ಸಿಎಂ ಗ್ರಾಮವಾಸ್ತವ್ಯದಿಂದ ಸಾಲಗಾರನಾದ ಆರೋಪ: ಸಚಿವ ಪುಟ್ಟರಾಜು ಭೇಟಿ
Recommended Video
ಮಂಡ್ಯ, ಜೂನ್ 13: ಸಿ.ಎಂ.ಗ್ರಾಮ ವಾಸ್ತವ್ಯದಿಂದ ಮನೆ ಮಾಲೀಕ ಸಾಲಗಾರನಾದ ವರದಿ ಬಿತ್ತರವಾದ ಹಿನ್ನೆಲೆ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಪುಟ್ಟರಾಜು ಮಂಡ್ಯದ ನವಿಲುಮಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಪುಟ್ಟರಾಜು, ಮನೆಯ ಮಾಲೀಕ ಮಾಯೀಗೌಡನನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ಅಲ್ಲದೇ ಮನೆಯ ಮಾಲೀಕನಿಗೆ ಭರವಸೆ ನೀಡಿ ಗ್ರಾಮಸ್ಥರಿಂದ ಸಮಸ್ಯೆ ಅಹವಾಲು ಸ್ವೀಕಾರ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಗ್ರಾಮಕ್ಕೆ ಭೇಟಿ ನೀಡಿದ ಬಳಿಕ ಸಿ.ಎಂ. ಕುಮಾರಸ್ವಾಮಿಯಿಂದ ಸಾಲ ಆಗಿರುವ ಆರೋಪ ಒಪ್ಪುವುದಿಲ್ಲ. ತಾಂತ್ರಿಕ ಕಾರಣದಿಂದ ಸ್ವಲ್ಪ ವ್ಯತ್ಯಾಸವಾಗಿದೆ ಅಷ್ಟೆ. ಸಿ.ಎಂ ಈ ಗ್ರಾಮಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.

2006ರಲ್ಲಿ ಮಾಯೀಗೌಡರ ಮನೆಯಲ್ಲಿ ಸಿಎಂ ವಾಸ್ತವ್ಯ ಹೂಡುವ ಸಲುವಾಗಿ ಅಲ್ಲಿನ ರಿಪೇರಿ ಕಾಮಗಾರಿಗಾಗಿ 1.20 ಲಕ್ಷ ಸಾಲ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಅಧಿಕಾರಿಗಳು ಮನೆ ದುರಸ್ತಿ ಮಾಡಿಸಿದ್ದ ಹಣ ನೀಡಿಲ್ಲವೆಂದು ಮನೆಯ ಮಾಲೀಕ ಆರೋಪ ಮಾಡಿದ್ದರು. ಈ ಸುದ್ದಿ ಮಾಧ್ಯಮದಲ್ಲಿ ಬಿತ್ತರವಾಗುತ್ತಿದ್ದಂತೆ ಸಚಿವರು ಭೇಟಿ ನೀಡಿ ಆತನಿಗೆ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications