ಮಂಡ್ಯ: ಪೊಲೀಸರಿಂದ ಗ್ರಾಮ ವಾಸ್ತವ್ಯ, ಕುಂದು-ಕೊರತೆ ಆಲಿಕೆ
ಮಂಡ್ಯ, ಜುಲೈ 30: ಜಿಲ್ಲೆಯ ಪೊಲೀಸರು ವಿನೂತಮ ಕಾರ್ಯಕ್ರಮಕ್ಕೆ ನಾಂದಿ ಹಾಡಿದ್ದು, ಕುಮಾರಸ್ವಾಮಿ ಅವರಂತೆಯೇ ಪೊಲೀಸರು ಕೂಡ ಇನ್ನು ಮುಂದೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಜಿಲ್ಲಾ ವರಿಷ್ಠಾಧಿಕಾರಿ ಡಾ.ಶಿವಪ್ರಕಾಶ್ ದೇವರಾಜ್ ಅವರು ಈ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ನಿನ್ನೆ ಅವರು ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿ ರಾತ್ರಿ ಸಭೆ ನಡೆಸಿ ಅದೇ ಊರಿನ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.
ಕುಮಾರಸ್ವಾಮಿ ಗ್ರಾಮ ವಾಸ್ತವ್ಯ: ಲಾಭ ಜೆಡಿಎಸ್ಗೋ, ಕಾಂಗ್ರೆಸ್ಗೊ?
ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಗ್ರಾಮಗಳಲ್ಲಿ ವಾಸ್ತವ್ಯ ಮಾಡಬೇಕು ಎಂದು ಎಸ್ಪಿ ಅವರು ಸೂಚನೆ ನೀಡಿದ್ದು, ಎಸ್ಐ, ಸಿಐ ಸೇರಿ ಎಲ್ಲ ಅಧಿಕಾರಿಗಳು ಯಾವುದಾದರೂ ಒಂದು ಗ್ರಾಮದಲ್ಲಿ ಸಭೆ ನಡೆಸಿ, ಜನರ ಕುಂದು-ಕೊರತೆ ಆಲಿಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಕುಮಾರಸ್ವಾಮಿ ಅವರು ಮೊದಲ ಬಾರಿಗೆ 2006 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಗ್ರಾಮ ವಾಸ್ತವ್ಯ ಪ್ರಾರಂಭಿಸಿದರು. ಆಗ ಅದು ಭಾರಿ ಜನಪ್ರಿಯಗೊಂಡಿತ್ತು. ಕುಮಾರಸ್ವಾಮಿ ಅವರಿಗೆ ರಾಷ್ಟ್ರಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು, ರಾಜಕೀಯ ವಲಯದಲ್ಲಿ ಅವರಿಗೆ ಜನಪ್ರಿಯತೆಯನ್ನೂ ತಂದುಕೊಟ್ಟಿತ್ತು.