ಮಂಡ್ಯದಲ್ಲಿ ಹಲವು ಕುರಿಗಳ ಸಾವು: ರೈತರಲ್ಲಿ ಆತಂಕ
ಮಂಡ್ಯ, ಅಕ್ಟೋಬರ್ 11: ಮಂಡ್ಯದ ಭಾರತೀನಗರ ಸಮೀಪದ ಅಣ್ಣೂರು ಗ್ರಾಮ ವ್ಯಾಪ್ತಿಯಲ್ಲಿ ಕುರಿಗಳು ವಾಂತಿ ಬೇಧಿಯಿಂದ ಸಾವನ್ನಪ್ಪುತ್ತಿರುವುದರಿಂದ ಅವುಗಳನ್ನೇ ನಂಬಿದ್ದ ರೈತರು ಆತಂಕಗೊಂಡಿದ್ದಾರೆ.
ಬಹಳಷ್ಟು ಬಡ ವರ್ಗದ ಜನತೆಗೆ ಈ ಕುರಿಗಳೇ ಆಧಾರವಾಗಿದ್ದು, ಅವುಗಳಿಂದಲೇ ಜೀವನ ಸಾಗುತ್ತಿದೆ. ಹೀಗಿರುವಾಗ ಇದ್ದಕ್ಕಿದ್ದಂತೆ ಕುರಿಗಳು ವಾಂತಿಬೇಧಿಯಿಂದ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅಣ್ಣೂರು ಗ್ರಾಮದಲ್ಲಿ ಮೂರು ದಿನಗಳಲ್ಲಿ ಸುಮಾರು 35ಕ್ಕೂ ಹೆಚ್ಚು ಕುರಿಗಳು ವಾಂತಿಬೇಧಿಯಿಂದ ಸಾವನ್ನಪ್ಪಿವೆ ಎನ್ನಲಾಗುತ್ತಿದ್ದು, ಇದು ಕುರಿ ಸಾಕಣೆದಾರರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
ಗ್ರಾಮದ ರೈತ ಮಹಿಳೆ ಕಾರ್ಕಹಳ್ಳಿತಾಯಮ್ಮ ಅವರಿಗೆ ಸೇರಿದ 19 ಕುರಿಗಳು ಕಳೆದ ಮೂರು ದಿನಗಳಿಂದ ಸಾವನಪ್ಪಿವೆ. ಗುಡಿಸಲಿನಲ್ಲಿ ವಾಸವಿರುವ ಮಹಿಳೆ ಮನೆ ಕಟ್ಟಲು ಅಡಿಪಾಯ ಹಾಕಿಸಿದ್ದು ಕುರಿಗಳನ್ನು ಮಾರಾಟ ಮಾಡಿ ದೀಪಾವಳಿಗೆ ಮನೆ ಕಟ್ಟಲು ಆರಂಭಿಸುವ ತೀರ್ಮಾನ ಮಾಡಿದ್ದರು ಈಗ ಕುರಿಗಳು ಸಾವನ್ನಪ್ಪಿರುವುದು ಅವರ ಕನಸಿಗೆ ತಣ್ಣೀರೆರೆಚಿದಂತಾಗಿದ್ದು, ಮುಂದೇನು ಮಾಡುವುದು ಎಂಬ ಚಿಂತೆ ಅವರದ್ದಾಗಿದೆ.
ಇನ್ನು ದೊಡ್ಡತಮ್ಮಯ್ಯರವರ 6, ಬೇಕರಿ ಪುಟ್ಟಮಾದುರವರ 5, ಚೌಡಯ್ಯರವರ 3, ಮಹದೇವು ಅವರ 3 ಕುರಿಗಳು ಕೂಡ ವಾಂತಿಬೇಧಿಯಿಂದ ಸಾವನ್ನಪ್ಪಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ದಿನಕ್ಕೆ ಐದಾರು ಕುರಿಗಳು ಸಾವನಪ್ಪುತ್ತಿದ್ದು ಈ ವ್ಯಾಪ್ತಿಯಲ್ಲಿ ಮಾರಣಾಂತಿಕ ಪಿಪಿಆರ್ (ಬೇಧಿ ರೋಗ) ಕಾಯಿಲೆ ಕಾಣಿಸಿ ಕೊಂಡಿರುದು ಭಯ ಹುಟ್ಟಿಸಿದೆ. ಆರೋಗ್ಯವಾಗಿದ್ದ ಇದ್ದಕ್ಕಿದ್ದಂತೆ ಅಸ್ವಸ್ಥವಾಗಿ ಸಾಯುವುದು ಮಾಮೂಲಿಯಾಗಿದೆ. ಅಸ್ವಸ್ಥಗೊಂಡ ಕುರಿಗಳಿಗೆ ಚಿಕಿತ್ಸೆ ನೀಡಿದ್ದರೂ ಪ್ರಯೋಜನಾವಾಗದೆ ಕೆಲವು ಕುರಿ ಮೃತಪಟ್ಟಿವೆ ಎನ್ನಲಾಗಿದೆ
ತಾಯಮ್ಮ ಎಂಬುವರ 3 ಕುರಿ ಸಾವನಪ್ಪಿದ್ದ ಬೆನ್ನಲ್ಲೇ ಸುಮಾರು 10 ಕುರಿಗಳಷ್ಟು ಅಸ್ವಸ್ಥಗೊಂಡಿದ್ದು, ಈ ರೀತಿಯ ಕುರಿಗಳ ಸಾವಿಗೆ ವೈರಲ್ ಜ್ವರವೇ ಕಾರಣ ಎಂಬುದು ಬಹಿರಂಗವಾಗಿದೆ. ಕೆಲವರು ಕುರಿಗಳು ಸಾವನಪ್ಪುತ್ತಿದಂತೆ ಪಶು ಇಲಾಖೆ ಮಾಹಿತಿ ನೀಡದೆ ಮಣ್ಣಿನಲ್ಲಿ ಹೂತಿದ್ದಾರೆ. ಕುರಿಗಳ ಸಾವಿನಿಂದ ಕಂಗಾಲಾಗಿರುವ ಗ್ರಾಮಸ್ಥರು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಸಂಬಂಧಿಸಿದವರು ಸ್ಥಳಕ್ಕೆ ತೆರಳಿ ಕುರಿಗಳಿಗೆ ಬಂದಿರುವ ರೋಗಕ್ಕೆ ಚಿಕಿತ್ಸೆ ನೀಡುವ ಕೆಲಸವನ್ನು ಮಾಡಬೇಕಾಗಿದೆ. ಇಲ್ಲದೆ ಹೋದರೆ ಈಗಾಗಲೇ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ತೊಂದರೆಗೆ ಸಿಲುಕಿಕೊಳ್ಳುವ ಸಾಧ್ಯತೆಯಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications