ಮಂಡ್ಯದಲ್ಲಿ ಎರಡು ನಮ್ಮ ಅಪ್ಪಾಜಿ ಕ್ಯಾಂಟೀನ್ ಆರಂಭ
Recommended Video

ಮಂಡ್ಯ, ಡಿಸೆಂಬರ್ 04 : ಮಂಡ್ಯದಲ್ಲಿ ಕ್ಯಾಂಟೀನ್ ರಾಜಕಾರಣ ಜೋರಾಗಿದೆ. ನಗರದಲ್ಲಿ ಎರಡು 'ನಮ್ಮ ಅಪ್ಪಾಜಿ ಕ್ಯಾಂಟೀನ್'ಗಳು ಆರಂಭವಾಗಿವೆ. ಭಾನುವಾರ ಕು.ರಮ್ಯಾ ಕ್ಯಾಂಟೀನ್ ಆರಂಭವಾಗಿತ್ತು.
ಮಂಡ್ಯ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಡಾ.ಕೃಷ್ಣ, ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ನಮ್ಮ ಅಪ್ಪಾಜಿ ಕ್ಯಾಂಟೀನ್ಗಳಿಗೆ ಚಾಲನೆ ನೀಡಿದ್ದಾರೆ. ಈ ಮೂಲಕ ನಮ್ಮ ಅಪ್ಪಾಜಿ ಕ್ಯಾಂಟೀನ್ ಬೆಂಗಳೂರು ನಗರದ ಬಳಿಕ ಮಂಡ್ಯದಲ್ಲಿ ಪ್ರಾರಂಭಗೊಂಡಿದೆ.

ಮಹಾವೀರ ವೃತ್ತದಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಡಾ.ಕೃಷ್ಣ ಅವರು, ಹೊಸಹಳ್ಳಿ ವೃತ್ತದ ಬಳಿ ಎಂ.ಶ್ರೀನಿವಾಸ್ ಅವರು ನಮ್ಮ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದ್ದಾರೆ.
ಕು.ರಮ್ಯಾ ಕ್ಯಾಂಟೀನ್ : ಮಂಡ್ಯದ ಮಾಜಿ ಸಂಸದೆ, ಎಐಸಿಸಿ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯಾ ಅವರ ಹೆಸರಿನಲ್ಲಿ ಕು.ರಮ್ಯಾ ಕ್ಯಾಂಟೀನ್ ಮಂಡ್ಯದ ಅಶೋಕ ನಗರದ ತ್ರಿವೇಣಿ ರಸ್ತೆಯಲ್ಲಿ ಭಾನುವಾರ ಆರಂಭವಾಗಿದೆ. ರಘು ಎನ್ನುವವರು ಈ ಕ್ಯಾಂಟೀನ್ ಆರಂಭಿಸಿದ್ದು ಊಟ ಮತ್ತು ಉಪ ಹಾರಕ್ಕೆ 10 ರೂ. ದರವಿದೆ.
100 ದಿನ : ಜೆಡಿಎಸ್ ನಾಯಕ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಬೆಂಗಳೂರಿನಲ್ಲಿ ನಮ್ಮ ಅಪ್ಪಾಜಿ ಕ್ಯಾಂಟೀನ್ಅನ್ನು ಮೊದಲು ಆರಂಭಿಸಿದ್ದರು. ಈ ಕ್ಯಾಂಟೀನ್ 100 ದಿನಗಳನ್ನು ಪೂರೈಸಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಟಿ.ಎ.ಶರವಣ ಅವರು ಮಂಡ್ಯದಲ್ಲಿ ಕ್ಯಾಂಟೀನ್ ಆರಂಭವಾಗಲಿದೆ ಎಂದು ಹೇಳಿದ್ದರು. ನಮ್ಮ ಅಪ್ಪಾಜಿ ಕ್ಯಾಂಟೀನ್ನಲ್ಲಿ 5ರೂ.ಗೆ ಉಪಹಾರ, 10 ರೂ.ಗೆ ಊಟ ನೀಡಲಾಗುತ್ತಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications