ಮಂಡ್ಯ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ, ಚಿನ್ನಾಭರಣ ಕಳವು
ಮಂಡ್ಯ, ಜೂನ್ 23: ಮನೆಗೆ ನುಗ್ಗಿ ವೃದ್ಧೆಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿ, ಆಕೆಯ ಮೈ ಮೇಲಿದ್ದ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ಹನುಮೇಗೌಡರ ಪತ್ನಿ ಜಯಮ್ಮ (70) ಕೊಲೆಯಾದ ವೃದ್ಧೆ. ದುಷ್ಕರ್ಮಿಗಳು ತಡರಾತ್ರಿ ಮನೆಯ ಮುಂಬಾಗಿಲು ಹೊಡೆದು ಮನೆಗೆ ನುಗ್ಗಿದ್ದಾರೆ. ಮಹಿಳೆಯ ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಜುಮಕಿ, ಉಂಗುರ ಹಾಗೂ ಮಾಟಿ ಸೇರಿದಂತೆ ಸುಮಾರು 75 ಗ್ರಾಂ. ಗೂ ಹೆಚ್ಚು ತೂಕದ ಒಡವೆ ಕಿತ್ತುಕೊಂಡು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈ ಪ್ರಕರಣ ಬೆಳಗಿನ ಜಾವ ಎಚ್ಚರವಾದಾಗ ಮನೆಯವರ ಗಮನಕ್ಕೆ ಬಂದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಂಪೋ ಮಾಲೀಕನ ಕೊಲೆ ಶಂಕೆ
ಇದೇ ಸಂದರ್ಭದಲ್ಲಿ ಸೋಮವಾರ ರಾತ್ರಿ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಸಾಲಿಗ್ರಾಮ-ಚುಂಚನಕಟ್ಟೆ ರಸ್ತೆಯಲ್ಲಿ ಟೆಂಪೋ ಟ್ರಾವೆಲ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಸಾಲಿಗ್ರಾಮದ ಟೆಂಪೋ ಟ್ರಾವಲರ್ ಮಾಲೀಕ ಆನಂದ್ (35) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಶ್ವಾನದಳದವರನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ. ಹತ್ಯೆಯನ್ನು ಮರೆಮಾಚಲು ಬೈಕ್ ಅಪಘಾತದ ರೀತಿಯಲ್ಲಿ ಬಿಂಬಿಸಲಾಗಿದೆ. ಹತ್ಯೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಕೆ.ಆರ್ ನಗರ ವೃತ್ತ ನಿರೀಕ್ಷಕ ರಾಜು, ಉಪ ನಿರೀಕ್ಷಕ ಚೇತನ್, ಸಾಲಿಗ್ರಾಮ ಉಪ ಠಾಣೆಯ ಉಪ ನಿರೀಕ್ಷಕಿ ಆರತಿ ಮತ್ತು ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಹತ್ಯೆ ಪ್ರಕರಣ ಬಹಳ ನಿಗೂಢವಾಗಿದ್ದು ಹಣಕಾಸಿನ ವಿಚಾರಕ್ಕೋ ಅಥವಾ ಬೇರೆ ಯಾವ ಕಾರಣಕ್ಕೆ ನಡೆದಿದೆ ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications