ಮಂಡ್ಯ ಬಸ್ ದುರಂತ : ಚಾಲಕ ಶಿವಣ್ಣ ಹೇಳುವುದೇನು?
ಮಂಡ್ಯ, ಡಿಸೆಂಬರ್ 10 : ಮಂಡ್ಯದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿದ್ದು ಹೇಗೆ? ಎಂದು ಬಸ್ಸಿನ ಚಾಲಕ ಶಿವಣ್ಣ ಹೇಳಿಕೆ ನೀಡಿದ್ದಾರೆ. ಈಜು ಬಾರದಿದ್ದರೂ ಶಿವಣ್ಣ ಘಟನೆಯಲ್ಲಿ ಬದುಕಿ ಬಂದಿದ್ದರು. ಮಂಡ್ಯ ನ್ಯಾಯಾಲಯ ಆರೋಪಿನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ನವೆಂಬರ್ 24ರಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕನಗನಮರಡಿಯಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ ಬಿದ್ದಿತ್ತು. ಈ ದುರಂತದಲ್ಲಿ 30 ಜನರು ಮೃತಪಟ್ಟಿದ್ದರು. ಬಸ್ಸಿನ ಚಾಲಕ ಶಿವಣ್ಣ ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದರು.
ಭಾನುವಾರ ಶಿವಣ್ಣನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ ಮಧ್ಯಾಹ್ನ ಮಂಡ್ಯದ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಲಾಯಿತು. ಚಾಲಕ ಶಿವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸರ ವಶದಲ್ಲಿದ್ದ ಶಿವಣ್ಣ ಬಸ್ ನಾಲೆಗೆ ಉರುಳಿದ್ದು ಹೇಗೆ?, ಈಜು ಬಾರದಿದ್ದರೂ ತಾನು ಬದುಕಿದ್ದು ಹೇಗೆ? ಎಂಬುದನ್ನು ಪೊಲೀಸರಿಗೆ ವಿವರಿಸಿದ್ದಾನೆ....

ಚಾಲಕ ಶಿವಣ್ಣ ಹೇಳಿದ್ದೇನು?
'ಕನಗನಮರಡಿ ನಾಲೆಯ ಬಳಿ ಬರುವಾಗ ಬಸ್ ನಿಯಂತ್ರಣ ತಪ್ಪಿತು. ಆಗ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ನಾನು ಅದನ್ನು ತಪ್ಪಿಸಲು ಮುಂದಾದಾಗ, ಬಸ್ ನಾಲೆಗೆ ಉರುಳಿ ಬಿದ್ದಿತು' ಎಂದು ಶಿವಣ್ಣ ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ.

ಶಿವಣ್ಣ ಬದುಕಿದ್ದು ಹೇಗೆ?
ಬಸ್ ಚಾಲಕ ಶಿವಣ್ಣ ಅವರಿಗೆ ಈಜು ಬರುತ್ತಿರಲಿಲ್ಲ. 'ಸ್ಥಳೀಯರಾದ ಅಂಕೇಗೌಡ ಅವರು ಶಿವಣ್ಣನನ್ನು ರಕ್ಷಣೆ ಮಾಡಿದರು. ಸುಸ್ತಾಗಿದ್ದ ನನ್ನನ್ನು ಜಮೀನಿನ ಬಳಿ ಕೂರಿಸಿದರು. ನಡೆದುಕೊಂಡು ನಾನು ಬಸರಾಳು ಗ್ರಾಮಕ್ಕೆ ಹೋಗಿ ಅಲ್ಲಿಂದ ಬಸ್ ಮೂಲಕ ಬೆಂಗಳೂರಿಗೆ ಹೋದೆ' ಎಂದು ಶಿವಣ್ಣ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಬಂಧನ
ನವೆಂಬರ್ 24ರಂದು ಬಸ್ ನಾಲೆಗೆ ಬಿದ್ದ ತಕ್ಷಣ ಬಸ್ ಚಾಲಕ ಶಿವಣ್ಣ ಪರಾರಿಯಾಗಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು. ಸೋಮವಾರ ಮಂಡ್ಯ ನ್ಯಾಯಾಲಯಕ್ಕೆ ಆರೋಪಿನ್ನು ಹಾಜರು ಪಡಿಸಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

30 ಜನರ ಧಾರುಣ ಸಾವು
ಕನಗನಮರಡಿ ಬಸ್ ದುರಂತದ ಬಳಿಕ ಸರ್ಕಾರ ಈ ಮಾರ್ಗದಲ್ಲಿ 2 ಕೆಎಸ್ಆರ್ಟಿಸಿ ಬಸ್ಗಳ ಸಂಚಾರವನ್ನು ಆರಂಭಿಸಿದೆ. ನಾಲೆಯ ಎಡಭಾಗದಲ್ಲಿ ರಸ್ತೆಗೆ ಹೊಂದಿಕೊಡಂತೆ ತಡೆಗೋಡೆಯನ್ನು ನಿರ್ಮಾಣ ಮಾಡಲಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications