ಭಾರೀ ಚರ್ಚೆಗೆ ಗ್ರಾಸವಾದ ಕೆಆರ್ ಎಸ್ನಲ್ಲಿ ಮೋಜು ಮಸ್ತಿ ವೀಡಿಯೋ ಈಗಿನದಲ್ಲ!
ಮಂಡ್ಯ, ಡಿಸೆಂಬರ್ 31: ಕೆ.ಆರ್.ಎಸ್. ಜಲಾಶಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಇದೆ. ಆದರೂ ಇಲ್ಲಿನ ಪೊಲೀಸರು ಹಾಗೂ ಅಧಿಕಾರಿಗಳ ಕಣ್ತಪ್ಪಿಸಿ ವ್ಯಕ್ತಿಯೊಬ್ಬ ವಾಹನವನ್ನು ಚಲಾಯಿಸಿ ಮೋಜು ಮಸ್ತಿ ನಡೆಸಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದ್ದು ಅದರ ವೀಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
ಆದರೆ ಅದು ಈಗಿನದಲ್ಲ ಎಂಟು ವರ್ಷಗಳ ಹಿಂದಿನದು ಎಂದು ಕಾವೇರಿ ನೀರಾವರಿ ನಿಗಮದ ಮೂಲಗಳು ಹೇಳಿವೆ. ಕಾನೂನು ಉಲ್ಲಂಘನೆ ಮಾಡಿ ಕೆಆರ್ ಎಸ್ನ ಹಿನ್ನೀರಿನಲ್ಲಿ ಕಾರನ್ನು ಚಾಲನೆ ಮಾಡಿರುವ ವ್ಯಕ್ತಿ ಮೈಸೂರಿನವನಾಗಿದ್ದು ಉದ್ಯಮಿ ವಿಕ್ರಂ ಗುಪ್ತಾ ಎಂದು ಗುರುತಿಸಲಾಗಿದೆ. ಈ ವೀಡಿಯೋಗಳನ್ನು ಆತನೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎನ್ನಲಾಗಿದೆ.

ಈತ ಹೀಗೆ ಮೋಜು ಮಸ್ತಿ ಮಾಡಲು ಭದ್ರತಾ ಲೋಪವೇ ಕಾರಣ ಎಂಬ ಆರೋಪ ಕೇಳಿಬಂದಿತಲ್ಲದೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಭದ್ರತೆ ಲೆಕ್ಕಿಸದೆ ನಿಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ, ಅಣೆಕಟ್ಟೆ ನೀರಿನೊಳಗೆ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿದ್ದರೂ ಕೆಆರ್ ಎಸ್ನ ಭದ್ರತಾ ಸಿಬ್ಬಂದಿ ಮೌನ ವಹಿಸಿರುವುದು ಏಕೆ ಎಂಬ ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದರಲ್ಲದೆ, ಸಾಮಾನ್ಯ ಜನರನ್ನು ಅಣೆಕಟ್ಟೆ ಬಳಿ ಬಿಡಲು ನಿರಾಕರಿಸುವ ಭದ್ರತಾ ಸಿಬ್ಬಂದಿ ವಿಕ್ರಂ ಗುಪ್ತನನ್ನು ಮೋಜು ಮಸ್ತಿ ಮಾಡಲು ಹೇಗೆ ಬಿಟ್ಟರು ಎಂದು ಹರಿಹಾಯ್ದಿದ್ದರು.

ಆದರೆ ಈ ವೀಡಿಯೋದ ಹಿಂದೆ ಬಿದ್ದವರಿಗೆ ಗೊತ್ತಾಗಿದ್ದು ಇದು ಸುಮಾರು ಎಂಟು ವರ್ಷಗಳ ಹಿಂದಿನ ವೀಡಿಯೋವಂತೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲ ವಿಷಯಗಳನ್ನು ಶೇರ್ ಮಾಡಿಕೊಳ್ಳುವ ಹುಚ್ಚುತನ ಹೆಚ್ಚಾದ ಹಿನ್ನಲೆಯಲ್ಲಿ ವಿಕ್ರಂ ಗುಪ್ತಾ ಕೂಡ ತನ್ನ ಬಳಿಯಿದ್ದ ಹತ್ತು ವರ್ಷಗಳ ಹಿಂದಿನ ವೀಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹರಿಯಬಿಟ್ಟಿದ್ದು ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications