ಮಂಡ್ಯ; ಆನ್ಲೈನ್ನಲ್ಲಿ ಮೈಶುಗರ್ ವಾರ್ಷಿಕ ಸಭೆ, ರೈತರ ಆಕ್ರೋಶ
ಮಂಡ್ಯ, ಅಕ್ಟೋಬರ್, 31: ಮೈಶುಗರ್ ಕಾರ್ಖಾನೆಯಲ್ಲಿ ವಾರ್ಷಿಕ ಮಹಾಸಭೆಯನ್ನು ಆನ್ಲೈನ್ನಲ್ಲಿ ನಡೆಸಿ ಷೇರುದಾರರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ನಡೆದಿದೆ ಎಂದು ಮಂಡ್ಯದಲ್ಲಿ ರೈತ ಮುಖಂಡರು, ಷೇರುದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಹಿತರಕ್ಷಣಾ ಸಮಿತಿ ಮುಖಂಡರು, ಕಬ್ಬು ಬೆಳೆಗಾರರು, ಷೇರುದಾರರು ಸೇರಿದಂತೆ ಕೆಲ ಸಂಘಟನೆ ಮುಖಂಡರು ಸಭೆ ಸೇರಿ ಚರ್ಚಿಸಿದರು. ಸಭೆಯಲ್ಲಿ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಮಾತನಾಡಿದ್ದು, ಮೈಶುಗರ್ನಲ್ಲಿ 2015-16ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಒಟ್ಟು 7 ಆಡಿಟ್ ವರದಿಗಳು ಬಾಕಿ ಉಳಿದಿದೆ. ಕಳೆದ ಬಾರಿ ಕೋವಿಡ್ ನೆಪವೊಡ್ಡಿ ಆನ್ಲೈನ್ ಸಭೆ ಮಾಡಿದ್ದರು. ಆಗಲೂ ನಾವು ತೀವ್ರವಾಗಿ ವಿರೋಸಿದ್ದೆವು ಈಗ ಎಲ್ಲಾ 7 ಆಡಿಟ್ ವರದಿಗಳನ್ನೂ ತಕ್ಷಣ ಮುಗಿಸಿ ಒಂದೇ ಸಭೆಯಲ್ಲಿ ಅಂಗೀಕರಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಇಂಗ್ಲಿಷ್ನಲ್ಲಿ ಮುದ್ರಿತವಾದ ಮಾಹಿತಿ; ಮೈಶುಗರ್ ವ್ಯಾಪ್ತಿಯಲ್ಲಿ 11 ಸಾವಿರ ಷೇರುದಾರರು ಇದ್ದರು. ಆದರೆ ಅವರೆಲ್ಲರೂ ಇಂಗ್ಲಿಷ್ ಕಲಿತವರಲ್ಲ. ಆದರೆ ಕಂಪನಿ ನೀಡಿರುವ ವಾರ್ಷಿಕ ಸಭೆಯ ಬುಕ್ನಲ್ಲಿ ಎಲ್ಲ ಮಾಹಿತಿಯನ್ನೂ ಇಂಗ್ಲಿಷ್ನಲ್ಲಿ ಮುದ್ರಿಸಲಾಗಿದೆ. ಅದರಲ್ಲೂ ಹಲವಾರು ಲೋಪಗಳಿವೆ. ಸಭೆ ಕರೆದಿರುವ ವಿಳಾಸವೇ ಸರಿಯಿಲ್ಲ. ಒಟ್ಟಾರೆ ಷೇರುದಾರರು ಆನ್ಲೈನ್ನಲ್ಲಿ ವ್ಯವಹರಿಸುವಷ್ಟು ಪರಿಣಿತರಲ್ಲ. ಹಾಗಾಗಿ ನವೆಂಬರ್ 3ರಂದು ಕರೆಯಲಾಗಿರುವ ಆನ್ಲೈನ್ ವಾರ್ಷಿಕ ಇ-ವೋಟಿಂಗ್ ಸಭೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಸಚಿವ ಕೆ. ಸಿ. ನಾರಾಯಣಗೌಡ ಹಾಗೂ ಸಕ್ಕರೆ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಸಭೆಯ ಬಗ್ಗೆ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಮೈಶುಗರ್ ಚೇರ್ಮನ್, ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಕಾರ್ಯದರ್ಶಿ ಅಮರ್ಕುಮಾರ್ ಪಾಂಡೆ ಸೇರಿದಂತೆ ಆಡಳಿತವೇ ಷೇರುದಾರರನ್ನು ಕತ್ತಲೆಯಲ್ಲಿಟ್ಟು ಸಭೆ ನಡೆಸುವುದನ್ನು ವಿರೋಧಿಸುತ್ತೇವೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಟಿ. ಶ್ರೀಕಂಠೇಗೌಡ, ರೈತಮುಖಂಡರಾದ ಗೋಪಾಲಪುರ ಬೋರೇಗೌಡ, ಮುದ್ದೇಗೌಡ, ರೈತಸಂಘ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಸಿ.ಕುಮಾರಿ, ಕನ್ನಡಸೇನೆಯ ಮಂಜುನಾಥ್, ಕೀಲಾರ ಸೋಮಶೇಖರ್, ಕೆ.ಎಸ್.ಸುೀರ್ಕುಮಾರ್ ಸೇರಿದಂತರ ಮತ್ತಿತರರು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications