ಇಬ್ಬರು ಗೌಡರ ನಡುವಿನ ಮೇಲಾಟಕ್ಕೆ ಬ್ರೇಕ್ ಹಾಕಿದ ನಿಖಿಲ್ ಕುಮಾರಸ್ವಾಮಿ
ಮಂಡ್ಯ, ನ 27: ಜಿಲ್ಲೆಯ ಇಬ್ಬರು ಪ್ರಭಾವೀ ರಾಜಕೀಯ ಮುಖಂಡರಾದ ಸುರೇಶ್ ಗೌಡ ಮತ್ತು ಎಲ್.ಆರ್. ಶಿವರಾಮೇಗೌಡರ ನಡುವಿನ ಮೇಲಾಟಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬ್ರೇಕ್ ಹಾಕಿದ್ದಾರೆ.
"ಮುಂದಿನ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಅವರೇ, ಈ ಬಗ್ಗೆ ಕಾರ್ಯಕರ್ತರಿಗೆ ಯಾವುದೇ ಸಂದೇಹ ಬೇಡ ಮತ್ತು ಗೊಂದಲವೂ ಬೇಡ"ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ನಾನು ಕೂಡಾ ಸ್ಪರ್ಧಿಸುತ್ತೇನೆ ಎಂದು ಶಿವರಾಮೇಗೌಡ್ರು ಹೇಳಿದ ನಂತರ, ಇವರು ಮತ್ತು ಸುರೇಶ್ ಗೌಡ್ರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಈ ವಿದ್ಯಮಾನದಿಂದ ಸುರೇಶ್ ಗೌಡ ಬೇಸರ ವ್ಯಕ್ತಪಡಿಸಿದ್ದರು. ಈಗ, ಸುರೇಶ್ ಗೌಡ ಅವರೇ ಅಭ್ಯರ್ಥಿ ಎಂದು ನಿಖಿಲ್ ಹೇಳುವ ಮೂಲಕ, ಶಿವರಾಮೇಗೌಡ್ರಿಗೆ ನಿಖಿಲ್ ಟಾಂಗ್ ನೀಡಿದ್ದಾರೆ.

"ನನಗೆ ಕೆಲವೊಂದು ಫ್ಯಾಷನ್ ಇದೆ. ಈಗ,ಸಿನಿಮಾ ರಂಗದಲ್ಲಿ ನಾನು ಗುರುತಿಸಿಕೊಂಡಿದ್ದೇನೆ. ರಾಜಕೀಯದಲ್ಲೇ ಮೇಲೆ ಬರಬೇಕೆಂದಿದ್ದರೆ, ಯಾವತ್ತೋ ಶಾಸಕನಾಗುತ್ತಿದ್ದೆ. ನನ್ನ ತಂದೆಯವರ ಹೆಸರಿನಲ್ಲಿ ತುಂಬಾ ಜನ ಶಾಸಕರಾಗಿದ್ದಾರೆ"ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
"ದೇವೇಗೌಡರದ್ದು ಕುಟುಂಬ ರಾಜಕಾರಣ ಎಂದು ಹೇಳುವವರು, ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಪುತ್ರರೂ ರಾಜಕೀಯದಲ್ಲಿ ಇದ್ದಾರೆ ಎನ್ನುವುದನ್ನು ಮರೆತಿದ್ದಾರೆಯೇ" ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Recommended Video
"ಪಕ್ಷ ನನಗೊಂದು ಜವಾಬ್ದಾರಿಯನ್ನು ನೀಡಿದೆ. ಮುಂದೆ ಚುನಾವಣೆಗೆ ನಿಲ್ಲಬೇಕೋ, ಬೇಡವೇ ಎನ್ನುವುದನ್ನು ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಿರ್ಧರಿಸುತ್ತಾರೆ. ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಯುವಕರು ನಾನು ಅಲ್ಲಿಂದ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ"ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications