ಮೇಲುಕೋಟೆ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಆರಂಭ: ಏ.1 ರಂದು ಬ್ರಹ್ಮೋತ್ಸವ
ಮಂಡ್ಯ, ಮಾರ್ಚ್ 27: ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಸೋಮವಾರದಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, ಏಪ್ರಿಲ್1 ರಂದು ಶ್ರೀ ಚಲುವನಾರಾಯಣ ಸ್ವಾಮಿಗೆ ವೈರಮುಡಿ ಕಿರೀಟಧಾರಣೆ ನಡೆಯಲಿದೆ.
ಸೋಮವಾರ(ಮಾ.27) ಶ್ರೀ ವೈರಮುಡಿ ಬ್ರಹ್ಮೋತ್ಸವಕ್ಕೆ ಅಂಕುರಾರ್ಪಣ (ಮೃತ್ತಿಕಾ ಸಂಗ್ರಹಣೆ) ಯೊಂದಿಗೆ ಶ್ರೀಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಆರಂಭವಾಗಿದ್ದು, ಮಾ.28 ರಂದು ಕಲ್ಯಾಣೋತ್ಸವ -ಧಾರಾಮಹೋತ್ಸವ -ಅಧಿವಾಸನ- ರಕ್ಷಾ ಬಂಧನ - ಧ್ವಜ ಪ್ರತಿಷ್ಠೆ, ಮಾ.29 ರಂದು ಧ್ವಜಾರೋಹಣ- ಶ್ರೀ ರಾಮಾನುಜಾಚಾರ್ಯರಿಗೆ ಅಭಿಷೇಕ, ಭೇರಿತಾಡನ- ತಿರುಪ್ಪರೈ - ಹಂಸವಾಹನ -ಯಾಗಶಾಲಾ ಪ್ರವೇಶ, ಮಾ.30 ರಂದು ಶ್ರೀರಾಮನವಮಿ -ಶೇಷವಾಹನ ಪಡಿಯೇತ್ತ, ಮಾ.31 ರಂದು ನಾಗವಲ್ಲಿ ಮಹೋತ್ಸವ-ನರಾಂಧೋಳಿಕಾರೋಹಣ -ಚಂದ್ರಮಂಡಲ ವಾಹನ -ಪಡಿಯೇತ್ತ ನಡೆಯಲಿದೆ.

ಪ್ರತಿದಿನವೂ ಒಂದೊಂದು ಕಾರ್ಯಕ್ರಮ
ಏಪ್ರಿಲ್1 ರಂದು ಶ್ರೀ ವೈರಮುಡಿ ಕಿರೀಟಧಾರಣ ಮಹೋತ್ಸವ- ಪಡೆಯೇತ್ತ, ಏ.2 ರಂದುಪ್ರಹ್ಲಾದ ಪರಿಪಾಲನ- ಗರುಡವಾಹನ- ವಿಶೇಷ ಪಡಿಯೇತ್ತ, ಏ.3 ರಂದು ಗಜೇಂದ್ರ ಮೋಕ್ಷ -ಅನೆವಸನ್ತ-ಕುದುರೆ ವಾಹನ -ಆನೆ ವಾಹನ ವಿಶೇಷ ಪಡಿಯೇತ್ತ, ಏ.4ರಂದು - ಶ್ರೀ ಮನ್ಮಹಾರಥೋತ್ಸವ ಯಾತ್ರಾದಾನ, ರಥೋತ್ಸವ, ಶ್ರೀ ಚೆಲುವರಾಯಸ್ವಾಮಿ ಮತ್ತು ಶ್ರೀವರಾಮಾನುಜರಿಗೆ ಅಭಿಷೇಕ ಅಮ್ಮನವರ ಸನ್ನಧಿಯಲ್ಲಿ ಬಂಗಾರ ಪಲ್ಲಕ್ಕಿ ಉತ್ಸವ, ಏ.5 ರಂದು ಪಂಗುನ್ಯುತ್ತರಮ್ - ತೆಪ್ಪೋತ್ಸವ - ಡೋಲೋತ್ಸವ ಕುದುರೆ ವಾಹನ - ಕಳ್ಳರ ಸುಲಿಗೆ ಕಾರ್ಯಕ್ರಮ ನಡೆಯಲಿದೆ.
ಏ.6 ರಂದು ಶ್ರೀ ನಾರಾಯಣಸ್ವಾಮಿ ಜಯನ್ತಿ, ಸಂಧಾನ ಸೇವೆ - ಚೂರ್ಣಾಭಷೇಕ - ಅವಭೃಥ - ಪಟ್ಟಾಭಿಷೇಕ ಪುಷ್ಪಮಂಟಪಾರೋಹಣ - ಸಮರಭೂಪಾಲ ವಾಹನ - ಪಡಿಮಾಲೆ - ಪೂರ್ಣಾಹುತಿ, ಶಾತ್ತುಮೊರೈ, ಕುಂಭಪ್ರೋಕ್ಷಣೆ, ಏ.7 ರಂದು ಶ್ರೀ ನಾರಾಯಣ ಸ್ವಾಮಿಗೆ ಮಹಾಭಿಷೇಕ - ಪುಷ್ಪಯಾಗ - ಕತ್ತಲು ಪ್ರದಕ್ಷಿಣೆ - ಹನುಮಂತವಾಹನ - ಉದ್ಘಾಸನ ಪ್ರಬಂಧ, ಏ.8 ರಂದು ಶ್ರೀ ಅಮ್ಮನವರಿಗೆ ಶ್ರೀ ಯೋಗನರಸಿಂಹಸ್ವಾಮಿಗೆ ಮಹಾಭಿಷೇಕ- ಶೇರ್ತಿಸೇವೆ ಕೋಡೈ ತಿರುನಾಳ್ ಉತ್ಸವ ನಡೆಯಲಿದೆ.

ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ
ಉತ್ಸವದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕರ್ಗಳನ್ನು ಅಗತ್ಯತೆಗೆ ತಕ್ಕಂತೆ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಿರುವುದರಿಂದ ಟ್ಯಾಂಕರ್ ಖಾಲಿಯಾದ ನಂತರ ಮರುಪೂರ್ಣವಾಗುವ ರೀತಿ ನೋಡಿಕೊಳ್ಳಲಾಗಿದೆ. ಶೌಚಾಲಯ, ವಾಹನ ನಿಲುಗಡೆ, ವಯಸ್ಸಾದವರು ಹಾಗೂ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವಾಹನದ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜಮುಡಿ ಹಾಗೂ ವೈರಮುಡಿಯನ್ನು ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ತೆಗೆದುಕೊಂಡು ಹೋಗುವಾಗ ಮಾರ್ಗದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲಾ ಖಜಾನೆಯಿಂದ, ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಸ್ಥಾನ, ಇಂಡುವಾಳು, ತೂಬಿನಕೆರೆ, ಗಣಂಗೂರು, ಶೆಟ್ಟಿಹಳ್ಳಿ, ಕಿರಂಗೂರು ಬನ್ನಿಮಂಟಪ, ಕೂಡಲಕುಪ್ಪೆ ಗೇಟ್, ದರಸಗುಕುಪ್ಪೆ, ಪಾಂಡವಪುರ ರೈಲ್ವೆ ನಿಲ್ದಾಣ, ಕೆನ್ನಾಳು, ಪಾಂಡವಪುರ, ಹಿರೇಮರಳಿ ಗೇಟ್, ಬಣಘಟ್ಟ,ಟಿ.ಎಸ್.ಛತ್ರ, ಮಹದೇಶ್ವರ ಪುರ, ಬೆಳ್ಳಾಳೆ, ಜಕ್ಕನಹಳ್ಳಿ, ತಗಲಕೆರೆ ಹಾಗೂ ಮೇಲುಕೋಟೆ ತಲುಪಲಿದೆ.

ಏನಿದು ವೈರಮುಡಿ ಮಹೋತ್ಸವ
ವೈರಮುಡಿ ಎನ್ನುವುದು ವಜ್ರ ಖಚಿತ ಕಿರೀಟವಾಗಿದ್ದು, ಇದು ಶ್ರೀಮಾನ್ ನಾರಾಯಣನ ಕಿರೀಟವೆಂದೂ ದ್ವಾಪರಯುಗದಲ್ಲಿ ಕೃಷ್ಣನ ಮೂಲಕ ಚೆಲುವರಾಯನಿಗೆ ಗರುಡನಿಂದ ತೊಡಿಸಿದನೆಂಬ ನಂಬಿಕೆ ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠದಿಂದ ರಾಕ್ಷಸ ವಿರೋಚನ ಕದ್ದಿದ್ದ ನಾರಾಯಣನ ಕಿರೀಟವನ್ನು ಗರುಡ ರಾಕ್ಷಸನೊಂದಿಗೆ ಹೋರಾಡಿ ಮರಳಿ ತಂದು ಚೆಲುವರಾಯನಿಗೆ ಅರ್ಪಿಸಿದನೆಂಬುದು ಜನವಲಯದಲ್ಲಿರುವ ನಂಬಿಕೆಯಾಗಿದೆ. ಇದನ್ನು ಚೆಲುವರಾಯಸ್ವಾಮಿಗೆ ಧರಿಸುವ ಸಂದರ್ಭ ನಡೆಯುವ ಉತ್ಸವವೇ ವೈರಮುಡಿ ಬ್ರಹ್ಮೋತ್ಸವವಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications