ಸಿ.ಪಿ.ಯೋಗೇಶ್ವರ್ ಬಿಜೆಪಿ ಸೇರ್ಪಡೆಗೆ ನಾಯಕರಲ್ಲಿ ಇಲ್ಲ ಒಮ್ಮತ
ಮಂಡ್ಯ, ಡಿಸೆಂಬರ್ 15: ಶಾಸಕ ಸಿ.ಪಿ.ಯೋಗೇಶ್ವರ್ ಮತ್ತೆ ಬಿಜೆಪಿಗೆ ಆಗಮಿಸುತ್ತಿರುವುದು ಬಿಜೆಪಿಯ ಕೆಲವು ನಾಯಕರಿಗೆ ಇಷ್ಟವಿಲ್ಲ ಎಂಬ ಗುಸುಗುಸು ಸುದ್ದಿ ಹೊಸತೇನಲ್ಲ. ಚನ್ನಪಟ್ಟಣದಿಂದ ಮಂಡ್ಯದತ್ತ ವಾಲಿರುವ ಯೋಗೇಶ್ವರ್ ಇಲ್ಲಿ ಸಂಘಟನೆ ಮಾಡುವುದಾಗಿ ಫೋಸ್ ನೀಡುತ್ತಿರುವುದು ಅವರದ್ದೇ ಪಕ್ಷದ ನಾಯಕರಿಗೆ ಸುತರಾಂ ಇಷ್ಟವಿಲ್ಲ.
ಈ ಸಂಬಂಧ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಪರೋಕ್ಷವಾಗಿ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಭಾರತೀಯ ಜನತಾ ಪಕ್ಷದ ಕೆರಗೋಡು ಶಕ್ತಿ ಕೇಂದ್ರದ ವತಿಯಿಂದ ತಾಲೂಕಿನ ಉಪ್ಪರಕನಹಳ್ಳಿ ಗೇಟ್ ಬಳಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ ಅವರು ತಮಗಿರುವ ಅಸಮಧಾನ ತೆರೆದಿಟ್ಟಿದ್ದಾರೆ.

"ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಸ್ಥಳೀಯ ನಾಯಕರೇ ಶಾಸಕರಾಗಿ ಆಯ್ಕೆಯಾಗಬೇಕು. ನಮ್ಮ ಹುಡುಗರೇ ವಿಧಾನಸೌಧಕ್ಕೆ ಹೋಗಬೇಕು. ದುಡ್ಡಿರುವವರಿಗೆ ಹಾಗೂ ಹೊರಗಿನವರಿಗೆ ಅವಕಾಶ ನೀಡಬಾರದು," ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿ.ಪಿ ಯೋಗೀಶ್ವರ್ ಆಗಮನಕ್ಕೆ ತೇಜಸ್ವಿನಿ ವಿರೋಧ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಶಾಸಕ ಸ್ಥಾನಕ್ಕೆ ಆಯ್ಕೆಯಾಗಲು ಹಲವಾರು ಮಂದಿ ಸಮರ್ಥರಿದ್ದಾರೆ. ಜಿ. ಮಾದೇಗೌಡರಂತಹ ನಾಯಕರು ಸತತವಾಗಿ ವಿಧಾನಸಭೆ ಹಾಗೂ ಲೋಕಸಭೆಯನ್ನು ಪ್ರವೇಶ ಮಾಡಿದ್ದಾರೆ. ಜಿಲ್ಲೆಯಲ್ಲಿ ಗಟ್ಟಿಯಾದ ನಾಯಕತ್ವವಿರುವುದಕ್ಕೆ ಇವರು ಉದಾಹರಣೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಹೀಗೆ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಅವರ ಮಾತುಗಳು ಸಿ.ಪಿ.ಯೋಗೇಶ್ವರ್ ಕುರಿತಾಗಿಯೇ ಇದ್ದು, ಅವರು ಮತ್ತೆ ಪಕ್ಷಕ್ಕೆ ಬರುತ್ತಿರುವುದು ಬಿಜೆಪಿಯ ಬಹಳಷ್ಟು ನಾಯಕರಿಗೆ ಇಷ್ಟವಿಲ್ಲ ಎನ್ನಲಾಗುತ್ತಿದೆ. ಕೇವಲ ಚುನಾವಣೆ ಸಂದರ್ಭ ಪಕ್ಷಕ್ಕೆ ಸೇರ್ಪಡೆಗೊಳ್ಳುವವರಿಗೆ ಟಿಕೆಟ್ ನೀಡುವುದರಿಂದ ಮೂಲ ಬಿಜೆಪಿ ನಾಯಕರಿಗೆ ಇದರಿಂದ ತೊಂದರೆಯಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications