ಮಂಡ್ಯ: ಅಕ್ರಮ ಸ್ಫೋಟಕ ಹೊಂದಿದ್ದ ನಾಲ್ವರ ಬಂಧನ
ಮಂಡ್ಯ, ಮಾರ್ಚ್ 10: ಅಕ್ರಮ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡು ನಾಲ್ವರು ಕೂಲಿ ಕಾರ್ಮಿಕರನ್ನು ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಕಲ್ಲು ಕ್ವಾರಿಯಲ್ಲಿ ನಡೆದಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕೋಡಿಶೆಟ್ಟಿಪುರ ಗ್ರಾಮದ ಸರ್ವೆ ನಂ.93ರಲ್ಲಿ ಗ್ರಾ.ಪಂ ಸದಸ್ಯ ಸತ್ಯರಾಜ್ ಎಂಬುವರಿಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತ್ತಿರುವ ಬಗ್ಗೆ ಪೊಲೀಸರಿಗೆ ದೂರುಗಳು ಬಂದಿದ್ದವು.
ಮಾ.12, ನವೀನ್ ಕುಮಾರ್ ಬಂಧನ ಖಂಡಿಸಿ ಮದ್ದೂರು ಬಂದ್
ಈ ಸಂಬಂಧ ಖಚಿತ ಮಾಹಿತಿ ಪಡೆದ ಪಿಎಸ್ ಐ ಪುನೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಕಲ್ಲುಕ್ವಾರಿಯಲ್ಲಿ ಅಕ್ರಮ ಸ್ಪೋಟಕಗಳು ಪತ್ತೆಯಾಗಿವೆ. ಸ್ಥಳದಲ್ಲಿದ್ದ ಬುಲೆರೋ ವಾಹನ ಹಾಗೂ ಸ್ಫೋಟಕ ವಸ್ತುಗಳು ಸೇರಿದಂತೆ ನಾಲ್ಕು ಮಂದಿ ಕೂಲಿ ಕಾರ್ಮಿಕರನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆ ವೇಳೆ ಜಿಲೆಟಿನ್ ಕಡ್ಡಿ, ಸೇರಿದಂತೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.