ಕಾವೇರಿ ನೀರು: ಸುಮಲತಾ ಮೇಲೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯದ ಬಾಣ
Recommended Video
ಮಂಡ್ಯ, ಜೂನ್ 24: ಕಾವೇರಿ ನದಿ ನೀರು ವಿವಾದ ಬಗೆಹರಿಸುವ ಜವಾಬ್ದಾರಿಯನ್ನು ನಿಖಿಲ್ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರ ಹೆಗಲಿಗೆ ಹೊರಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಹ ಕಾವೇರಿ ವಿವಾದ ಬಗೆಹರಿಸುವ ಜವಾಬ್ದಾರಿಯನ್ನು ಸುಮಲತಾ ಅವರಿಗೆ ನೀಡಿದ್ದರು.
ಮಂಡ್ಯದ ಮಳವಳ್ಳಿಯಲ್ಲಿ ನಿಧನ ಹೊಂದಿದ ಜೆಡಿಎಸ್ ಕಾರ್ಯಕರ್ತರೊಬ್ಬರ ನಿವಾಸಕ್ಕೆ ಆಗಮಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾವೇರಿ ವಿವಾದವನ್ನು ಹೊಸ ಸಂಸದೆ ಸುಮಲತಾ ಅವರು ಬಗೆಹರಿಸುತ್ತಾರೆ ಎಂದು ಹೇಳಿದರು.
ನಮ್ಮ ಸಂಸದರು (ಸುಮಲತಾ) ಬಿಜೆಪಿ ಬೆಂಬಲಿತ ಅಭ್ಯರ್ಥಿ, ಅವರಿಗೆ ಬಹಳ ಕಾಂಟ್ಯಾಕ್ಟ್ಸ್ ಇದೆ, ಮೋದಿ ಸಹ ಅವರಿಗೆ ಪರಿಚಿತರು, ಅವರು ಕಾವೇರಿ ವಿವಾದವನ್ನು ಬಗೆಹರಿಸುತ್ತಾರೆ ಬಿಡಿ ಎಂದು ವ್ಯಂಗ್ಯವಾಗಿ ನಿಖಿಲ್ ಹೇಳಿದ್ದಾರೆ.

'ನಾವೆಲ್ಲಾ ಯಾರು ಸ್ವಾಮಿ, ನಾವೆಲ್ಲಾ ಸಣ್ಣವರು, ಜನ ಆರಿಸಿ ಕಳಿಸಿರುವ ಸಂಸದರು ಕಾವೇರಿ ವಿವಾದವನ್ನು ಬಗೆಹರಿಸುತ್ತಾರೆ, ಆ ವಿಶ್ವಾಸ ನನಗೆ ಇದೆ, ನಮ್ಮ ವಿಶ್ವಾಸವನ್ನು ಅವರು ಹುಸಿಗೊಳಿಸಲ್ಲ' ಎಂದು ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಕಾವೇರಿ ವಿಚಾರವಾಗಿ ನಮ್ಮ ಬೆಂಬಲ ಸದಾ ಇರುತ್ತದೆ, ದೇವೇಗೌಡ ಅವರು ದಶಕಗಳಿಂದಲೂ ಕಾವೇರಿ ವಿಚಾರವಾಗಿ ಹೋರಾಡುತ್ತಾ ಬಂದಿದ್ದಾರೆ, ಅದನ್ನೇ ನಾನೂ ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ನಲ್ಲಿ ಅಧ್ಯಕ್ಷ ಪಟ್ಟದ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ನ ರಾಜ್ಯಾಧ್ಯಕ್ಷ ಪಟ್ಟವಾಗಲಿ, ಯುವ ಘಟಕದ ಪಟ್ಟವಾಗಲಿ ಅಲಂಕರಿಸುವಷ್ಟು ಅನುಭವ ನನಗೆ ಇಲ್ಲ, ನಾನು ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ನಿಖಿಲ್ ಹೇಳಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications