ಮಹಾಪೂಜೆ ಮುಗಿಯುತ್ತಿದ್ದಂತೆಯೇ ಭಕ್ತರಿಗೆ ನಿಜರೂಪ ದರ್ಶನ ನೀಡಿದ ಹೊಳೆ ಆಂಜನೇಯ
Recommended Video

ಮಂಡ್ಯ, ನ 14: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ (ನ 13) ಅಚ್ಚರಿಯೊಂದು ನಡೆದಿದೆ.
ಶಿಂಷಾ ನದಿ ದಡದಲ್ಲಿರುವ ಶ್ರೀಪಾದರಾಜರು ಮತ್ತು ಶ್ರೀವ್ಯಾಸರಾಜರು ಪ್ರತಿಷ್ಠಾಪಿಸಿರುವ ಈ ಆಂಜನೇಯಸ್ವಾಮಿ ದೇವಾಲಯಕ್ಕೆ, ಉಡುಪಿ ಅಷ್ಟಮಠಗಳಲ್ಲೊಂದಾದ ಸೋದೆ ಮಠದ ವಿಶ್ವವಲ್ಲಭ ಶ್ರೀಗಳು ಧಾರ್ಮಿಕ ಸಂಚಾರ ಪರ್ಯಟನೆಯ ಭಾಗವಾಗಿ ದೇವಾಲಯಕ್ಕೆ ಆಗಮಿಸಿದ್ದರು.
ಆಂಜನೇಯನಿಗೆ ಅಲಂಕಾರ ಮಾಡಿದ ನಂತರ, ದೇವರ ಮುಖಭಾಗಕ್ಕೆ ಬೆಳ್ಳಿಯ ಆಭರಣವನ್ನು ತೊಡಿಸಲಾಗಿತ್ತು. ಸೋದೆ ಶ್ರೀಗಳ ಪೂಜೆ ಮುಗಿಯುತ್ತಿದ್ದಂತೆಯೇ, ಬೆಳ್ಳಿಯ ಆಭರಣ ಎಡಭಾಗಕ್ಕೆ ಜಾರಿ, ಮೂಲಸ್ವರೂಪದ ದರ್ಶನವಾಗಿದೆ. (ವಿಡಿಯೋ ಕೊನೆಯವರೆಗೆ ನೋಡಿ)

ಮೂಜೆ ಮುಗಿಯುತ್ತಿದ್ದಂತೆಯೇ ಆಂಜನೇಯ ಸ್ವಾಮಿಯ ನಿಜ ದರ್ಶನ ಕಂಡು ಇಡೀ ಭಕ್ತ ಸಮೂಹವೇ ಪುಳಕಿತವಾಗಿದೆ. ಭಾವೀ ಸಮೀರ ಶ್ರೀ ವಾದಿರಾಜ ಗುರು ಪರಂಪರೆಯ ಯತಿಗಳಾದ ವಿಶ್ವವಲ್ಲಭ ಶ್ರೀಗಳ ಪೂಜೆಗೆ ಆಂಜನೇಯ ನೀಡಿದ ದರ್ಶನವಿದು ಎನ್ನುವುದು ಭಕ್ತವೃಂದದ ಅಂಬೋಣ.
ಹೊಳೆ ಆಂಜನೇಯಸ್ವಾಮಿಯ ಮೂಲ ಮೂರ್ತಿಯ ಎರಡು ಬೆರಳುಗಳು ಉದ್ದವಾಗಿ ಬೆಳೆಯುತ್ತಲೇ ಇದೆ. ಇದು ಮಧ್ವಾಚಾರ್ಯರ ದ್ವೈತ ಸಿದ್ದಾಂತವನ್ನು ಪ್ರತಿಪಾದಿಸುತ್ತದೆ ಎನ್ನುವುದು ಪ್ರತೀತಿ.

ಈ ಸ್ಥಳದ ವಿಶೇಷವೇನಂದರೆ, ಇಲ್ಲಿಗೆ ಬರುವ ಭಕ್ತರು ಒಂದು ರೂಪಾಯಿ ನಾಣ್ಯವನ್ನು ಹಿಡಿದುಕೊಂಡು ಸಂಕಲ್ಪ ಮಾಡಿ, ಅರ್ಚಕರ ಕೈಯಲ್ಲಿ ಕೊಟ್ಟರೆ, ಅವರು ಅದನ್ನು ದೇವರ ಪಾದಕ್ಕೆ ಸಮರ್ಪಿಸಿ, ಪೂಜೆ ಸಲ್ಲಿಸುತ್ತಾರೆ. ಹೀಗೆ ಮಾಡಿದರೆ, ಮದುವೆಗೆ ಇರುವ ಅಡ್ಡಿ, ಸಂತಾನಭಾಗ್ಯ, ಹಣಕಾಸಿನ ವ್ಯಾಜ್ಯಗಳು ಪರಿಹಾರವಾಗುತ್ತದೆ ಎನ್ನುವುದು ನಂಬಿಕೆ.
ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನ, ಮದ್ದೂರು ರೈಲ್ವೇ ನಿಲ್ದಾಣದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ಈ ದೇವಸ್ಥಾನ, ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಾಣವಾಗಿದ್ದು ಎನ್ನುವ ಮಾಹಿತಿಯಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications