ಸಾವಿನಲ್ಲೂ ನೇತ್ರದಾನದ ಪಾಠ ಮಾಡಿದ ಟೀಚರ್
ಮಂಡ್ಯ, ಸೆಪ್ಟೆಂಬರ್ 15: ನಗರದ ಮಂಡ್ಯ ಯೂತ್ ಗ್ರೂಪ್ ವತಿಯಿಂದ ಸ್ಥಾಪಿಸಿರುವ ಡಾ.ರಾಜಕುಮಾರ್ ನೇತ್ರ ಸಂಗ್ರಹಣಾ ಘಟಕ್ಕೆ ಶಿಕ್ಷಕಿಯೊಬ್ಬರು ನೇತ್ರ ದಾನ ಮಾಡುವ ಮೂಲಕ, ತಮ್ಮ ನಂತರವೂ ಬೇರೆಯವರಿಗೆ ಬೆಳಕಾಗಿದ್ದಾರೆ.
ಕಾರ್ಮಲ್ ಕಾನ್ವೆಂಟ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕೇರಳ ಮೂಲದ ಶಾಂತಕುಮಾರಿ (61) ತೀರಿಕೊಂಡ ನಂತರವೂ ನೇತ್ರದಾನದ ಪಾಠ ಮಾಡಿ, ಬೇರೆಯವರಿಗೆ ಬೆಳಕಾದವರು.[ಅಂಧರ ಬಾಳಿನ ಬೆಳಕು 'ದೃಷ್ಟಿದೇವತೆ' ಮೈಸೂರಿನ ಮಧುರ]

ರಕ್ತದೊತ್ತಡ, ಮಧುಮೇಹ, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು, ಆಗಾಗ ಡಯಾಲಿಸಿಸ್ ಮಾಡಿಸುತ್ತಿದ್ದರು. ತಮ್ಮ ಸಾವಿನ ಮುನ್ನ ನೇತ್ರಗಳನ್ನು ದಾನ ಮಾಡುವ ಬಯಕೆಯನ್ನು ಕುಟುಂಬದವರ ಎದುರು ವ್ಯಕ್ತಪಡಿಸಿದ್ದರು. ಅವರ ಸಾವಿನ ಬಳಿಕ ಕುಟುಂಬ ಸದಸ್ಯರ ಒಪ್ಪಿಗೆ ಪಡೆದು, ಡಾ.ಯಾಶಿಕಾ ಅನಿಲ್ ನೇತ್ರ ಸಂಗ್ರಹಿಸಿ ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ರವಾನಿಸಿದರು.[ಭೈರಪ್ಪ, ಮಧುರ ಅವರಿಗೆ ಮೈಸೂರಿನಲ್ಲಿ ಸನ್ಮಾನ]
ಕೆಲವೇ ಗಂಟೆಗಳಲ್ಲಿ ಮೃತ ಶಾಂತಕುಮಾರಿ ಅವರಿಂದ ಸಂಗ್ರಹಿಸಲಾದ ಕಣ್ಣುಗಳು ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದವು. ನೇತ್ರ ಸಂಗ್ರಹ ವೇಳೆ ಮೃತ ಶಾಂತಕುಮಾರಿ ಪತಿ ಕೆ.ವಿ.ಶೇಖರನ್, ಪುತ್ರ ಎನ್.ವಿ.ಶೈಲೇಶ್, ಮಂಡ್ಯ ಯೂತ್ ಗ್ರೂಪ್ ಅಧ್ಯಕ್ಷ ಡಾ.ಅನಿಲ್ ಆನಂದ್, ಪದಾಧಿಕಾರಿಗಳಾದ ಮರಿಲಿಂಗೇಗೌಡ, ವಿನಯ್ ಇನ್ನಿತರರು ಇದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications