ಮಂಡ್ಯ: ಹಸಿರುವನವಾಗಿದೆ ನಾಗಮಂಗಲದ ಈ ಸಾರಿಗೆ ಕಚೇರಿ ಆವರಣ
ಮಂಡ್ಯ, ಸೆಪ್ಟೆಂಬರ್ 3: ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳು ಆಯಾಯ ಇಲಾಖೆಯ ಕೆಲಸ ಕಾರ್ಯಗಳಿಗಷ್ಟೆ ಸೀಮಿತವಾಗಿರುತ್ತವೆ. ಆದರೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಹೊರ ವಲಯದಲ್ಲಿರುವ ಸಹಾಯಕ ಸಾರಿಗೆ ಕಚೇರಿ ಮಾತ್ರ ವಿಭಿನ್ನವಾಗಿದೆ. ಸಾರಿಗೆ ಇಲಾಖೆಯ ಆವರಣದಲ್ಲಿರುವ ಖಾಲಿ ಜಾಗದಲ್ಲಿ ಬೆಲೆಬಾಳುವ ಮರಗಳು, ವಿವಿಧ ಆಯುರ್ವೇದ ಗಿಡಗಳನ್ನು ಬೆಳೆಯಲಾಗಿದೆ.
Recommended Video
ಕಚೇರಿ ಕಟ್ಟಡದ ಆವರಣದ ಸುಮಾರು ಐದು ಎಕರೆ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಮರಗಿಡಗಳನ್ನು ಬೆಳೆಸಲಾಗಿದೆ. ಅದರಲ್ಲೂ 200ಕ್ಕೂ ಹೆಚ್ಚು ವಿವಿಧ ಪ್ರಭೇದಗಳ ಆಯುರ್ವೇದ ಗಿಡಗಳಿರುವುದೇ ಇಲ್ಲಿನ ವಿಶೇಷ. ಇದೆಲ್ಲವೂ ಸಾಧ್ಯವಾಗಿರುವುದು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರಿಗೆ ಅಧೀಕ್ಷಕ ಎಂ.ಜಿ.ಎನ್.ಪ್ರಸಾದ್ ಅವರ ಪರಿಸರ ಪ್ರೇಮದಿಂದ.

ಆಯುರ್ವೇದ ಗಿಡಗಳಿಗೆ ಒತ್ತು: ಪರಿಸರ ಪ್ರೇಮಿಯಾಗಿರುವ ಪ್ರಸಾದ್ ಅವರು ಅಧಿಕಾರ ವಹಿಸಿಕೊಂಡ ಬಳಿಕ, ಖಾಲಿಯಿದ್ದ ಜಾಗದಲ್ಲಿ ಮರಗಿಡಗಳನ್ನು ನೆಡುವ ಚಿಂತನೆ ಮಾಡಿದರು. ನೆರಳು ನೀಡುವ ಹೊಂಗೆಮರ, ಹೆಬ್ಬೇವು ಮರಗಳು, ಹಣ್ಣಿನ ಮರಗಳಾದ ಹಲಸು, ಸೀಬೆ, ಸಪೋಟ, ತೆಂಗಿನ ಗಿಡಗಳನ್ನು ನೆಟ್ಟಿದ್ದಾರೆ. ಇದರೊಂದಿಗೆ ಮೈಸೂರಿನ ಆಯುರ್ವೇದ ಕಾಲೇಜು ನಿರ್ವಹಣೆ ಮಾಡುತ್ತಿರುವ ಚಂದನವನ ನರ್ಸರಿಯಿಂದ ಇನ್ನೂರಕ್ಕೂ ಹೆಚ್ಚು ಪ್ರಭೇದಗಳ ಆಯುರ್ವೇದ ಗಿಡಮೂಲಿಕೆಗಳಾದ ದೊಡ್ಡಪತ್ರೆ, ತುಳಸಿ, ಕೃಷ್ಣ ತುಳಸಿ, ಲವಂಗ, ಬಜೆ, ಅಗಸೆ, ಲವಂಚ, ಕಡುಬಸಳೆ, ಕೆಂಪು ಬಸಳೆ, ನಾಗದಾಳೆ, ಆಕರಿಕೆ ಸೇರಿದಂತೆ ನೂರಾರು ಬಗೆಯ ಗಿಡಮೂಲಿಕೆಗಳನ್ನು ಪೋಷಿಸುತ್ತಿದ್ದಾರೆ.

ಸಾಧಕ ಹೆಣ್ಣುಮಕ್ಕಳ ನಾಮಫಲಕ: ಇಲ್ಲಿರುವ ಗಿಡಮರಗಳನ್ನು ನೆಟ್ಟು ಪೋಷಿಸುವುದಷ್ಟೆ ಅಲ್ಲದೆ ಇಲ್ಲಿ ಬೆಳೆದು ನಿಂತಿರುವ ಗಿಡ-ಮರಗಳಿಗೆ ಹೆಣ್ಣು ಮಕ್ಕಳ ಮತ್ತು ಸಾಧನೆ ಮಾಡಿದ ಮಹಿಳೆಯರ ಹೆಸರಿನ ನಾಮಫಲಕವನ್ನು ಹಾಕಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಎಲ್ಲರೂ ಪರಿಸರದ ಬಗ್ಗೆ ಮಾತನಾಡುತ್ತಾರೆ. ಆದರೆ ಪರಿಸರ ಸಂರಕ್ಷಣೆ ಕುರಿತಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಸರದ ಕಾಳಜಿ ತೋರುವುದು ಅಪರೂಪವೇ. ಹೀಗಿರುವಾಗ ಪ್ರಸಾದ್ ಅವರ ಈ ಕಾರ್ಯ ಶ್ಲಾಘನೀಯವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications