ಮಂಡ್ಯ ಫಲಿತಾಂಶ: ರಾಜಕೀಯ ಸನ್ಯಾಸತ್ವದ ಶಪಥ ಮಾಡಿದ ಜೆಡಿಎಸ್ ಸಚಿವ
Recommended Video
ಮಂಡ್ಯ, ಏ 22: ತುಮಕೂರಿನಲ್ಲಿ ದೇವೇಗೌಡ್ರನ್ನು ಗೆಲ್ಲಿಸಲಾಗದಿದ್ದರೆ, ರಾಜೀನಾಮೆ ಪತ್ರದೊಂದಿಗೆ ಬರುತ್ತೇನೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್, ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದದ್ದು ವೈರಲ್ ಆಗಿತ್ತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗ, ಮತ್ತೋರ್ವ ಜೆಡಿಎಸ್ ಮುಖಂಡರು ನಿವೃತ್ತಿಯ ಮಾತನ್ನಾಡಿದ್ದಾರೆ. ಮಂಡ್ಯದಲ್ಲಿ ನಾನು ನಿರೀಕ್ಷಿಸಿದಷ್ಟು ಲೀಡ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲದಿದ್ದರೆ, ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಲುತ್ತೇನೆ ಎಂದು ಸಚಿವ ಸಿ ಎಸ್ ಪುಟ್ಟರಾಜು ಶಪಥ ಮಾಡಿದ್ದಾರೆ.
ನಮ್ಮ ಮೈತ್ರಿ ಅಭ್ಯರ್ಥಿ ನಿಖಿಲ್ ಸುಮಾರು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಈ ಅಂತರದಲ್ಲಿ ಸ್ವಲ್ಪ ಕಮ್ಮಿಯಾದರೂ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದಿರುವ ಪುಟ್ಟರಾಜು, ಸುಮಲತಾ ಅವರು ಸೋತರೆ ಯಡಿಯೂರಪ್ಪ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ನಾವೆಲ್ಲರೂ ಮಂಡ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ, ನಮ್ಮ ಅಭ್ಯರ್ಥಿ ಭಾರೀ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮೇಲುಕೋಟೆ ಶಾಸಕರೂ ಆಗಿರುವ ಸಿ ಎಸ್ ಪುಟ್ಟರಾಜು ಹೇಳಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದ ನಂತರ, ಏನೆಲ್ಲಾ ಆಗಿದೆ ಎನ್ನುವುದನ್ನು ತಿಳಿದಿದೆ. ದರ್ಶನ್ ಮತ್ತು ಯಶ್, ಚುನಾವಣಾ ಫಲಿತಾಂಶದ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ. ಪ್ರಾಯಶ್ಚಿತ್ತವನ್ನೂ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.
ಈಗಾಗಲೇ ನಮ್ಮದೇ ಗೆಲುವು ಎಂದು ನಿಖಿಲ್ ಮತ್ತು ಸುಮಲತಾ ಅಂಬರೀಶ್ ಅವರು ಹೇಳಿಕೊಳ್ಳುತ್ತಿದ್ದಾರೆಯಾದರೂ ಒಳಮರ್ಮ ಗೊತ್ತಾಗಲು ಮೇ 23ರ ವರೆಗೆ ಕಾಯಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications