ಮಳೆಯಿಂದ ಮಂಡ್ಯ ಜಿಲ್ಲೆಯಲ್ಲಿ 750 ಕೋಟಿ ರೂ. ಹಾನಿ, ಹಂತ ಹಂತವಾಗಿ ಪರಿಹಾರ
ಮಂಡ್ಯ, ಸೆಪ್ಟೆಂಬರ್ 5: ಪ್ರಸತ್ತ ಮುಂಗಾರು ಅವಧಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗು ಪ್ರವಾಹ ಪರಿಸ್ಥಿತಿಗಳಿಂದ ಉಂಟಾದ ಹಾನಿಗೆ ಹಂತ ಹಂತವಾಗಿ ಪರಿಹಾರ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಆಡಳಿತ ಅಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಯರಾಮ್ ರಾಯಪುರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಗಳಿಂದ ಉಂಟಾದ ಹಾನಿ ಮತ್ತು ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಅಧಿಕಾರಿಗಳ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಳೆಯಿಂದ ಮಂಡ್ಯ ತಾಲೂಕು ಮತ್ತು ನಾಗಮಂಗಲ ತಾಲೂಕಿನಲ್ಲಿ ಇಬ್ಬರು ಸಾವನ್ನಪ್ಪಿದ್ದು ಅವರಿಗೆ 10 ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಭಾರಿ ಮಳೆಯಿಂದ 42 ಮನೆಗಳು ಸಂಪೂರ್ಣ, 159 ಮನೆಗಳು ತೀವ್ರ ಹಾಗೂ 707 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು ಈ ಎಲ್ಲಾ ಮನೆಗಳಿಗೆ 5,44,65,100 ರು., 8 ದೊಡ್ಡ ಜಾನುವಾರುಗಳು, 46 ಸಣ್ಣ ಜಾನುವಾರುಗಳು, 4200 ಕೋಳಿಗಳು ಸಾವನ್ನಪ್ಪಿರುವುದಕ್ಕೆ 3,88,000 ರು. ಪರಿಹಾರ ವಿತರಿಸಲಾಗಿದೆ ಎಂದು ವಿವರಿಸಿದರು.

750 ಕೋಟಿ ರು.ಗಳಷ್ಟು ಹಾನಿ
ಜಿಲ್ಲೆಯಲ್ಲಿ ಮಳೆಯಿಂದಾಗಿ ಸುಮಾರು 750 ಕೋಟಿ ರು.ಗಳಷ್ಟು ಹಾನಿಯಾಗಿದ್ದು ಸರಕಾರ ಹಂತ ಹಂತವಾಗಿ ಪರಿಹಾರ ಬಿಡುಗಡೆ ಮಾಡುತ್ತಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಲ್ಲಿ 19 ಕೋಟಿ ರೂ ಹಣ ಇದ್ದು ಹಾನಿಗೆ ಅನುಗುಣವಾಗಿ ಇಲಾಖಾವಾರು ಸರಕಾರ ಪರಿಹಾರ ಹಣ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.
ಕೆ.ಆರ್. ಪೇಟೆ ತಾಲ್ಲೂಕಿನ ಅಘಲಯ, ದೊಡ್ಡಕ್ಯಾತನಹಳ್ಳಿ ಕೆರೆ, ಮಾವಿನ ಕೊಪ್ಪಲು ಕೆರೆ ಹಾಗೂ ಲೋಕನಹಳ್ಳಿ ಕೆರೆಗಳು ಭಾಗಶಃ ಹಾನಿಗೊಳಗಾಗಿವೆ. ಈ ಕೆರೆಗಳ ವೀಕ್ಷಣೆ ನಡೆಸಲಾಗಿದ್ದು ಕೆರೆಗಳ ಕೋಡಿಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡುವ ಬದಲು ಶಾಶ್ವತ ಪರಿಹಾರ ದೊರಕಿಸುವ ನೆಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮಳೆಯಿಂದ ಲೋಕೋಪಯೋಗಿ ಇಲಾಖೆ ರಸ್ತೆಗಳು, ಗ್ರಾಮೀಣ ರಸ್ತೆಗಳು, ಕಿರು ಸೇತುವೆಗಳು ಸೇರಿದಂತೆ ನಾಲೆಗಳಿಗೂ ಹಾನಿ ಉಂಟಾಗಿದೆ. ಇವೆಲ್ಲವನ್ನೂ ಮುಂದಿನ ಜನವರಿ ತಿಂಗಳವರೆಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮೊದಲಿನ ಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದರು.
ಶಾಲೆ-ಅಂಗನವಾಡಿ ದುರಸ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 55.6 ಲಕ್ಷ
ಪ್ರವಾಹ ಹಾಗೂ ಮಳೆಯಿಂದಾಗಿ ಶಾಲೆಗಳ ದುರಸ್ತಿಗೆ 46 ಲಕ್ಷ ರೂ., ಅಂಗನವಾಡಿ ಕೇಂದ್ರಕ್ಕೆ 2 ಲಕ್ಷ ರೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 55.6 ಲಕ್ಷ ರೂ. ಅನುದಾನ ಬಿಡುಗಡೆಗೆ ಸರಕಾರ ಅನುಮೋದನೆ ನೀಡಿದೆ. ಪ್ರತಿ ಶಾಲೆಗಳನ್ನು ಎರಡರಿಂದ ಮೂರು ಹೆಚ್ಚುವರಿ ಕೊಠಡಿ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು ನಿರ್ಧರಿಸಲಾಗಿದ್ದು, ಶೌಚಾಲಯ ನಿರ್ಮಾಣಕ್ಕೆ 2.10 ಕೋಟಿ ರೂ ಹಾಗೂ ಕೊಠಡಿಗಳ ನಿರ್ಮಾಣಕ್ಕೆ 3 ರಿಂದ 4 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications