ನಿಖಿಲ್ ಗೆಲುವಿಗಾಗಿ ಶಬರಿಮಲೆ ಯಾತ್ರೆ ಕೈಗೊಂಡ ಅಭಿಮಾನಿಗಳು

Recommended Video

      ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶಬರಿಮಲೈ ಯಾತ್ರೆ ಹೊರಟ ಬೆಂಬಲಿಗರು

      ಮಂಡ್ಯ, ಮೇ 16: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳ ಗುಂಪೊಂದು ಶಬರಿಮಲೆ ಯಾತ್ರೆ ಕೈಗೊಂಡಿದೆ.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ಮಂಡ್ಯದ ಸುಮಾರು 35 ಜೆಡಿಎಸ್ ಕಾರ್ಯಕರ್ತರು ಮಾಲೆಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಂಡಿದ್ದಾರೆ. ತಾಲೂಕಿನ ಇಂಡುವಾಳು ಗ್ರಾಮದ ರಾಮ ಮಂದಿರದಲ್ಲಿ ಇರುಮುಡಿ ಕಟ್ಟಿಕೊಂಡು ಶಬರಿ ಮಲೆ ಯಾತ್ರೆ ಆರಂಭಿಸಿದ್ದಾರೆ.

      ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಗೆಲ್ಲಬೇಕೆಂದು ಹರಕೆ ಹೊತ್ತು ಇವರು ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದಾರೆ. ನಿಖಿಲ್ ಗೆದ್ದಬಳಿಕ ಮತ್ತೊಮ್ಮೆ ಶಬರಿಮಲೆಗೆ ಹೋಗುವುದಾಗಿ ಇವರು ಹೇಳಿದ್ದಾರೆ.

      Nikhil Kumaraswamy followers going to Sabarimala to pray for Nikhil

      ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನು ಆರು ದಿನ ಬಾಕಿ ಇದೆ. ದೇಶದ ಗಮನವನ್ನು ಮಂಡ್ಯ ಫಲಿತಾಂಶ ಸೆಳೆದಿದೆ. ಅಭ್ಯರ್ಥಿಗಳಾದ ನಿಖಿಲ್ ಕುಮಾರಸ್ವಾಮಿ, ಸುಮಲತಾ ಅವರುಗಳೇನೋ ಕೂಲ್ ಇದ್ದಂತೆ ಕಾಣುತ್ತಿದ್ದಾರೆ. ಆದರೆ ಅವರ ಬೆಂಬಲಿಗರು ಆತಂಕದಲ್ಲಿದ್ದಾರೆ.

      ನಿಖಿಲ್ ಕುಮಾರಸ್ವಾಮಿ, ಕುಮಾರಸ್ವಾಮಿ, ದೇವೇಗೌಡ ಅವರುಗಳು ಸಹ ಹಲವು ಪೂಜೆ, ಹೋಮ, ದೇವಸ್ಥಾನಗಳ ಭೇಟಿ ನಡೆಸಿದ್ದಾರೆ. ಸುಮಲತಾ ಅವರ ಬೆಂಬಲಿಗರೂ ಕೆಲವರು ದೇವರ ಪೂಜೆ ನಡೆಸಿದ್ದಾರೆ. ಆದರೆ ಸುಮತಾ ಅವರು ಯಾವುದೇ ಹೋಮ, ಹವನ, ವಿಶೇಷ ಪೂಜೆಗಳನ್ನು ಮಾಡಿಸಿದ ವರದಿ ಆಗಿಲ್ಲ.

      ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಡುವೆ ನಿಕಟ ಪೈಪೋಟಿ ನಡೆದಿತ್ತು, ಏಪ್ರಿಲ್ 18 ಕ್ಕೆ ಮತದಾನ ಮುಗಿದಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+