ಅಡಿಕೆ & ತೆಂಗಿನ ತೋಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಮಂಡ್ಯ: ತೆಂಗು, ಬಾಳೆ ಮತ್ತು ಅಡಿಕೆ ಮರಗಳಿಂದ ಕೂಡಿದ್ದ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಜಮೀನಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ಬೆಳೆದು ನಿಂತಿದ್ದ ಗಿಡ ಮರಗಳು, ಹನಿ ನೀರಾವರಿ ಪೈಪ್ಗಳು ಸುಟ್ಟು ಭಸ್ಮವಾಗಿ ಲಕ್ಷಾಂತರ ಮೌಲ್ಯದ ಹಾನಿಯಾಗಿದೆ. ಶನಿವಾರ ಮಧ್ಯಾಹ್ನ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಗ್ರಾಮದ ಹೊರವಲಯದ 1ಕಿ.ಮೀ. ದೂರದಲ್ಲಿರುವ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೆಲವೇ ಸಮಯದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡಿದೆ.
ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.
ತಮಗಿರುವ ಒಂದೂ ಮುಕ್ಕಾಲು ಎಕರೆ ಕೃಷಿ ಜಮೀನಿನಲ್ಲಿ 100 ತೆಂಗಿನ ಮರಗಳಿವೆ. ಇದಲ್ಲದೆ 1ಸಾವಿರ ಬಾಳೆ ಗಿಡ ಹಾಗೂ 200 ಅಡಿಕೆ ಮರಗಳನ್ನು ಬೆಳೆಸಿದ್ದೆ. ಬೇಸಾಯಕ್ಕೆಂದು 2.5 ಲಕ್ಷ ರೂ. ಖರ್ಚು ಮಾಡಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರಕರಣ ದಾಖಲು
ಬರಗಾಲದ ನಡುವೆಯೂ ಬೋರ್ವೆಲ್ನಲ್ಲಿ ನೀರಿನ ಕೊರತೆ ಇರಲಿಲ್ಲ. ಪ್ರತಿದಿನ ಹನಿ ನೀರಾವರಿ ಪದ್ಧತಿ ಮೂಲಕ ನೀರು ಹಾಯಿಸುತ್ತಿದ್ದರಿಂದ ಗಿಡ ಮತ್ತು ಮರಗಳು ಕೂಡ ಚೆನ್ನಾಗಿ ಬೆಳೆಯುತ್ತಿದ್ದವು. ಉಳುಮೆ ಮಾಡುವ ಬದಲು ಕಳೆ ಸಹಿತ ಗಿಡಗಳನ್ನು ಭೂಮಿಯಲ್ಲಿಯೇ ಕೊಳೆಸಿ ಗೊಬ್ಬರ ಮಾಡುತ್ತಿದ್ದೆ. ಶನಿವಾರ ಮಧ್ಯಾಹ್ನ ಯಾರೋ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಹಾಕಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಕೃಷಿಯಲ್ಲಿ ಹೊಸ ವಿಧಾನ ಅಳವಡಿಸಿಕೊಂಡಿದ್ದ ನಾನು ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಗೆ ತೆರಳಿ ರೈತರಿಗೆ ಸೂಕ್ತ ಸಲಹೆ ನೀಡುತ್ತಿದ್ದೆ. ನಮ್ಮ ಜಮೀನಿಗೆ ಬಂದವರಿಗೂ ಅಗತ್ಯ ಮಾಹಿತಿ ಕೊಡುತ್ತಿದ್ದೆ. ನಮ್ಮ ಪಾಡಿಗೆ ಕೃಷಿ ಮಾಡಿಕೊಂಡು ನೆಮ್ಮದಿ ಜೀವನ ಕಟ್ಟಿಕೊಂಡಿರುವ ನಮ್ಮ ಕುಟುಂಬಕ್ಕೆ ಈ ಬೆಂಕಿ ಅವಘಡದಿಂದ ದಿಕ್ಕು ತೋಚದಂತಾಗಿದೆ ಎಂದಿದ್ದಾರೆ.
ನಮ್ಮ ಮೇಲೆ ಯಾರಿಗೆ ದ್ವೇಷವಿದೆಯೋ ಗೊತ್ತಿಲ್ಲ. ಕಳೆದ ವರ್ಷವೂ ಇದೇ ರೀತಿ ಬೆಂಕಿ ಹಾಕಿದ್ದರು. ಆದರೆ ತಕ್ಷಣ ಎಚ್ಚೆತ್ತುಕೊಂಡಿದ್ದರಿಂದ ಹೆಚ್ಚು ಹಾನಿಯಾಗಿರಲಿಲ್ಲ. ಈಗ ಎಲ್ಲವೂ ನಾಶವಾಗಿರುವುದೆ. ಕಿಡಿಗೇಡಿಗಳು ನಮ್ಮ ತೋಟಕ್ಕೆ ಬೆಂಕಿ ಹಾಕಿರುವ ಕುರಿತು ಭಾನುವಾರ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications