ನಿಖಿಲ್ ಕುಮಾರಸ್ವಾಮಿ ನಾಮಪತ್ರ ಕಾನೂನು ಬದ್ಧ: ಚುನಾವಣಾಧಿಕಾರಿ
ಮಂಡ್ಯ, ಮಾರ್ಚ್ 28: ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ವೇಳೆ ನೀಡಬೇಕಿದ್ದ ದಾಖಲೆಯೊಂದನ್ನು ತಡವಾಗಿ ನೀಡಿದ್ದಾರೆ, ಹಾಗಾಗಿ ಅವರ ನಾಮಪತ್ರ ಅಸಿಂಧು ಆಗಲಿದೆ ಎಂಬ ಸುದ್ದಿಗೆ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಾರ್ಚ್ 27ರಂದು ನಾಮಪತ್ರ ಪರಿಶೀಲನೆಯ ಸಮಯ ನಾಮಪತ್ರದ ಫಾರಂ-26ರ ಕಾಲಂ7, 7a, 8 ಭರ್ತಿ ಮಾಡಲಾಗಿರಲಿಲ್ಲ, ಬೆಳಿಗ್ಗೆ 11 ಗಂಟೆ ವೇಳೆಗೆ ಪೂರ್ತಿ ಭರ್ತಿ ಮಾಡಿದ ನಾಮಪತ್ರವನ್ನು ಸಲ್ಲಿಸಲಾಯಿತು, ನಂತರ ನಾಮಪತ್ರವನ್ನು ಅಂಗೀಕರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.
ಆದರೆ ನಾಮಪತ್ರ ಅಂಗೀಕಾರವಾದ ನಂತರ ಅಭ್ಯರ್ಥಿ ಸುಮಲತಾ ಅವರ ಪರ ಏಜೆಂಟರು ಆಕ್ಷೇಪಣೆ ಸಲ್ಲಿಸಿದರು, ಅಷ್ಟರಲ್ಲಾಗಲೆ ನಾಮಪತ್ರ ಅಂಗೀಕಾರವಾಗಿತ್ತು ಎಂದು ಮಂಜುಶ್ರೀ ಹೇಳಿದ್ದಾರೆ.
ಜೆಡಿಎಸ್ ಸಂಸದರು ಏನು ವಿದ್ಯಾರ್ಹತೆ ಪಡೆದಿದ್ದಾರೆ?

ನಾಮಪತ್ರ ಅಂಗೀಕಾರಕ್ಕೆ ಮುನ್ನಾ ಎಲ್ಲಾ ಅಭ್ಯರ್ಥಿಗಳಿಗೆ ಚೆಕ್ ಲಿಸ್ಟ್ ಕೊಟ್ಟಿದ್ದೆವು ಅದರಂತೆ ಎಲ್ಲ ದಾಖಲೆಗಳನ್ನು ನೀಡಿದ ಬಳಿಕವಷ್ಟೆ ನಾಮಪತ್ರ ಅಂಗೀಕಾರ ಮಾಡಲಾಗಿದೆ, ಈ ಎಲ್ಲ ಪ್ರಕ್ರಿಯೆಗಳು ವೀಕ್ಷಕರ ಸಮ್ಮುಖದಲ್ಲಿಯೇ ನಡೆದಿವೆ ಎಂದು ಅವರು ಹೇಳಿದ್ದಾರೆ.
ಸುಮಲತಾ ಪರ ಏಜೆಂಟರುಗಳು ನಾಮಪತ್ರ ಅನುಮೋದನೆಯ ನಂತರ ದೂರು ನೀಡಿದ್ದಾರೆ, ಅದನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು, ಯಾವುದೇ ಗೊಂದಲಗಳಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಬಹುದು ಎಂದು ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications