ಆಸ್ಪತ್ರೆ ಆವರಣದಲ್ಲೇ ನವಜಾತ ಹೆಣ್ಣು ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿಗಳು!
ಮಂಡ್ಯ, ಸೆಪ್ಟೆಂಬರ್ 6: ಸದಾ ಒಂದಿಲ್ಲೊಂದು ಸುದ್ಧಿಯಲ್ಲಿ ಮುಂದಿರುವ ಮಂಡ್ಯ ವೈದ್ಯಕೀಯ ಸಂಸ್ಥೆ ಆವರಣದಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ನಾಯಿಗಳು ಕಚ್ಚಿಕೊಂಡು ಓಡಾಡಿರುವ ದೃಶ್ಯ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.
ಹೆಣ್ಣು ಶಿಶುವೆಂದು ಜರಿದ ಹೆತ್ತವರು ಮಿಮ್ಸ್ ಆವರಣದಲ್ಲಿ ಬಿಸಾಡಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಬಿಸಾಡಿದ ನವಜಾತ ಶಿಶುವನ್ನು ನಾಯಿಗಳು ಎಳೆಡಾಡಿವೆ. ಈ ದೃಶ್ಯ ಕಂಡ ಸಾರ್ವಜನಿಕರು ತಕ್ಷಣ ಮಿಮ್ಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಮಗುವನ್ನು ರಕ್ಷಣೆ ಮಾಡಿದ್ದಾರಾದರೂ, ದುರಾದೃಷ್ಟವಶಾತ್ ಮಗು ಬದುಕುಳಿಯಲಿಲ್ಲ. ಶವವನ್ನು ವಶಕ್ಕೆ ಪಡೆದ ಸಿಬ್ಬಂದಿಗಳು ಶವಾಗಾರಕ್ಕೆ ರವಾನಿಸಿದ್ದಾರೆ.
ವಿಷಯ ತಿಳಿದು ಆತಂಕಗೊಂಡ ಅಧಿಕಾರಿಗಳು ಕೂಡಲೇ ಹೆರಿಗೆ ವಿಭಾಗದವರಿಂದ ಮಾಹಿತಿ ಕಲೆಹಾಕಿದರು. ಅದರಂತೆ ಮಗು ಮಿಮ್ಸ್ಗೆ ಸಂಬಂಧಿಸಿದ್ದಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ. ಸುದ್ದಿ ತಿಳಿದ ತಕ್ಷಣ ಮಿಮ್ಸ್ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಗು ಎಲ್ಲಿಂದ ಬಂತು ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಸೆಪ್ಟೆಂಬರ್ 1ರಿಂದ 5ರವರೆಗೆ ನಾಲ್ಕು ನವಜಾತ ಶಿಶುಗಳು ಮಿಮ್ಸ್ನಲ್ಲಿ ಮೃತಪಟ್ಟಿದ್ದು, ಈ ಪೈಕಿ ಮೂರು ಗಂಡು ಹಾಗೂ ಒಂದು ಹೆಣ್ಣು ಶಿಶು ಎಂದು ತಿಳಿದುಬಂದಿದೆ. ಹೆಣ್ಣು ಮಗುವಿಗೆ ಸಂಬಂಧಿಸಿದಂತೆ ಚನ್ನಪಟ್ಟಣ ಮೂಲದ ದಂಪತಿಯಿಂದ ಮಾಹಿತಿ ಪಡೆಯಲಾಗಿತ್ತು. ಅವರು ಮೃತಪಟ್ಟ ತಮ್ಮ ಮಗುವನ್ನು ಅಂತ್ಯಸಂಸ್ಕಾರ ಮಾಡಿರುವುದಾಗಿ ಮಾಹಿರಿ ನೀಡಿದ್ದಾರೆ. ಆದರೆ, ಇಲ್ಲಿರುವ ಮೃತ ಮಗು ಯಾರದ್ದು, ಯಾವ ಆಸ್ಪತ್ರೆಯದ್ದು ಎಂಬುದು ತಿಳಿದುಬಂದಿಲ್ಲ.
ಒಂದು ದಿನದ ಹಿಂದೆಯಷ್ಟೇ ಮಗು ಜನಿಸಿದ್ದು, ವಿಕಲಚೇತನ ಎಂಬಂತೆ ಕಾಣುತ್ತಿರುವುದರಿಂದ ಹೆತ್ತವರು ಬಿಟ್ಟು ಹೋಗಿರಬಹುದು. ಅದನ್ನು ನಾಯಿಗಳು ಎಳೆದುಕೊಂಡು ಬಂದಿವೆ ಎನ್ನಲಾಗಿದೆ. ನಾಯಿಗಳು ಮಗುವಿನ ದೇಹವನ್ನು ಕಚ್ಚಿರುವ ಪರಿಣಾಮ ಸಂಪೂರ್ಣ ಗಾಯಗಳೇ ಕಾಣುತ್ತಿದ್ದವು. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಪೋಷಕರಿಗೆ ಹಿಡಿ ಶಾಪ ಹಾಕುತ್ತಿದ್ದುದು ಕಂಡುಬಂತು.
ಈ ಬಗ್ಗೆ ಪೂರ್ವ ಠಾಣೆ ಪೊಲೀಸರಿಗೆ ದೂರು ನೀಡಿದ್ದಲ್ಲದೆ, ಸಂಸ್ಥೆಯ ಆವರಣದಲ್ಲಿರುವ ಸಿಸಿ ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದ 24 ಗಂಟೆಗಳ ದೃಶ್ಯಾವಳಿಯ ದಾಖಲೆಯನ್ನೂ ನೀಡಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications