ಮಹಾಪೂಜೆ ಮುಗಿಯುತ್ತಿದ್ದಂತೆಯೇ ಭಕ್ತರಿಗೆ ನಿಜರೂಪ ದರ್ಶನ ನೀಡಿದ ಹೊಳೆ ಆಂಜನೇಯ
Recommended Video

ಮಂಡ್ಯ, ನ 14: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ (ನ 13) ಅಚ್ಚರಿಯೊಂದು ನಡೆದಿದೆ.
ಶಿಂಷಾ ನದಿ ದಡದಲ್ಲಿರುವ ಶ್ರೀಪಾದರಾಜರು ಮತ್ತು ಶ್ರೀವ್ಯಾಸರಾಜರು ಪ್ರತಿಷ್ಠಾಪಿಸಿರುವ ಈ ಆಂಜನೇಯಸ್ವಾಮಿ ದೇವಾಲಯಕ್ಕೆ, ಉಡುಪಿ ಅಷ್ಟಮಠಗಳಲ್ಲೊಂದಾದ ಸೋದೆ ಮಠದ ವಿಶ್ವವಲ್ಲಭ ಶ್ರೀಗಳು ಧಾರ್ಮಿಕ ಸಂಚಾರ ಪರ್ಯಟನೆಯ ಭಾಗವಾಗಿ ದೇವಾಲಯಕ್ಕೆ ಆಗಮಿಸಿದ್ದರು.
ಆಂಜನೇಯನಿಗೆ ಅಲಂಕಾರ ಮಾಡಿದ ನಂತರ, ದೇವರ ಮುಖಭಾಗಕ್ಕೆ ಬೆಳ್ಳಿಯ ಆಭರಣವನ್ನು ತೊಡಿಸಲಾಗಿತ್ತು. ಸೋದೆ ಶ್ರೀಗಳ ಪೂಜೆ ಮುಗಿಯುತ್ತಿದ್ದಂತೆಯೇ, ಬೆಳ್ಳಿಯ ಆಭರಣ ಎಡಭಾಗಕ್ಕೆ ಜಾರಿ, ಮೂಲಸ್ವರೂಪದ ದರ್ಶನವಾಗಿದೆ. (ವಿಡಿಯೋ ಕೊನೆಯವರೆಗೆ ನೋಡಿ)

ಮೂಜೆ ಮುಗಿಯುತ್ತಿದ್ದಂತೆಯೇ ಆಂಜನೇಯ ಸ್ವಾಮಿಯ ನಿಜ ದರ್ಶನ ಕಂಡು ಇಡೀ ಭಕ್ತ ಸಮೂಹವೇ ಪುಳಕಿತವಾಗಿದೆ. ಭಾವೀ ಸಮೀರ ಶ್ರೀ ವಾದಿರಾಜ ಗುರು ಪರಂಪರೆಯ ಯತಿಗಳಾದ ವಿಶ್ವವಲ್ಲಭ ಶ್ರೀಗಳ ಪೂಜೆಗೆ ಆಂಜನೇಯ ನೀಡಿದ ದರ್ಶನವಿದು ಎನ್ನುವುದು ಭಕ್ತವೃಂದದ ಅಂಬೋಣ.
ಹೊಳೆ ಆಂಜನೇಯಸ್ವಾಮಿಯ ಮೂಲ ಮೂರ್ತಿಯ ಎರಡು ಬೆರಳುಗಳು ಉದ್ದವಾಗಿ ಬೆಳೆಯುತ್ತಲೇ ಇದೆ. ಇದು ಮಧ್ವಾಚಾರ್ಯರ ದ್ವೈತ ಸಿದ್ದಾಂತವನ್ನು ಪ್ರತಿಪಾದಿಸುತ್ತದೆ ಎನ್ನುವುದು ಪ್ರತೀತಿ.

ಈ ಸ್ಥಳದ ವಿಶೇಷವೇನಂದರೆ, ಇಲ್ಲಿಗೆ ಬರುವ ಭಕ್ತರು ಒಂದು ರೂಪಾಯಿ ನಾಣ್ಯವನ್ನು ಹಿಡಿದುಕೊಂಡು ಸಂಕಲ್ಪ ಮಾಡಿ, ಅರ್ಚಕರ ಕೈಯಲ್ಲಿ ಕೊಟ್ಟರೆ, ಅವರು ಅದನ್ನು ದೇವರ ಪಾದಕ್ಕೆ ಸಮರ್ಪಿಸಿ, ಪೂಜೆ ಸಲ್ಲಿಸುತ್ತಾರೆ. ಹೀಗೆ ಮಾಡಿದರೆ, ಮದುವೆಗೆ ಇರುವ ಅಡ್ಡಿ, ಸಂತಾನಭಾಗ್ಯ, ಹಣಕಾಸಿನ ವ್ಯಾಜ್ಯಗಳು ಪರಿಹಾರವಾಗುತ್ತದೆ ಎನ್ನುವುದು ನಂಬಿಕೆ.
ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನ, ಮದ್ದೂರು ರೈಲ್ವೇ ನಿಲ್ದಾಣದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ಈ ದೇವಸ್ಥಾನ, ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಾಣವಾಗಿದ್ದು ಎನ್ನುವ ಮಾಹಿತಿಯಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications