ಚಲುವರಾಯಸ್ವಾಮಿ ಒಬ್ಬ ರಾಜಕೀಯ ವ್ಯಭಿಚಾರಿ: ಶಾಸಕ ಸುರೇಶ್ ಗೌಡ
Recommended Video

ಮಂಡ್ಯ, ಅಕ್ಟೋಬರ್ 10: ಮಂಡ್ಯ ರಾಜಕಾರಣದಲ್ಲಿ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಕಿತ್ತಾಟ ತಾರಕಕ್ಕೇರುವ ಸೂಚನೆಗಳು ಕಾಣಿಸುತ್ತಿವೆ.
ಮಾಜಿ ಶಾಸಕ, ಕಾಂಗ್ರೆಸ್ನ ಚಲುವರಾಯಸ್ವಾಮಿ ಮತ್ತು ಸಚಿವ ಸಿ.ಎಸ್. ಪುಟ್ಟರಾಜು ನಡುವೆ ಮಾತಿನ ಯುದ್ಧ ನಡೆದಿತ್ತು. ಆಗ ಸೋತು ಹೋಗಿರುವ ಚಲುವರಾಯಸ್ವಾಮಿ ಸತ್ತ ಕುದುರೆ ಇದ್ದಂತೆ. ಸತ್ತ ಕುದುರೆಗಳೆಲ್ಲ ಈಗ ಮಾತನಾಡುತ್ತಿವೆ ಎಂದು ಪುಟ್ಟರಾಜು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಚಲುವರಾಯಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದರು.
ನಾಗಮಂಗಲ ಕ್ಷೇತ್ರದಲ್ಲಿ ಚಲುವರಾಯಸ್ವಾಮಿ ಅವರನ್ನು 50 ಸಾವಿರಕ್ಕೂ ಅಧಿಕ ಅಂತರದ ಮತಗಳಿಂದ ಸೋಲಿಸಿದ್ದ ಸುರೇಶ್ ಗೌಡ ಕೂಡ ಈಗ ಅವರ ವಿರುದ್ಧ ಹರಿಹಾಯ್ದಿದ್ದಾರೆ.

ಡೆಡ್ ಅಲ್ಲ, ಕ್ಲೋಸ್ಡ್ ಹಾರ್ಸ್
ನಿನ್ನೆ ಮೊನ್ನೆ ಸತ್ತಿದ್ದರೆ ಅದನ್ನು ಡೆಡ್ ಹಾರ್ಸ್ (ಸತ್ತ ಕುದುರೆ) ಎಂದು ಕರೆಯಬಹುದಾಗಿತ್ತು. ಆದರೆ, ಚಲುವರಾಯಸ್ವಾಮಿ 'ಕ್ಲೋಸ್ಡ್ ಹಾರ್ಸ್' ಎಂದು ಸುರೇಶ್ ಗೌಡ ಟೀಕಿಸಿದ್ದಾರೆ.
ಚಲುವರಾಯಸ್ವಾಮಿ ಅವರ ರಾಜಕೀಯ ಬದುಕು ಯಾವಾಗಲೋ ಮುಗಿದುಹೋಗಿದೆ. ಹೀಗಾಗಿ ಅವರು ಸತ್ತ ಕುದುರೆಯಲ್ಲ. ಯಾವಾಗಲೋ ಅಂತ್ಯ ಕಂಡಿರುವ ಕುದುರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ರಾಜಕೀಯ ವ್ಯಭಿಚಾರಿ
ಚಲುವರಾಯಸ್ವಾಮಿ ಜನರು ಕೊಟ್ಟ ಅಧಿಕಾರವನ್ನು ಮಾರಾಟ ಮಾಡಿಕೊಂಡಿದ್ದರು. ಒಂದು ಪಕ್ಷದಲ್ಲಿದ್ದು ಎದುರಾಳಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. 2013ರಲ್ಲಿ ರಮ್ಯಾ ಎದುರು ಪುಟ್ಟರಾಜು ಸೋಲು ಕಾಣಲು ಚಲುವರಾಯಸ್ವಾಮಿ ಅವರೇ ಕಾರಣ. ಬಳಿಕ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜತೆ ಸೇರಿಕೊಂಡರು. ಇದನ್ನೇ ರಾಜಕೀಯ ವ್ಯಭಿಚಾರ ಎಂದು ಕರೆಯುವುದು. ಇದು ಸುಳ್ಳು ಎಂದಾದರೆ ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಅವರಿಗೆ ಅಷ್ಟು ಸಾಮರ್ಥ್ಯವಿದ್ದರೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಸವಾಲು ಹಾಕಿದರು.

ಪುಟ್ಟರಾಜು ಹೇಳಿದ್ದೇನು.
ಚಲುವರಾಯಸ್ವಾಮಿ ಅವರನ್ನು ಜನರು ಸೋಲಿಸಿದ್ದೇ ಅವರು ಬಾಯಿಮುಚ್ಚಿಕೊಂಡು ಇರಲಿ ಎಂದು. ಆದರೆ ಸತ್ತ ಕುದುರೆಗಳು ಮಾತನಾಡುವ ಹಾಗಾಗಿದೆ, ಜನರು ನೀಡಿದ ತೀರ್ಪಿನಿಂದಾಗಿ ಅನಿವಾರ್ಯವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚಿಸಿವೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಮಹಾನಾಯಕರು ತೀರ್ಮಾನ ಮಾಡಿದ್ದಾರೆ. ನಾಯಕರ ತೀರ್ಮಾನಗಳಿಗೆ ನಾನೂ ಬದ್ಧನಾಗಿರಬೇಕು, ಚಲುವರಾಯಸ್ವಾಮಿ ಅವರೂ ಬದ್ಧರಾಗಿರಬೇಕು ಎಂದು ಸಿ.ಎಸ್. ಪುಟ್ಟರಾಜು ಹೇಳಿದ್ದರು.

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಸ್ವಾಮಿ
ಯೋಗ್ಯತೆ ಇಲ್ಲದಿದ್ದರೂ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದು ಫಲಾನುಭವಿಯಾಗಿದ್ದಾನೆ. ಅಂತವನು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಚಲುವರಾಯಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.
ನೀನು ಹೇಗೆ ಗೆದ್ದು ಬಂದಿದ್ದೀಯ ಎಂದು ದೇವೇಗೌಡರು ಹೇಳಿದ್ದರು. ಈಗ ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರಬಹುದು. ಈಗಲೂ ಕೂಡ ಕಾಂಗ್ರೆಸ್ ಅಭ್ಯರ್ಥಿ ಹಾಕಿದರೆ ನೇರ ಪೈಪೋಟಿ ಕೊಡುವ ಶಕ್ತಿ ಇದೆ ಎಂದು ಹೇಳಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications