ಮೋದಿ ಪತ್ರದಿಂದ ಮಂಡ್ಯದ ಮುಸ್ಲಿಂ ಯುವತಿಗೆ ಶೈಕ್ಷಣಿಕ ಸಾಲ
ಬಿಬಿ ಸಾರಾ ಸೆಂಟ್ರಲ್ ಬ್ಯಾಂಕ್ ಇಂಡಿಯಾಗೆ ಸಾಲ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಸಾಲ ಸಿಗಲು ವಿಳಂಬವಾಗಿತ್ತು. ಈ ಸಂದರ್ಭ ಪ್ರಧಾನಿಗೆ ಪತ್ರ ಬರೆದಿದ್ದರು. ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದ್ದರಿಂದ ಆಕೆಗೀಗ ಸಾಲ ಸಿಕ್ಕಿದೆ.
ಬೆಂಗಳೂರು, ಮಾರ್ಚ್ 21: ಉನ್ನತ ಶಿಕ್ಷಣ ಪೂರೈಸಲು ಶೈಕ್ಷಣಿಕ ಸಾಲ ಸಿಗದ ಹಿನ್ನಲೆಯಲ್ಲಿ ಸಹಾಯ ಮಾಡುವಂತೆ ಈ ಯುವತಿ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಪತ್ರ ಬರೆದಿದ್ದರು. ತಕ್ಷಣ ಇದಕ್ಕೆ ಪ್ರಧಾನಿ ಕಾರ್ಯಾಲಯದಿಂದ ಉತ್ತರವೂ ಬಂದಿತ್ತು. ಇದೀಗ ಪತ್ರ ಬಂದ ಕೇವಲ 10 ದಿನಗಳಲ್ಲಿ ಆಕೆಗೆ ಶೈಕ್ಷಣಿಕ ಸಾಲ ಸಿಕ್ಕಿದೆ.
ಪಿಇಎಸ್ ಕಾಲೇಜಿನಲ್ಲಿ ಎಂಬಿಎ ವ್ಯಾಸಾಂಗ ಮಾಡುತ್ತಿರುವ ಬಿಬಿ ಸಾರ ಎಂಬ ಯುವತಿಗೆ 1.5 ಲಕ್ಷ ಶೈಕ್ಷಣಿಕ ಸಾಲ ಬೇಕಾಗಿತ್ತು. ಇವರು ಮಡ್ಯದ ಶುಗರ್ ಟೌನ್ ನಿವಾಸಿ ಅಬ್ದುಲ್ ಇಲಿಯಾಸ್ ಪುತ್ರಿಯಾಗಿದ್ದಾರೆ.[ಶಹಬ್ಬಾಶ್ ಮೋದೀಜಿ ಎಂದ ರಾಷ್ಟ್ರಪತಿ ಪ್ರಣಬ್!]

ಇವರು ಸೆಂಟ್ರಲ್ ಬ್ಯಾಂಕ್ ಇಂಡಿಯಾಗೆ ಸಾಲ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಸಾಲ ಸಿಗಲು ವಿಳಂಬವಾಗಿತ್ತು. ಈ ಸಂದರ್ಭ ಪ್ರಧಾನಿಗೆ ಪತ್ರ ಬರೆದಿದ್ದರು. ಸಾರಾ ಪತ್ರದ ಮೇರೆಗೆ, ಈ ಹೆಣ್ಣು ಮಗಳಿಗೆ ಶೈಕ್ಷಣಿಕ ಸಾಲ ಸಿಗುವಂತೆ ನೋಡಿಕೊಳ್ಳಿ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಪ್ರಧಾನಿ ಕಾರ್ಯಾಲಯದಿಂದ ಉತ್ತರವೂ ಬಂದಿತ್ತು.[ಪುಟಾಣಿ ಆರಾಧ್ಯ ಕರೆಗೆ ಸ್ಪಂದಿಸುತ್ತಾರಾ ಪ್ರಧಾನಿ ಮೋದಿ?]
ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರವನ್ನು ತೋರಿಸಿದರೂ ಬ್ಯಾಂಕಿನವರು ಸಾಲ ಕೊಡಲು ಹಿಂದೇಟು ಹಾಕಿದರು. ಕೊನೆಗೆ ವಿಜಯ ಬ್ಯಾಂಕಿಗೆ ಹೋದಾಗ ಪತ್ರ ನೋಡಿ ತಕ್ಷಣ ಸಾಲ ನೀಡಿದ್ದಾರೆ. ಹೀಗೆ ಪ್ರಧಾನಿ ಪತ್ರವೊಂದು ಸಾಲ ಸಿಗದ ಯುವತಿಗೆ ಸಾಲ ಸಿಗುವಂತೆ ಮಾಡಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications