ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಜಿಲ್ಲೆಗೆ ದಿಢೀರ್ ಭೇಟಿ ನೀಡಿದ ಸಚಿವ ನಾರಾಯಣ ಗೌಡ

|
Google Oneindia Kannada News

ಮಂಡ್ಯ, ಮೇ 21: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಇಂದು ಮಂಡ್ಯಕ್ಕೆ ದಿಢೀರ್ ಭೇಟಿ ನೀಡಿ, ಕೊರೊನಾ ವೈರಸ್ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ಸ್ಥಳದ ವ್ಯವಸ್ಥೆಯನ್ನು ಪರಿಶೀಲಿಸಿದರು.

ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೇ ಭೇಟಿ ನೀಡಿ ವೀಕ್ಷಿಸಿದರು.

'ಸ್ವಂತ ತಂಗಿ ಮಗನನ್ನೇ ನಾನು ಊರಿಗೆ ಕರೆಸಿಲ್ಲ' ಸಚಿವರ ಹೇಳಿಕೆ'ಸ್ವಂತ ತಂಗಿ ಮಗನನ್ನೇ ನಾನು ಊರಿಗೆ ಕರೆಸಿಲ್ಲ' ಸಚಿವರ ಹೇಳಿಕೆ

ಕೆ.ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಚಿಕ್ಕ ಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು ಎಂದು ತಿಳಿಸಿದರು.

Minister Narayana Gowda Reviewed The Quarantine System In KR Pete

ಕೆಲವೆಡೆ ಸರಿಯಾದ ವ್ಯವಸ್ಥೆ ಇಲ್ಲ ಎಂಬ ಆರೋಪ ಬಂದಿದೆ. ಅಂತಹ ಆರೋಪ ಮತ್ತೆ ಬರಕೂಡದು. ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ದೂರು ಬಂದರೆ ಸುಮ್ಮನಿರಲ್ಲ ಎಂದು ಸಚಿವ ನಾರಾಯಣ ಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಗೆ ಬರಲಿದ್ದಾರೆ ಸಾವಿರಾರು ಮಂದಿ; ಮಂಡ್ಯಕ್ಕೆ ಮುಂದಿರುವುದೇ ನಿಜವಾದ ಸವಾಲ್ಜಿಲ್ಲೆಗೆ ಬರಲಿದ್ದಾರೆ ಸಾವಿರಾರು ಮಂದಿ; ಮಂಡ್ಯಕ್ಕೆ ಮುಂದಿರುವುದೇ ನಿಜವಾದ ಸವಾಲ್

Minister Narayana Gowda Reviewed The Quarantine System In KR Pete

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಕ್ರಮವಹಿಸಲು ಮೊನ್ನೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ನಿನ್ನೆ ಆದಿಚುಂಚನಗಿರಿ ಶ್ರೀಗಳ ಸಾನ್ನಿಧ್ಯದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿದ್ದರು. ಇಂದು ಜಿಲ್ಲೆಗೆ ಭೇಟಿ ನೀಡಿ ಕ್ವಾರಂಟೈನ್ ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.

English summary
Mandya District In Charge Minister Narayana Gowda made a quick visit to Mandya District today and reviewed the location of the quarantine for coronavirus infected people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X