ಮೇಲುಕೋಟೆ ದೇವಾಲಯದ ಪ್ರಥಮ ಸ್ಥಾನಿಕ ವಿಧಿವಶ: ಮಧ್ಯಾಹ್ನದವರೆಗೂ ಭಕ್ತರಿಗಿಲ್ಲ ದರ್ಶನ
ಮಂಡ್ಯ, ಜೂನ್.16: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ (82) ವಿಧಿವಶರಾಗಿದ್ದಾರೆ. ಇಂದು ಜೂನ್ 16 ಭಾನುವಾರ ಕರಗಂ ನಾರಾಯಣ ಅಯ್ಯಂಗಾರ್ ಅವರು ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಇಂದು ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರು ಈ ವಿಚಾರವನ್ನು ಗಮನಿಸಬೇಕಾಗಿದೆ.
ಪ್ರಥಮ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯ ಬಾಗಿಲು ಮುಚ್ಚಿರಲಿದೆ. ಅವರ ಅಂತ್ಯಕ್ರಿಯೆ ಮುಗಿದು ಶುದ್ಧಿ ಬಳಿಕ ಮಧ್ಯಾಹ್ನ 12 ಗಂಟೆ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ಹಂಚಿಕೊಂಡಿದೆ.

ಇಂದು ಭಾನುವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ತೆರಳುವವರು ಮಧ್ಯಾಹ್ನ 12 ಗಂಟೆ ಬಳಿಕ ತೆರಳುವುದು ಉತ್ತಮವಾಗಿದೆ. ಸದ್ಯ ದೇವಾಲಯದ ಬಾಗಿಲು ಮುಚ್ಚಿದ್ದು, ಮಧ್ಯಾಹ್ನದ ನಂತರ ತೆರೆಯಲಿದೆ.
ಕರಗಂ ನಾರಾಯಣ ಅಯ್ಯಂಗಾರ್ ಅವರ ಚೆಲುವನಾರಾಯಣನ ಸೇವೆ
ಕರಗಂ ನಾರಾಯಣ ಅಯ್ಯಂಗಾರ್ ಅವರು ಚೆಲುವನಾರಾಯಣನ ಸೇವೆಗಾಗಿಯೇ ತಮ್ಮ ಇಡೀ ಜೀವನ ಮುಡಿಪಾಗಿಟ್ಟಿದ್ದರು. ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು ನಿವೃತ್ತಿ ಬಳಿಕ ದೇವಾಲಯದಲ್ಲಿ ಸ್ಥಾನಿಕರಾಗಿದ್ದರು. ಸುಧೀರ್ಘವಾಗಿ ಚೆಲುವನಾರಾಯಣನ ಸೇವೆಯನ್ನು ಭಕ್ತಿ-ನಿಷ್ಠೆಯಿಂದ ಮಾಡಿರುವ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತ್ಯಕ್ರಿಯೆಯನ್ನು ದೇವಾಲಯದ ಸಾಂಪ್ರದಾಯಿಕ ಮರ್ಯಾದೆಯೊಡನೆ ಮೇಲುಕೋಟೆಯಲ್ಲೇ ನಡೆಸಲು ನಿರ್ಧರಿಸಲಾಗಿದೆ.
ಸದ್ಯ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಭಕ್ತರು ಹಾಗೂ ಆಪ್ತರು ಅಂತಿಮ ದರ್ಶನ ಪಡೆದ ಬಳಿಕ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications