ಬೇಸಿಗೆ ಬೆಳೆಗೆ ಕೆಆರ್ಎಸ್ನಿಂದ ನೀರಿಲ್ಲ: ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ
ಮಂಡ್ಯ, ಡಿಸೆಂಬರ್ 22: ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದರು.
ತಾಲ್ಲೂಕಿನ ಕೆಆರ್ ಎಸ್ ನಲ್ಲಿ ಶುಕ್ರವಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಜಲಾಶಯದ ನೀರಿನ ಮಟ್ಟ, ಕುಡಿಯುವ ನೀರಿನ ಲಭ್ಯತೆ ಹಾಗೂ ರೈತರ ಬೆಳೆಗೆ ನೀರು ಕೊಡುವ ಬಗ್ಗೆ ಚರ್ಚೆ ನಡೆಸಿದರು.

ನಂತರ ಸ್ಥಳೀಯ ಶಾಸಕರು, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದ ಸಚಿವರು, ಜಲಾಶಯದಲ್ಲಿ ನೀರು ಕಡಿಮೆ ಇರುವುದರಿಂದ, ಮುಂದೆ ಬೇಸಿಗೆ ಎದುರಾಗುವುದರಿಂದ ಜನ, ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮಳೆ ಕಡಿಮೆಯಾಗಿದ್ದರಿಂದ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಅಣೆಕಟ್ಟೆಗಳು ಭರ್ತಿಯಾಗಿಲ್ಲ. ಆದರೂ ನದಿ ಪಾತ್ರದ ರೈತರ ಹಿತದೃಷ್ಠಿಯಿಂದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನವೆಂಬರ್ ಅಂತ್ಯದವರೆಗೂ ನೀರು ಹರಿಸಲಾಗಿದೆ ಎಂದು ವಿವರಿಸಿದರು.
ನದಿ ಪಾತ್ರದಲ್ಲಿನ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆ ರಕ್ಷಣೆಗೆ ನಿಯಮಿತವಾಗಿ ರೈತರ ಹಿತ ಕಾಪಾಡಲು ಸಂಕಷ್ಟ ಸಮಯದಲ್ಲೂ ನೀರು ಹರಿಸಲಾಗಿದೆ. ಸಿಎಂ, ಡಿಸಿಎಂ, ನೀರಾವರಿ ಸಚಿವರು, ಶಾಸಕರು, ಸಮಿತಿ ಜೊತೆ ಚರ್ಚಿಸಿ ಸಲಹೆ ಪಡೆದು ಇಲ್ಲಿವರೆಗೆ ನೀರು ಹರಿಸಲಾಗಿದೆ ಎಂದು ತಿಳಿಸಿದರು.
ನಾಲೆಗಳಿಗೆ ನೀರು ಹರಿಸಲು ಪೂರ್ಣ ಅಧಿಕಾರ ನೀರಾವರಿ ಸಲಹಾ ಸಮಿತಿಗೆ ಇಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಪ್ರಾಧಿಕಾರ ಸೇರಿದಂತೆ ನೀರಾವರಿ ಅಧಿಕಾರಿಗಳು ಸಾಕಷ್ಟು ಶ್ರಮದಿಂದ ಇಲ್ಲಿಯವರೆಗೆ ರೈತರ ಬೆಳೆಗೆ ನೀರು ಹರಿಸಲಾಗಿದೆ. ಇನ್ನೂ ಮುಂದೆ ನೀರು ಹರಿಸುವುದು ಕಷ್ಟ ಸಾಧ್ಯ ಎಂದು ಹೇಳಿದರು.
ಪ್ರಸ್ತುತ ಅಣೆಕಟ್ಟೆಯಲ್ಲಿ 16 ಟಿಎಂಸಿ ನೀರಿದೆ. ಕುಡಿಯುವ ನೀರು, ಕೈಗಾರಿಕೆಗೆ ಬಳಕೆಗೆ ಮಾತ್ರ ಲಭ್ಯವಿದೆ. ಮುಂದಿನ ಜೂನ್ ವರೆಗೆ 14 ಟಿಎಂಸಿ ನೀರು ಕುಡಿಯಲು ಅಗತ್ಯವಾಗಿದೆ. 2 ರಿಂದ 3 ಟಿಎಂಸಿ ನೀರು ಬಳಕೆಗೆ ಸಾಧ್ಯವಾಗದು. ಉಳಿದ 13.50 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದರು.
ಅಣೆಕಟ್ಟೆ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವುದೇ ರೀತಿಯ ಅಲ್ಪಾವಧಿ ಅಥವಾ ದೀರ್ಘಾವಧಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದು. ಬೆಳೆ ಬೆಳೆದು ನೀವು ತೊಂದರೆ ಸಿಲುಕಿಕೊಳ್ಳುವುದು ಬೇಡ. ಮುಂಗಾರಿನಲ್ಲಿ ಪೂರ್ಣ ಪ್ರಮಾಣದಲ್ಲಿ ನೀರನ್ನು ಬಳಕೆ ಮಾಡಿದ್ದೇವೆ. ಬೆಳೆಗೆ ನಷ್ಟವಾಗಿಲ್ಲ. ಅಚ್ಚುಕಟ್ಟು ಬಿಟ್ಟು ಉಳಿದ ಜಿಲ್ಲೆಯ 7 ತಾಲೂಕುಗಳ ಪ್ರದೇಶಗಳಲ್ಲಿ ರೈತರಿಗೆ ಬರ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಎಂದು ತಿಳಿಸಿದರು.
ನೀರಾವರಿ ಸಲಹಾ ಸಮಿತಿ ಸಭೆಗೆ ಮಂಡ್ಯ, ಮೈಸೂರು ಸಂಸದರು ಹಾಗೂ ಮೈಸೂರು ಜಿಲ್ಲಾಡಳಿತ ದೂರ ಉಳಿದಿದ್ದಾರೆ ಎಂಬ ಪ್ರಶ್ನೆಗೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನಲೆಯಲ್ಲಿ ಪ್ರತಿ ಸಭೆಗೆ ಭಾಗಿಯಾಗುತ್ತಿದ್ದ ಮೈಸೂರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಾರಿ ಗೈರಾಗಿದ್ದಾರೆ ಎಂದರು.
ವರುಣ, ವಿಸಿ ಸೇರಿದಂತೆ ಎಲ್ಲಿಗೂ ಬಿಡಲು ಸಾಧ್ಯವಿಲ್ಲ. ಸಂಕ್ರಾಂತಿ ವೇಳೆ ನೀರು ಬಿಡುವಂತೆ ರೈತರು ಮನವಿ ಮಾಡಿದ್ದಾರೆ. ಜನವರಿ 10ರವರೆಗೆ ಕಾದು ನೋಡೋಣ. ಮುಂದೆ ಒಳ್ಳೆ ಮಳೆಯಾದರೆ ನೀರು ಬಿಡಲು ನಮ್ಮ ಅಭ್ಯಂತರವಿಲ್ಲ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್, ಕಾವೇರಿ ನೀರಾವರಿ ನಿಗಮದ ಮುಖ್ಯ ಅಭಿಯಂತರ ಆರ್.ಎನ್.ವೆಂಕಟೇಶ್, ಅಧೀಕ್ಷಕ ಅಭಿಯಂತರ ರಘುರಾಂ, ಕಾರ್ಯಪಾಲಕ ಅಭಿಯಂತರ ಜಯಂತ್ ಹಾಜರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications