋಂಕಿನಿಂದ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

      ಈ ಬಗ್ಗೆ ಟ್ವೀಟ್ ಮಾಡಿರುವ ಸುಮಲತಾ ''ಇಡೀ ದೇಶಕ್ಕೆ ಮಾದರಿಯಾಗಿ ಅವರ ನಿಸ್ವಾರ್ಥ ಕೆಲಸಕ್ಕೆ ಮೆಚ್ಚಿ, ಸ್ವತಃ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರೆ ಕೊಂಡಾಡಿದ ನಮ್ಮ ಮಂಡ್ಯದ ಹೆಮ್ಮೆ ಶ್ರೀ ಕಾಮೇಗೌಡ ಅವರು ಕೊರೊನಾ ಸೋಂಕಿನಿಂದ ಬೇಗನೆ ಸಂಪೂರ್ಣ ಗುಣಮುಖರಾಗಲೆಂದು ಪ್ರಾರ್ಥಿಸುವೆ ಮತ್ತೆ ಆರೋಗ್ಯದಿಂದ ಅವರ ಸಾರ್ಥಕ ಜೀವನ ಹೀಗೆಯೇ ನೂರು ಕಾಲ ಸಾಗಲಿ ಎಂದು ಆಶಿಸುತ್ತೇನೆ' ಎಂದು ಹೇಳಿದ್ದಾರೆ.

      ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರು ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಇದರ ಜೊತೆಗೆ ಕೊರೊನಾ ವೈರಸ್ ಸಹ ತಗುಲಿದೆ.

      Mandya MP Sumalatha wish to Kere Kamegowda

      82 ವರ್ಷದ ಕಾಮೇಗೌಡರು ಸುಮಾರು 15 ಕೆರೆಗಳನ್ನು ಸ್ವಂತವಾಗಿ ನಿರ್ಮಿಸಿ, ಅದರಲ್ಲೂ ಸದಾ ನೀರು ಉಳಿಯುವಂತೆ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಕಾಮೇಗೌಡರ ಕೆಲಸಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.

      ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊವಿಡ್ ಸೋಂಕು ತಗುಲಿತ್ತು. ನಂತರ ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+