ವಿಶ್ವವಿದ್ಯಾಲಯಕ್ಕೆ ಅಮರಶಿಲ್ಪಿ ಜಕಣಾಚಾರಿ ಹೆಸರಿಡಿ :ಕೆಪಿ ನಂಜುಂಡಿ ಆಗ್ರಹ
ಅಮರಶಿಲ್ಪಿ ಜಕಣಾಚಾರಿ ಅವರ ಹೆಸರನ್ನು ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಬೇಕೆಂದು ಆಗ್ರಹಿಸಿದ ರಾಜ್ಯ ವಿಶ್ವಕರ್ಮ ಸಮಾಜದ ನಾಯಕ ಕೆ.ಪಿ.ನಂಜುಂಡಿ
ಮಂಡ್ಯ, ಅಕ್ಟೋಬರ್ 31: ಅಮರಶಿಲ್ಪಿ ಜಕಣಾಚಾರಿ ಅವರ ಹೆಸರನ್ನು ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಬೇಕೆಂದು ಆಗ್ರಹಿಸಿ, ನವೆಂಬರ್ 28ರಂದು ಹಾಸನದಿಂದ ಬೇಲೂರುವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯ ವಿಶ್ವಕರ್ಮ ಸಮಾಜದ ನಾಯಕ ಕೆ.ಪಿ.ನಂಜುಂಡಿ ಹೇಳಿದ್ದಾರೆ.
ಮಂಡ್ಯ ನಗರಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಜಿಲ್ಲಾ ವಿಶ್ವಕರ್ಮ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ಶಿಲ್ಪಕಲೆಗಳಲ್ಲಿ ಸುಮಾರು 900 ವರ್ಷಗಳ ಹಿಂದೆಯೇ ಪ್ರಖ್ಯಾತಿ ಪಡೆದಿರುವ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರನ್ನು ವಿಶ್ವವಿದ್ಯಾಲಯ ಅಥವಾ ವಿವಿಧ ಪಾರ್ಕ್ ಗಳಿಗೆ ನಾಮಕರಣ ಮಾಡಿ, ಸಮಾಜದ ಅಭಿವೃದ್ಧಿಗೆ ಸರ್ಕಾರ ಗಮನ ನೀಡಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಜಗತ್ಪ್ರಸಿದ್ಧಿ ಪಡೆದಿರುವ ಅಮರಶಿಲ್ಪಿ ಜಕಣಾಚಾರಿ ಅವರನ್ನು ಜಾತಿ-ಭೇದವಿದಲ್ಲದೆ ಜನತೆ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿ. ಯುವ ಪೀಳಿಗೆಗೆ ಜಕಣಚಾರಿ ಅವರ ಸಾಧನೆ ಮತ್ತು ಕಾರ್ಯತತ್ಪರತೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಪ್ರಮುಖ ವೃತ್ತ, ಪಾರ್ಕ್ ಮತ್ತು ಸಾರ್ವಜನಿಕ ಸ್ಥಳಗಳಿಗೆ ನಾಮಕರಣ ಮಾಡುವುದು ಅಗತ್ಯವಿದೆ ಎಂದು ಹೇಳಿದರು.
ಪಾದಯಾತ್ರೆ: ದಕ್ಷಿಣ ಭಾರತದಿಂದ ಈ ಪಾದಯಾತ್ರೆಗೆ ಸಾವಿರಾರು ಮಂದಿ ಆಗಮಿಸಲಿದ್ದಾರೆ. ಪಾದಯಾತ್ರೆಯ ಕಾರ್ಯಕ್ರಮವು ಬೇಲೂರಿನಲ್ಲಿ ನಡೆಯಲಿದ್ದು, ವಿವಿಧ ಪಕ್ಷಗಳ ಶಾಸಕರು, ಸಚಿವರು, ರಾಜಕೀಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಸತೀಶ್, ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀನಿವಾಸ್, ಪ್ರಕಾಶ್, ಕರಿಯಪ್ಪಾಚಾರ್, ನಂದಕುಮಾರ್ ಹಾಜರಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications