ಮಂಡ್ಯದಲ್ಲಿ 'ನಿಖಿಲ್ ಎಲ್ಲಿದ್ದೀಯಪ್ಪಾ' ಎಂದ ನಿಖಿಲ್ ಕುಮಾರಸ್ವಾಮಿ!
Recommended Video
ಮಂಡ್ಯ, ಮೇ 10: ಭಾರಿ ಟ್ರೋಲ್ ಆಗಿದ್ದ 'ನಿಖಿಲ್ ಎಲ್ಲಿದ್ದೀಯಪ್ಪ' ಬಗ್ಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಗಿಯೇ ಪ್ರತಿಕ್ರಿಯಿಸಿದ್ದಾರೆ. 'ನಿಖಿಲ್ ಎಲ್ಲಿದ್ದೀಯಪ್ಪಾ' ಸಿನಿಮಾಗೆ ನಾನೇ ಹೀರೋ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮಂಡ್ಯದಲ್ಲಿ ಮಾತನಾಡಿದ ನಿಖಿಲ್, 40 ವರ್ಷದಲ್ಲಿ ಗಳಿಸುವ ರಾಜಕೀಯ ಅನುಭವವನ್ನು 45 ದಿನಗಳಲ್ಲೇ ಗಳಿಸಿದ್ದೇನೆ, 'ನಿಖಿಲ್ ಎಲ್ಲಿದ್ದೀಯಪ್ಪಾ' ವಿಶ್ವ ಪ್ರಸಿದ್ಧಿ ಪಡೆದಿದೆ, ಆ ಟೈಟಲ್ ಯಾರಿಗೂ ಕೊಡಲ್ಲ, ನಾನೇ ಆ ಸಿನಿಮಾ ಮಾಡ್ತೀನಿ' ಎಂದು ಹೇಳಿದರು.
ವಿರೋಧಿಗಳು ನನಗೆ ಅವಮಾನ ಮಾಡಲೆಂದು ಆ ವಿಡಿಯೋವನ್ನು ವೈರಲ್ ಮಾಡಿದರು, ಆದರೆ ಅದೇ ನನಗೆ ಖ್ಯಾತಿ ಗಳಿಸಿಕೊಟ್ಟಿತು, ಫಿಲಂ ಛೇಂಬರ್ನಲ್ಲೂ ಆ ಟೈಟಲ್ಗೆ ಬೇಡಿಕೆ ಹೆಚ್ಚಿತು, ಪುಟ್ಟರಾಜಣ್ಣ (ಸಚಿವ ಸಿ.ಎಸ್.ಪುಟ್ಟರಾಜು) ನಿರ್ಮಾಣ ಮಾಡ್ತಾರೆ, ನಾನೇ ಹೀರೋ ಎಂದು ಹಾಸ್ಯ ಮಾಡಿದರು.

ಮಾಧ್ಯಮಗಳ ಬಗ್ಗೆ ನಿಖಿಲ್ ಕುಟುಕು
ಮಾಧ್ಯಮಗಳ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಿಖಿಲ್ಗೆ ಹಿನ್ನಡೆ ಆಗುತ್ತದೆಯೆಂದು ಮಾಧ್ಯಮಗಳು ಪದೇ-ಪದೇ ಹೇಳಿದ ಕಾರಣದಿಂದಲೇ, ನಾವು ಎಚ್ಚರಿಕೆಯಿಂದ ಕಾರ್ಯ ಮಾಡಲು ಸಾಧ್ಯವಾಯಿತು, ಇದಕ್ಕೆ ಮಾಧ್ಯಮಗಳಿಗೆ ಧನ್ಯವಾದ ಹೇಳಬೇಕು ಎಂದು ಅವರು ಹೇಳಿದರು.

ನಾನು ಎಲ್ಲೂ ಹೋಗಿಲ್ಲ ಮಂಡ್ಯದಲ್ಲೇ ಇದ್ದೇನೆ: ನಿಖಿಲ್
ಚುನಾವಣೆ ನಂತರ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ, ವಿದೇಶಕ್ಕೆ ತೆರಳಿದ್ದೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದರು, ಆದರೆ ನಾನು ಇಲ್ಲೇ ಇದ್ದೇನೆ, ಮಂಡ್ಯದಲ್ಲಿ ಶಾಲೆ-ಕಾಲೇಜುಗಳನ್ನು ಸ್ಮಾರ್ಟ್ ಮಾಡುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಹೇಳಿದರು.

ಬಹುವಾಗಿ ಟ್ರೋಲ್ ಆಗಿದ್ದ 'ನಿಖಿಲ್ ಎಲ್ಲಿದ್ದೀಯಪ್ಪಾ'
'ನಿಖಿಲ್ ಎಲ್ಲಿದ್ದೀಯಪ್ಪಾ' ಬಹುವಾಗಿ ಟ್ರೋಲ್ ಆಗಿತ್ತು, ಈ ವರೆಗೆ ಅಷ್ಟೋಂದು ದೊಡ್ಡ ಮಟ್ಟದಲ್ಲಿ ಟ್ರೋಲ್ ಆದ ಮತ್ತೊಂದು ವಿಡಿಯೋ ಕನ್ನಡದಲ್ಲಿ ಯಾವುದೂ ಇಲ್ಲ. ಅಮೆರಿಕ, ಚೀನಾ, ದಕ್ಷಿಣ ಆಫ್ರಿಕಾ ಹಲವು ಕಡೆಗಳನ್ನು 'ನಿಖಿಲ್ ಎಲ್ಲಿದ್ದೀಯಪ್ಪಾ' ಟ್ರೋಲ್ ಆಗಿತ್ತು.

ಜಾಗ್ವಾರ್ ಸಿನಿಮಾದ ಸಂದರ್ಭದ ವಿಡಿಯೋ
ಜಾಗ್ವಾರ್ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು 'ನಿಖಿಲ್ ಎಲ್ಲಿದ್ದೀಯಪ್ಪಾ' ಎಂದು ಕರೆಯುವ ವಿಡಿಯೋವನ್ನು ಮಂಡ್ಯ ಚುನಾವಣೆ ಸಮಯದಲ್ಲಿ ವೈರಲ್ ಮಾಡಲಾಗಿತ್ತು. ವಿಡಿಯೋದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ನಡುವೆ ನಡೆಯುವ ನಾಟಕೀಯ ರೀತಿಯ ಸಂಭಾಷಣೆಯನ್ನು ಬಹುವಾಗಿ ಟ್ರೋಲ್ ಮಾಡಲಾಗಿತ್ತು.

ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿ
ಮಂಡ್ಯ ಪುರಸಭೆ ಚುನಾವಣೆಗೆ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಸಚಿವ ಪುಟ್ಟರಾಜು, ಮಂಡ್ಯ ಜೆಡಿಎಸ್ ಶಾಸಕರು ಭಾಗವಹಿಸಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications