ಕೌಟುಂಬಿಕ ಸಮಸ್ಯೆಗೆ ಬೇಸತ್ತು ವೃದ್ಧ ದಂಪತಿ ಆತ್ಮಹತ್ಯೆ
ಮಂಡ್ಯ, ನವೆಂಬರ್.21: ಕೌಟುಂಬಿಕ ಸಮಸ್ಯೆಯಿಂದಾಗಿ ವೃದ್ಧ ದಂಪತಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.
ಬೊಮ್ಮೇನಹಳ್ಳಿ ಗ್ರಾಮದ ನಿವಾಸಿಗಳಾದ ಬೋರಲಿಂಗೇಗೌಡ(60), ಪತ್ನಿ ಲಕ್ಷ್ಮಮ್ಮ(52) ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ.
ದಂಪತಿಗಳು ಸೋಮವಾರ ರಾತ್ರಿ ಮನೆಯಲ್ಲಿ ಬೇರೆ ಸದಸ್ಯರು ಮಲಗಿದ ವೇಳೆ ತಾವು ನಡುರಾತ್ರಿ ಎದ್ದು ಮನೆಯಿಂದ ಹೊರಬಂದು ಬಳಿಕ ನೇರವಾಗಿ ತಮ್ಮ ಜಮೀನಿಗೆ ತೆರಳಿದ್ದಾರೆ. ನಂತರ ಜಮೀನಿನಲ್ಲಿ ಬೆಳೆಗಳಿಗೆ ಕೀಟಬಾಧೆ ಹತೋಟಿಗಾಗಿ ಹಾಕುವ ಕ್ರಿಮಿನಾಶಕ ಮಾತ್ರೆಯನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳವಾರ ಬೆಳಗ್ಗೆ (ನ.20) ಮೃತ ದಂಪತಿ ಪುತ್ರ ರಾಜೇಶ್ ಎದ್ದು ನೋಡಿದಾಗ ಮನೆಯಲ್ಲಿ ತಂದೆತಾಯಿ ಕಾಣಿಸದೆ ಇದ್ದಾಗ ಹುಡುಕಾಟ ನಡೆಸಿದ್ದಾರೆ. ಆದರೆ ಅವರು ಮನೆಯಲ್ಲೂ ಕಾಣದೆ ಇದ್ದಾಗ ಎಲ್ಲಿ ಹೋಗಿರಬಹುದೆಂದು ಹುಡುಕಾಟ ನಡೆಸಿದ್ದಾರೆ.
ಕೊನೆಗೆ ಜಮೀನಿನ ಬಳಿ ಹೋಗಿ ಹುಡುಕಾಟ ನಡೆಸಿದಾಗ ಅಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ತಕ್ಷಣ ಪಟ್ಟಣದ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವೃದ್ಧ ದಂಪತಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅವರ ಒಬ್ಬನೇ ಮಗನಾಗಿರುವ ರಾಜೇಶ್ ತಾವು ಪೊಲೀಸರಿಗೆ ನೀಡಿರುವ ದೂರಿನಲ್ಲಿ ನಮ್ಮ ತಂದೆ, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣಮುಖರಾದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಸಾವಿನಲ್ಲಿ ಯಾವುದೇ ಅನುಮಾನವಿಲ್ಲ. ಅವರ ಸಾವಿಗೆ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಹಸ್ತಾಂತರಿಸಲಾಗಿದೆ. ಸಾವಿಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೆ ಹೊರ ಬರಬೇಕಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications