ನಾಗಮಂಗಲ: ಶಾಸಕ ಸುರೇಶ್ ಗೌಡ ಬೆಂಬಲಿಗರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಂಗಾನಾಚ್
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಟಿ.ಚನ್ನಾಪುರ ಗ್ರಾಮದಲ್ಲಿ ಗ್ರಾಮದೇವತೆ ಮಂಚಮ್ಮದೇವಿ ಮತ್ತು ಮಸಣಕಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ನೃತ್ಯ ಪ್ರದರ್ಶನಗೊಂಡಿದೆ.
ಮಂಡ್ಯ, ಫೆಬ್ರವರಿ 28: ವಿಧಾನಸಭಾ ಚುನಾವಣೆ ಸಮೀಪಿಸುವ ಬೆನ್ನಲ್ಲೇ ಒಂದಲ್ಲೊಂದು ಕಾರಣಕ್ಕೆ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯುವ ನಾಗಮಂಗಲ ತಾಲೂಕಿನಲ್ಲಿ ಮತ್ತೊಮ್ಮೆ ನಂಗಾನಾಚ್ ನೃತ್ಯ ಮರುಕಳಿಸಿದೆ.
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಟಿ.ಚನ್ನಾಪುರ ಗ್ರಾಮದಲ್ಲಿ ಗ್ರಾಮದೇವತೆ ಮಂಚಮ್ಮದೇವಿ ಮತ್ತು ಮಸಣಕಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮವೊಂದರಲ್ಲಿ ತುಂಡುಡುಗೆ ನೃತ್ಯ ಪ್ರದರ್ಶನಗೊಂಡಿದೆ. ರಸಮಂಜರಿ ಕಾರ್ಯಕ್ರಮದ ಮಧ್ಯೆ ಶಾಸಕ ಸುರೇಶ್ಗೌಡ ಸೇರಿದಂತೆ ತಾಲೂಕಿನ ಜೆಡಿಎಸ್ ಪಕ್ಷದ ಹಲವು ಮುಖಂಡರು ವೇದಿಕೆ ಕಾರ್ಯಕ್ರಮ ಮುಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಶಾಸಕ ಸುರೇಶ್ಗೌಡ ಅಧ್ಯಕ್ಷತೆಯಲ್ಲಿ ಅವರ ಬೆಂಬಲಿಗರು ಗ್ರಾಮದೇವತೆ ಜಾತ್ರಾ ಮಹೋತ್ಸವದ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ಆಯೋಜಿಸಿ ಡ್ಯಾನ್ಸರ್ಗಳನ್ನು ಕರೆಸಿ ರವಿಚಂದ್ರನ್ ನಟಿಸಿರುವ ಪ್ರೀತ್ಸೋದ್ ತಪ್ಪಾ ಚಿತ್ರದ ರಾಜಾ ರಾಜಾ ಹಾಡಿಗೆ ಅರೆಬೆತ್ತಲೆ ನೃತ್ಯ ಮಾಡಿಸಿದ್ದಾರೆ.
ತುಂಡುಡುಗೆ ತೊಟ್ಟಿದ್ದ ನೃತ್ಯಗಾರ್ತಿಯೊಬ್ಬಳು ಗ್ರಾಮದ ಬಾಲಕನೊಬ್ಬನನ್ನು ವೇದಿಕೆ ಮೇಲೆ ಎಳೆತಂದು ಕೂರಿಸಿ ಮೈಗೆಸುತ್ತಿಕೊಂಡಿದ್ದ ಟವೆಲ್ ಬಿಚ್ಚೆಸೆದು ವೇದಿಕೆಯಲ್ಲಿಯೇ ಅಸಭ್ಯವಾಗಿ ನೃತ್ಯ ಮಾಡಿದ್ದಲ್ಲದೆ, ಆ ಬಾಲಕನನ್ನು ಎತ್ತಿಕೊಂಡು ಮುತ್ತಿಟ್ಟು ಮುದ್ದಾಡಿದ ನಂತರ ಬಾಲಕನ ಮೇಲೆ ಮಲಗಿ ಚುಂಬಿಸುವ ಮೂಲಕ ಪಡ್ಡೆ ಹುಡುಗರ ಶಿಳ್ಳೆ ಗಿಟ್ಟಿಸಿಕೊಂಡಿದ್ದಾಳೆ. ಆದರೆ ಈ ಅಸಭ್ಯ ನೃತ್ಯ ನೆರೆದಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಗ್ರಾಮದೇವತೆಗಳ ಹಬ್ಬ ಆಚರಣೆಗಳು ನಮ್ಮ ಪೂರ್ವಿಕರು ನಡೆಸಿಕೊಂಡು ಬಂದಿರುವ ಸಂಪ್ರದಾಯ. ಆದರೆ ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ಮುಂಬೈ ಸೇರಿದಂತೆ ನೆರೆಯ ತೆಲಂಗಾಣ, ಆಂದ್ರಪ್ರದೇಶ ಹಾಗೂ ಉತ್ತರ ಭಾರತದಲ್ಲಿ ನಡೆಸುತ್ತಿರುವ ನಂಗಾನಾಚ್ ನೃತ್ಯ ಪ್ರದರ್ಶನಗಳು ಇದೀಗ ತಾಲೂಕಿಗೆ ಪ್ರವೇಶಿಸಿರುವುದು ಜಿಲ್ಲೆ ಹಾಗೂ ತಾಲೂಕಿಗೆ ಕಳಂಕ ತರುತ್ತಿದ್ದು, ಇಂತಹ ಅಸಭ್ಯ ನೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಗ್ರಾಮದ ಹಿರಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಡರಾತ್ರಿವೆರಗೂ ನಡೆದ ರಸಮಂಜರಿ ಕಾರ್ಯಕ್ರಮದ ಕೆಲ ಅಸಭ್ಯ ನೃತ್ಯಗಳ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications