ಆದಿಚುಂಚನಗಿರಿಯಲ್ಲಿ ಒಕ್ಕಲಿಗರ ವಧು-ವರರ ಸಮಾವೇಶ; 200 ಯುವತಿಯರಿಗೆ 10 ಸಾವಿರ ಯುವಕರ ನೋಂದಣಿ
ನಾಗಮಂಗಲ, ನವೆಂಬರ್, 14: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಸೋಮವಾರ ರಾಜ್ಯಮಟ್ಟದ ಒಕ್ಕಲಿಗ ವಧು-ವರರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಕೇವಲ 200 ಒಕ್ಕಲಿಗ ಯುವತಿಯರು ಪಾಲ್ಗೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಯುವಕರು ಆಗಮಿಸಿದ್ದರು. ವಧುಗಳು ಮತ್ತು ವರರ ಸಂಖ್ಯೆಯಲ್ಲಿದ್ದ ಈ ಅಂತರವನ್ನು ಗಮನಿಸಿದ ಆಯೋಜಕರಲ್ಲಿ ಅಚ್ಚರಿಯನ್ನು ಉಂಟುಮಾಡಿತ್ತು.
ರೈತ ಸಮೂಹದ ಹುಡುಗರೇ ಹೆಚ್ಚಿದ್ದರು
ವಧು-ವರರ ಸಮಾವೇಶಕ್ಕೆಂದು ಬಂದಿದ್ದ ಬಹುತೇಕ ಪೋಷಕರು ಭಾವಿ ಸೊಸೆ ಸಿಗಬಹುದೆ ಎಂದು ಹಾತೊರೆಯುತ್ತಿದ್ದರು. ವಧು-ವರರ ಸಮಾವೇಶಕ್ಕೆಂದು ಜನಸ್ತೋಮವೇ ಹರಿದುಬಂದಿತ್ತು. ಈ ಹಿನ್ನೆಲೆ ಚುಂಚನಗಿರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಚುಂಚನಗಿರಿ ಮಹಾ ಸಂಸ್ಥಾನ ಮಠ, ಸಮಾಜ ಸಂಪರ್ಕ ವೇದಿಕೆ, ರಾಜ್ಯ ಚುಂಚಾದ್ರಿ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ವಧು-ವರರ ಸಮಾವೇಶವನ್ನು ಆಯೋಜಿಸಲಾಗಿತ್ತು.
ಆದಿಚುಂಚನಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗರ ವಧು-ವರರ ಸಮಾವೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಈ ಸಮಾವೇಶ ಜಾತ್ರೆಯಂತೆ ಕಂಡು ಬಂದಿದ್ದು, ಗಮನ ಸೆಳೆದಿದೆ. ವಧುಗಳಿಗಿಂತ ವರರ ಸಂಖ್ಯೆಯೇ ಹೆಚ್ಚಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ವಧು-ವರರ ಸಮಾವೇಶದಲ್ಲಿ ರೈತ ಸಮೂಹದ ಹುಡುಗರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಇನ್ನು ವಿಶೇಷವಾಗಿದೆ.

ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಧು-ವರರು
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ವಾರಕ್ಕೂ ಮೊದಲೇ ಸುಮಾರು 13 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದರು. ತಮ್ಮ ಪೋಷಕರೊಂದಿಗೆ ಜೊತೆಗೂಡಿ ವಧು-ವರರು ಆಗಮಿಸಿದ್ದರಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಬಿಜಿಎಸ್ ಸಭಾಮಂಟಪದಲ್ಲಿ ಭಾನುವಾರ ಬೆಳಗ್ಗೆ 9:30ಕ್ಕೆ ಆರಂಭವಾದ ಸಮಾವೇಶ ಮಧ್ಯಾಹ್ನ 2 ಗಂಟೆಯವರೆಗೂ ನಡೆಯಿತು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವರರು ವೇದಿಕೆ ಮೇಲೆ ನಿಂತು ತಮ್ಮ ವಿವಿರಗಳನ್ನು ತಿಳಿಸಿದರು. ಸ್ವವಿವರ ತಿಳಿಸಲು ಸರದಿ ಸಾಲಿನಲ್ಲಿ ನಿಂತು ಸಾಗುತ್ತಿದ್ದರಿಂದ ನೂಕುನುಗ್ಗಲು ಸಂಭವಿಸಿತ್ತು. ಆಗ ಕೆಲ ಪೋಷಕರು ನೂಕುನುಗ್ಗಲಿನಲ್ಲಿ ಆಯತಪ್ಪಿ ಕೆಳಗೆ ಬಿದ್ದು ಅಸ್ವಸ್ಥರಾಗಿದ್ದರು. ಇನ್ನು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತು.
ವಧುಗಳಿಗಿಂತ ವರರ ಸಂಖ್ಯೆಯೇ ಹೆಚ್ಚಾಗಿದ್ದರಿಂದ ವಧುಗಳ ಪಾಲಕರು ಸಮಾವೇಶದ ವೇದಿಕೆ ಹತ್ತಲು ಹಿಂದೇಟು ಹಾಕಿದ್ದರು. ವಧು-ವರರ ಸಮಾವೇಶದಲ್ಲಿ ರೈತ ಸಮೂಹಹ ಹುಡುಗರೇ ಹೆಚ್ಚಾಗಿದ್ದು ವಿಶೇಷವಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಭಾನುವಾರ ಬೆಳ್ಳೂರು ಕ್ರಾಸ್ನಿಂದ ಆದಿಚುಂಚನಗಿರಿವರೆಗೆ ಉಚಿತ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

ಸಮುದಾಯದವರು ಒಗ್ಗಟ್ಟಾಗಲು ಕರೆ
ಸಮಾವೇಶದಲ್ಲಿ ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿದ್ದು, ಸಮಾವೇಶಕ್ಕೆ ಇಷ್ಟೊಂದು ದೊಡ್ಡಮಟ್ಟದಲ್ಲಿ ವಧು-ವರರು ಪಾಲ್ಗೊಳ್ಳುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಒಕ್ಕಲಿಗರ ವಧು-ವರರ ಸಮಾವೇಶವನ್ನು ಆಯೋಜಿಸಲಾಗುವುದು ಎಂದರು.
ನಂತರ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಬರುವಂತಹ ಸಂದರ್ಭದಲ್ಲಿ ಹಾಗೂ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾದರೆ ಗ್ರಾಮೀಣ ಪ್ರದೇಶದಲ್ಲಿರುವ ಸಮುದಾಯದ ಪ್ರತಿಯೊಬ್ಬರು ಹೋರಾಟಕ್ಕೆ ಬರಬೇಕು ಎಂದು ಕರೆ ನೀಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications