"ಧಾರವಾಡ ಪೇಡಾ, ಮೈಸೂರು ಪಾಕ್ನಂತೆ ಮಂಡ್ಯದ ಬೆಲ್ಲವೂ ಫೇಮಸ್ ಆಗಬೇಕು''
ಮಂಡ್ಯ, ಜನವರಿ 29: ಮಂಡ್ಯ ಜಿಲ್ಲೆಯ ಬೆಲ್ಲಕ್ಕೆ ಬ್ರ್ಯಾಂಡ್ ರೂಪ ನೀಡುವಲ್ಲಿ ನಾವು ಸೋತಿದ್ದೇವೆ. ಧಾರವಾಡ ಪೇಡಾ, ಮೈಸೂರು ಪಾಕ್ನಂತೆ ಮಂಡ್ಯದ ಬೆಲ್ಲ ಎಂಬ ಬ್ರ್ಯಾಂಡ್ ರೂಪ ಸಿಗಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
ಬ್ರ್ಯಾಂಡ್ ರೂಪ ಸಿಗಬೇಕಾದರೆ ಅಂತಾರಾಷ್ಟ್ರೀಯ ಗುಣಮಟ್ಟದ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಬೇಕು ಸಂಸದೆ ಸುಮಲತಾ ಅಂಬರೀಶ್ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆ ಅಡಿ ಮಂಡ್ಯ ಜಿಲ್ಲೆಯಲ್ಲಿ ಆಲೆಮನೆಗಳ ಪುನಶ್ಚೇತನದೊಂದಿಗೆ ಮಂಡ್ಯ ಬೆಲ್ಲಕ್ಕೆ ಉತ್ತೇಜನ ನೀಡುವ ಅಗತ್ಯವಿದೆ ಎಂದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಮಂಡ್ಯ ಜಿಲ್ಲೆಯ ಆಲೆಮನೆಗಳ ಪುನಶ್ಚೇತನ ಕೈಗೊಳ್ಳುವ ಸಂಬಂಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದರು.

ಈ ವೇಳೆ ಸಣ್ಣ ಲಾಭಗಳ ಬಗ್ಗೆ ಯೋಚಿಸುವುದರಿಂದ ಪ್ರಯೋಜನವಿಲ್ಲ. ಬ್ರಾಂಡಿಂಗ್, ಪ್ರಮೋಟಿಂಗ್, ಮಾರ್ಕೆಟಿಂಗ್ನೊಂದಿಗೆ ರೈತರಿಗೆ ದೊಡ್ಡಮಟ್ಟದ ಲಾಭ ದೊರಕುವಂತೆ ಮಾಡಬೇಕು.
ಯೂರೋಪ್ ದೇಶಗಳಲ್ಲಿ 1 ಕೆಜಿ ಬೆಲ್ಲಕ್ಕೆ 1 ಸಾವಿರದವರೆಗೂ ಬೆಲೆ ಇದೆ. ನಮ್ಮ ಜಿಲ್ಲೆಯಲ್ಲಿ ಹೆಚ್ಚಾಗಿ ಉತ್ಪಾದಿಸುವ ಬೆಲ್ಲಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧಿಸುವ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.
ಈಗಾಗಲೇ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆಯ ಯೋಜನೆಯಲ್ಲಿ "ಒಂದು ಜಿಲ್ಲೆ ಒಂದು ಉತ್ಪನ್ನ'ದಡಿ ಮಂಡ್ಯದ ಬೆಲ್ಲಕ್ಕೆ ಮಾನ್ಯತೆ ನೀಡಲಾಗಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳ ಹೊಡೆತದ ನಡುವೆಯೂ ಕಬ್ಬು ಬೆಳೆದು ಆಲೆಮನೆಯಲ್ಲಿ ಬೆಲ್ಲ ತಯಾರಿಸುತ್ತಾ ಬಂದಿರುವ ರೈತರಲ್ಲಿ ಭರವಸೆಯ ಬೆಳಕು ಮೂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications