ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ್ಞಾನೋದಯವಾಗಿದೆ, ಒಂದೇ ತಟ್ಟೆಯಲ್ಲಿ ಊಟ ಮಾಡುವ ಕಾಲ ಬಂದಿದೆ: ಜಿ.ಟಿ. ದೇವೇಗೌಡ

|
Google Oneindia Kannada News

Recommended Video

ಕಾಂಗ್ರೆಸ್-ಜೆಡಿಎಸ್ ನಾಯಕರ ಜಗಳದ ಬಗ್ಗೆ ಜಿ ಟಿ ದೇವೇಗೌಡ ಏನಂದ್ರು? | Oneindia Kannada

ಮಂಡ್ಯ, ಮೇ 14: ಇಂದಿನಿಂದ ಸಮ್ಮಿಶ್ರ ಸರ್ಕಾರದ ಮೈತ್ರಿಪಕ್ಷಗಳ ಮುಖಂಡರು ಪರಸ್ಪರ ವಾಕ್ಸಮರ ನಡೆಸುವುದನ್ನು ಸಂಪೂರ್ಣ ಬಂದ್ ಮಾಡಲಿದ್ದಾರೆ. ಹಿರಿಯ ಮುಖಂಡರು ಕುಳಿತು ಮಾತನಾಡಿದ್ದು, ಎಲ್ಲರಿಗೂ ಜ್ಞಾನೋದಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮಂಗಳವಾರ ಮಾತನಾಡಿದ ಅವರು, ಎರಡೂ ಪಕ್ಷಗಳು ಮುಖಂಡರು ಒಂದಾಗಿದ್ದಾರೆ. ಎಲ್ಲರೂ ಒಟ್ಟಿಗೆ ಕುಳಿತು ಒಂದೇ ತಟ್ಟೆಯಲ್ಲಿ ಊಟ ಮಾಡುವ ಸಮಯ ಬಂದಿದೆ ಎಂದರು.

ಜಿ,ಟಿ. ದೇವೇಗೌಡರು ಆ 'ಸತ್ಯ' ಹೇಳಬಾರದಿತ್ತು ಎಂದ ಸಿದ್ದರಾಮಯ್ಯ ಜಿ,ಟಿ. ದೇವೇಗೌಡರು ಆ 'ಸತ್ಯ' ಹೇಳಬಾರದಿತ್ತು ಎಂದ ಸಿದ್ದರಾಮಯ್ಯ

'ನಮ್ಮ ಪಕ್ಷಗಳ ನಾಯಕರು ಮಾತನಾಡಿದ್ದಾರೆ. ಈಗ ಅಸಮಾಧಾನ, ವಾಕ್ಸಮರ ಎಲ್ಲವೂ ಮುಗಿದ ಅಧ್ಯಾಯ. ಬೇಡ್ರಪ್ಪ, ನಾವೆಲ್ಲರೂ ಅಣ್ಣ ತಮ್ಮಂದಿರ ಹಾಗೆ ಒಂದೇ ತಟ್ಟೆಯಲ್ಲಿ ಊಟ ಮಾಡುವ ಎಂದರು.

Minister GT Devegowda in Mandya we were enlightened will stop war of words

ಸಣ್ಣಪುಟ್ಟ ತಪ್ಪುಗಳನ್ನು, ಗೊಂದಲಗಳನ್ನು ಕುಟುಂಬದ ಸದಸ್ಯರ ಹಾಗೆ ಸರಿಪಡಿಸಿಕೊಂಡು ಮುಂದೆ ಸಾಗಲು ನಿರ್ಧರಿಸಿದ್ದೇವೆ. ರಾಜ್ಯದ ಎಲ್ಲರಿಗೂ ನೆಮ್ಮದಿ ತರುವ ವಾತಾವರಣ ನಿರ್ಮಾಣವಾಗಿದೆ. ಮಾಧ್ಯಮಗಳಿಗೆ ಈ ರೀತಿ ಯಾವುದೇ ಹೇಳಿಕೆ ನೀಡುವುದು ಬೇಡ ಎಂದು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂದಿನ ನಾಲ್ಕು ವರ್ಷ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

ಫಲಿತಾಂಶ ಬರುವವರೆಗೆ ಏನೇ ಹೇಳಿಕೆ ಕೊಟ್ಟರೂ ವ್ಯರ್ಥ: ಜಿಟಿಡಿ ಫಲಿತಾಂಶ ಬರುವವರೆಗೆ ಏನೇ ಹೇಳಿಕೆ ಕೊಟ್ಟರೂ ವ್ಯರ್ಥ: ಜಿಟಿಡಿ

ಮೇ 23ರಂದು ಎಲ್ಲರೂ ದೇಶದ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಈ ಫಲಿತಾಂಶವು ರಾಜ್ಯ ರಾಜಕಾರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಆಶೀರ್ವಾದ ಇರುವ ತನಕ ಸರ್ಕಾರ ಸುಭದ್ರ : ಕುಮಾರಸ್ವಾಮಿಸಿದ್ದರಾಮಯ್ಯ ಆಶೀರ್ವಾದ ಇರುವ ತನಕ ಸರ್ಕಾರ ಸುಭದ್ರ : ಕುಮಾರಸ್ವಾಮಿ

ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಅದು ಬೀಳುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಮೇ 23ರ ಫಲಿತಾಂಶದ ಬಳಿಕವೂ ಸರ್ಕಾರ ಮುಂದುವರಿಯಲಿದೆ. ರಾಜ್ಯದಲ್ಲಿ ಈ ವರ್ಷ ಕೂಡ ಮಳೆ, ಬೆಳೆ ಚೆನ್ನಾಗಿ ಆಗಲಿದೆ. ಅದಕ್ಕಾಗಿ ನಿಮಿಷಾಂಬ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

English summary
Minister GT Devegowda said in Mandya, we, the alliance party leaders enlightened and will stop war of words. The time has come to have food in a single plate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X