ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

|
Google Oneindia Kannada News

ಮಂಡ್ಯ, ಫೆಬ್ರವರಿ 15: ನಿನ್ನೆ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮನಾದ ಮಂಡ್ಯದ ಯೋಧ ಗುರು ಅವರ ಪತ್ನಿಗೆ ಸರ್ಕಾರಿ ನೌಕರಿಯ ಭರವಸೆಯನ್ನು ಸಚಿವ ಪುಟ್ಟರಾಜು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸರ್ಕಾರದ ಜೊತೆ ಮಾತನಾಡಿ ಯೋಧ ಗುರು ಅವರ ಪತ್ನಿ ಕಲಾವತಿ ಅವರಿಗೆ ಸರ್ಕಾರಿ ಉದ್ಯೋಗದ ಜೊತೆಗೆ ಆರ್ಥಿಕ ಸಹಾಯ ಕೊಡಿಸುವುದಾಗಿ ಅವರು ಹೇಳಿದ್ದಾರೆ. ಪುಟ್ಟರಾಜು ಅವರು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಪುಲ್ವಾಮದ ಉಗ್ರರ ದಾಳಿ : ಮಂಡ್ಯದ ಸಿಆರ್‌ಪಿಎಫ್ ಜವಾನ ಹುತಾತ್ಮಪುಲ್ವಾಮದ ಉಗ್ರರ ದಾಳಿ : ಮಂಡ್ಯದ ಸಿಆರ್‌ಪಿಎಫ್ ಜವಾನ ಹುತಾತ್ಮ

ಈಗಾಗಲೇ ಜಿಲ್ಲಾಧಿಕಾರಿಗಳು ಗುರು ಅವರ ಹುಟ್ಟೂರು ಮಂಡ್ಯದ ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮಕ್ಕೆ ತೆರಳಿ ಹುತಾತ್ಮ ಯೋಧನ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಮತ್ತು ಗುರು ಮೃತ ದೇಹವನ್ನು ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿದ್ದಾರೆ ಎಂದು ಪುಟ್ಟರಾಜು ಹೇಳಿದ್ದಾರೆ.

martyr soldier Gurus wife will get government job from state government

ಅವರು ನನಗೆ ಬೇಕಮ್ಮಾ, ಯೋಧನ ಮಡದಿಯ ಹೃದಯ ಹಿಂಡುವ ಆಕ್ರಂದನ ಅವರು ನನಗೆ ಬೇಕಮ್ಮಾ, ಯೋಧನ ಮಡದಿಯ ಹೃದಯ ಹಿಂಡುವ ಆಕ್ರಂದನ

ಯೋಧ ಗುರು ಅವರು ಕಲಾವತಿ ಅವರನ್ನು ಆರು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ರಜೆ ಹಾಕಿ ಬಂದಿದ್ದ ಅವರು ಫೆಬ್ರವರಿ 10 ರಂದು ಪುನಃ ಸೇವೆಗೆ ತೆರಳಿದ್ದರು. ಆದರೆ ಗುರು ಇನ್ನೆಂದೂ ಮರಳುವುದಿಲ್ಲವೆಂದು ಗೊತ್ತಾದ ಗುರು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

English summary
Martyr soldier Mandya's Guru wife Kalavathi will get government job and economic support from state government said Mandya in charge minister Puttaraju. Guru died in terror attack happened in Pulwana yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X