ಮಂಡ್ಯದಲ್ಲಿ ₹500 ಕೋಟಿ ವೆಚ್ಚದಲ್ಲಿ ನೂತನ ಮೈಷುಗರ್ ಸಕ್ಕರೆ ಕಾರ್ಖಾನೆ ಸ್ಥಾಪನೆ: ಶಾಸಕ ರವಿಕುಮಾರ್
ಮಂಡ್ಯ: ಜಿಲ್ಲೆಯ ಆರ್ಥಿಕ ಜೀವನಾಡಿಯಾಗಿರುವ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ₹500 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಹೊಸ ಸಕ್ಕರೆ ಕಾರ್ಖಾನೆಯಾಗಿ ಪರಿವರ್ತಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಹೊಸ ಸಕ್ಕರೆ ಕಾರ್ಖಾನೆಗೆ ಸಾತನೂರು ಫಾರಂ ಹಾಗೂ ಈಗಿರುವ ಕಾರ್ಖಾನೆ ಸ್ಥಳ ಎರಡನ್ನೂ ಗುರುತಿಸಲಾಗಿದೆ. 75 ಎಕರೆ ವಿಸ್ತೀರ್ಣದ ಸಾತನೂರು ಫಾರಂನಲ್ಲಿ ಕಾರ್ಖಾನೆ ನಿರ್ಮಿಸುವುದು ಉತ್ತಮ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಹೊಸ ಸಕ್ಕರೆ ಕಾರ್ಖಾನೆಗೆ ಸರ್ಕಾರದ ವತಿಯಿಂದ ₹100 ಕೋಟಿ ಹಣವನ್ನು ಮೊದಲ ಹಂತದಲ್ಲಿ ನೀಡಲಾಗುವುದು. ಉಳಿದ ₹ 400 ಕೋಟಿ ಹಣವನ್ನು ಸಾಲ ರೂಪದಲ್ಲಿ ಪಡೆಯಲಾಗುತ್ತದೆ. ಮೂರು ತಿಂಗಳೊಳಗೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ನುಡಿದರು.
ಪ್ರತಿ ಗ್ರಾಮದಿಂದ ಮಣ್ಣು ಸಂಗ್ರಹ ಅಭಿಯಾನ
ಮೈಷುಗರ್ ಕಾರ್ಖಾನೆ ಮಂಡ್ಯ ಜಿಲ್ಲೆಯ ಜನರ ಅಸ್ಮಿತೆಯ ಸಂಕೇತ. ಮಹಾರಾಜರು ನೀಡಿರುವ ಕೊಡುಗೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಅದಕ್ಕಾಗಿ ಪ್ರತಿ ಗ್ರಾಮದಿಂದ ಮಣ್ಣನ್ನು ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಂಡು ಕಾರ್ಖಾನೆ ನಮ್ಮದು ಎಂಬ ಭಾವನೆ ಮೂಡುವಂತೆ ಮಾಡಲಾಗುವುದು ಎಂದು ತಿಳಿಸಿದರು.
ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಗೆ ಕಳೆದ ಸಾಲಿನಲ್ಲಿ ರಾಜ್ಯ ಸರ್ಕಾರ ಮೈಷುಗರ್ ಕಾರ್ಯಾರಂಭಕ್ಕೆ 50 ಕೋಟಿ ರು. ಹಣ ನೀಡಿತು. ಇದರಿಂದ ದಾಖಲೆಯ 2.50 ಲಕ್ಷ ಟನ್ ಕಬ್ಬು ಅರೆದು ಕಾರ್ಯಾಚರಣೆ ಯಶಸ್ವಿಯಾಗಿದೆ. ಸಹ ವಿದ್ಯುತ್ ಘಟಕ ಕಾರ್ಯಾರಂಭವಾಗಿದೆ. ಹೊಸ ಕಾರ್ಖಾನೆ ನಿರ್ಮಾಣವಾದಲ್ಲಿ ಮೈಷುಗರ್ ವ್ಯಾಪ್ತಿಯ ಕಬ್ಬು ಬೆಳೆಗಾರರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ಹೇಳಿದರು.
ಚುನಾವಣೆಗೂ ಮುನ್ನ ಜಿಲ್ಲೆಯ ಜನರಿಗೆ ನೀಡಿದ ಆಶ್ವಾಸನೆಯಂತೆ ಹೊಸ ಸಕ್ಕರೆ ಕಾರ್ಖಾನೆ ನಿರ್ಮಿಸುವುದಾಗಿ ಘೋಷಿಸಲಾಗಿದೆ. ನುಡಿದಂತೆ ನಡೆಯುವವರು ನಾವು. ಬೇರೆ ಪಕ್ಷದವರಂತೆ ಘೋಷಣೆ ಮಾಡಿ ಜನರಿಗೆ ಮೋಸ ಮಾಡುವುದಿಲ್ಲ. ಆದಷ್ಟು ಬೇಗ ಕಾರ್ಖಾನೆ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.
ಸಾಫ್ಟ್ವೇರ್ ಪಾರ್ಕ್
ಕಾರ್ಖಾನೆ ಆಸ್ತಿಯನ್ನು ಸಂಪೂರ್ಣವಾಗಿ ರಕ್ಷಣೆ ಮಾಡಲಾಗುವುದು. ಎಲ್ಲಿಯೂ ಒತ್ತುವರಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಹಕರಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದ ಶಾಸಕ ಪಿ.ರವಿಕುಮಾರ್, ಹಾಲಿ ಮೈಷುಗರ್ ಕಾರ್ಖಾನೆ ಇರುವ ಸ್ಥಳದಲ್ಲಿ ಸಾಫ್ಟ್ವೇರ್ ಪಾರ್ಕ್ ನಿರ್ಮಿಸುವ ಕನಸಿದೆ. ಇದರಿಂದ ಸ್ಥಳೀಯವಾಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವುದರೊಂದಿಗೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
ವಿ.ಸಿ.ಫಾರಂನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿಯೂ ಬಜೆಟ್ನಲ್ಲಿ ಘೋಷಿಸಿರುವುದು ಸಂತಸದ ವಿಚಾರವಾಗಿದೆ. ಕೃಷಿ ವಿಶ್ವವಿದ್ಯಾಲಯದಿಂದ ಶಿಕ್ಷಣದ ಬೆಳವಣಿಗೆ ಜೊತೆಗೆ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕ ಅವಕಾಶಗಳು, ಅನುಕೂಲಗಳು ದೊರೆಯಲಿವೆ ಎಂದರು.
ನಗರದ ಚಿತ್ರ ಬದಲಾವಣೆ
ಮುಂದಿನ ನಾಲ್ಕೈದು ತಿಂಗಳಲ್ಲಿ ನಗರದ ಚಿತ್ರಣ ಸಂಪೂರ್ಣವಾಗಿ ಬದಲಾವಣೆಯಾಗುವಂತೆ ಯೋಜನೆ ರೂಪಿಸಲಾಗಿದೆ. ಬೆಂಗಳೂರು ಮಾದರಿಯಲ್ಲಿ ರಸ್ತೆಗಳು, ವಾರ್ಡ್ಗಳು, ವೃತ್ತಗಳ ನಾಮಫಲಕಗಳು ತಲೆಎತ್ತಲಿವೆ. ಮೈಷುಗರ್ ವೃತ್ತ, ಮಹಾವೀರ ವೃತ್ತ, ಜಯಚಾಮರಾಜೇಂದ್ರ ಒಡೆಯರ್ ವೃತ್ತಗಳನ್ನು ಆಕರ್ಷಣೀಯವಾಗಿ ಅಭಿವೃದ್ಧಿಪಡಿಸಲಾಗುವುದು. ರಸ್ತೆಗಳು, ಚರಂಡಿಗಳ ನಿರ್ಮಾಣಕ್ಕೆ ಸದ್ಯ ಪ್ರಾಮುಖ್ಯತೆ ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications