ನಾಗಮಂಗಲ: ಶಾಸಕ ಸುರೇಶ್ ಗೌಡ ಬೆಂಬಲಿಗರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಂಗಾನಾಚ್
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಟಿ.ಚನ್ನಾಪುರ ಗ್ರಾಮದಲ್ಲಿ ಗ್ರಾಮದೇವತೆ ಮಂಚಮ್ಮದೇವಿ ಮತ್ತು ಮಸಣಕಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ನೃತ್ಯ ಪ್ರದರ್ಶನಗೊಂಡಿದೆ.
ಮಂಡ್ಯ, ಫೆಬ್ರವರಿ 28: ವಿಧಾನಸಭಾ ಚುನಾವಣೆ ಸಮೀಪಿಸುವ ಬೆನ್ನಲ್ಲೇ ಒಂದಲ್ಲೊಂದು ಕಾರಣಕ್ಕೆ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯುವ ನಾಗಮಂಗಲ ತಾಲೂಕಿನಲ್ಲಿ ಮತ್ತೊಮ್ಮೆ ನಂಗಾನಾಚ್ ನೃತ್ಯ ಮರುಕಳಿಸಿದೆ.
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಟಿ.ಚನ್ನಾಪುರ ಗ್ರಾಮದಲ್ಲಿ ಗ್ರಾಮದೇವತೆ ಮಂಚಮ್ಮದೇವಿ ಮತ್ತು ಮಸಣಕಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮವೊಂದರಲ್ಲಿ ತುಂಡುಡುಗೆ ನೃತ್ಯ ಪ್ರದರ್ಶನಗೊಂಡಿದೆ. ರಸಮಂಜರಿ ಕಾರ್ಯಕ್ರಮದ ಮಧ್ಯೆ ಶಾಸಕ ಸುರೇಶ್ಗೌಡ ಸೇರಿದಂತೆ ತಾಲೂಕಿನ ಜೆಡಿಎಸ್ ಪಕ್ಷದ ಹಲವು ಮುಖಂಡರು ವೇದಿಕೆ ಕಾರ್ಯಕ್ರಮ ಮುಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಶಾಸಕ ಸುರೇಶ್ಗೌಡ ಅಧ್ಯಕ್ಷತೆಯಲ್ಲಿ ಅವರ ಬೆಂಬಲಿಗರು ಗ್ರಾಮದೇವತೆ ಜಾತ್ರಾ ಮಹೋತ್ಸವದ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ಆಯೋಜಿಸಿ ಡ್ಯಾನ್ಸರ್ಗಳನ್ನು ಕರೆಸಿ ರವಿಚಂದ್ರನ್ ನಟಿಸಿರುವ ಪ್ರೀತ್ಸೋದ್ ತಪ್ಪಾ ಚಿತ್ರದ ರಾಜಾ ರಾಜಾ ಹಾಡಿಗೆ ಅರೆಬೆತ್ತಲೆ ನೃತ್ಯ ಮಾಡಿಸಿದ್ದಾರೆ.
ತುಂಡುಡುಗೆ ತೊಟ್ಟಿದ್ದ ನೃತ್ಯಗಾರ್ತಿಯೊಬ್ಬಳು ಗ್ರಾಮದ ಬಾಲಕನೊಬ್ಬನನ್ನು ವೇದಿಕೆ ಮೇಲೆ ಎಳೆತಂದು ಕೂರಿಸಿ ಮೈಗೆಸುತ್ತಿಕೊಂಡಿದ್ದ ಟವೆಲ್ ಬಿಚ್ಚೆಸೆದು ವೇದಿಕೆಯಲ್ಲಿಯೇ ಅಸಭ್ಯವಾಗಿ ನೃತ್ಯ ಮಾಡಿದ್ದಲ್ಲದೆ, ಆ ಬಾಲಕನನ್ನು ಎತ್ತಿಕೊಂಡು ಮುತ್ತಿಟ್ಟು ಮುದ್ದಾಡಿದ ನಂತರ ಬಾಲಕನ ಮೇಲೆ ಮಲಗಿ ಚುಂಬಿಸುವ ಮೂಲಕ ಪಡ್ಡೆ ಹುಡುಗರ ಶಿಳ್ಳೆ ಗಿಟ್ಟಿಸಿಕೊಂಡಿದ್ದಾಳೆ. ಆದರೆ ಈ ಅಸಭ್ಯ ನೃತ್ಯ ನೆರೆದಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಗ್ರಾಮದೇವತೆಗಳ ಹಬ್ಬ ಆಚರಣೆಗಳು ನಮ್ಮ ಪೂರ್ವಿಕರು ನಡೆಸಿಕೊಂಡು ಬಂದಿರುವ ಸಂಪ್ರದಾಯ. ಆದರೆ ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ಮುಂಬೈ ಸೇರಿದಂತೆ ನೆರೆಯ ತೆಲಂಗಾಣ, ಆಂದ್ರಪ್ರದೇಶ ಹಾಗೂ ಉತ್ತರ ಭಾರತದಲ್ಲಿ ನಡೆಸುತ್ತಿರುವ ನಂಗಾನಾಚ್ ನೃತ್ಯ ಪ್ರದರ್ಶನಗಳು ಇದೀಗ ತಾಲೂಕಿಗೆ ಪ್ರವೇಶಿಸಿರುವುದು ಜಿಲ್ಲೆ ಹಾಗೂ ತಾಲೂಕಿಗೆ ಕಳಂಕ ತರುತ್ತಿದ್ದು, ಇಂತಹ ಅಸಭ್ಯ ನೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಗ್ರಾಮದ ಹಿರಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಡರಾತ್ರಿವೆರಗೂ ನಡೆದ ರಸಮಂಜರಿ ಕಾರ್ಯಕ್ರಮದ ಕೆಲ ಅಸಭ್ಯ ನೃತ್ಯಗಳ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications