ಮೇಲುಕೋಟೆ ದೇವಾಲಯದ ಪ್ರಥಮ ಸ್ಥಾನಿಕ ವಿಧಿವಶ: ಮಧ್ಯಾಹ್ನದವರೆಗೂ ಭಕ್ತರಿಗಿಲ್ಲ ದರ್ಶನ
ಮಂಡ್ಯ, ಜೂನ್.16: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ (82) ವಿಧಿವಶರಾಗಿದ್ದಾರೆ. ಇಂದು ಜೂನ್ 16 ಭಾನುವಾರ ಕರಗಂ ನಾರಾಯಣ ಅಯ್ಯಂಗಾರ್ ಅವರು ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಇಂದು ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರು ಈ ವಿಚಾರವನ್ನು ಗಮನಿಸಬೇಕಾಗಿದೆ.
ಪ್ರಥಮ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯ ಬಾಗಿಲು ಮುಚ್ಚಿರಲಿದೆ. ಅವರ ಅಂತ್ಯಕ್ರಿಯೆ ಮುಗಿದು ಶುದ್ಧಿ ಬಳಿಕ ಮಧ್ಯಾಹ್ನ 12 ಗಂಟೆ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ಹಂಚಿಕೊಂಡಿದೆ.

ಇಂದು ಭಾನುವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ತೆರಳುವವರು ಮಧ್ಯಾಹ್ನ 12 ಗಂಟೆ ಬಳಿಕ ತೆರಳುವುದು ಉತ್ತಮವಾಗಿದೆ. ಸದ್ಯ ದೇವಾಲಯದ ಬಾಗಿಲು ಮುಚ್ಚಿದ್ದು, ಮಧ್ಯಾಹ್ನದ ನಂತರ ತೆರೆಯಲಿದೆ.
ಕರಗಂ ನಾರಾಯಣ ಅಯ್ಯಂಗಾರ್ ಅವರ ಚೆಲುವನಾರಾಯಣನ ಸೇವೆ
ಕರಗಂ ನಾರಾಯಣ ಅಯ್ಯಂಗಾರ್ ಅವರು ಚೆಲುವನಾರಾಯಣನ ಸೇವೆಗಾಗಿಯೇ ತಮ್ಮ ಇಡೀ ಜೀವನ ಮುಡಿಪಾಗಿಟ್ಟಿದ್ದರು. ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು ನಿವೃತ್ತಿ ಬಳಿಕ ದೇವಾಲಯದಲ್ಲಿ ಸ್ಥಾನಿಕರಾಗಿದ್ದರು. ಸುಧೀರ್ಘವಾಗಿ ಚೆಲುವನಾರಾಯಣನ ಸೇವೆಯನ್ನು ಭಕ್ತಿ-ನಿಷ್ಠೆಯಿಂದ ಮಾಡಿರುವ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತ್ಯಕ್ರಿಯೆಯನ್ನು ದೇವಾಲಯದ ಸಾಂಪ್ರದಾಯಿಕ ಮರ್ಯಾದೆಯೊಡನೆ ಮೇಲುಕೋಟೆಯಲ್ಲೇ ನಡೆಸಲು ನಿರ್ಧರಿಸಲಾಗಿದೆ.
ಸದ್ಯ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಭಕ್ತರು ಹಾಗೂ ಆಪ್ತರು ಅಂತಿಮ ದರ್ಶನ ಪಡೆದ ಬಳಿಕ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications