ಅವಘಡದ ಸೂಚನೆ ನೀಡುತ್ತಿದೆ ಕೆ.ಆರ್.ಪೇಟೆ ಗ್ರಾಮದ ಈ ನೀರಿನ ಟ್ಯಾಂಕ್
ಮಂಡ್ಯ, ಅಕ್ಟೋಬರ್ 29: ಸಂಪೂರ್ಣ ಶಿಥಿಲವಾಗಿ ಇಂದೋ ನಾಳೆಯೋ ಬೀಳುವಂತಿರುವ ನೀರಿನ ಓವರ್ ಹೆಡ್ ಟ್ಯಾಂಕ್ ಗ್ರಾಮದ ಹೃದಯ ಭಾಗದಲ್ಲಿದ್ದರೂ ಅದನ್ನು ಗ್ರಾಮ ಪಂಚಾಯಿತಿ ತೆರವುಗೊಳಿಸದೆ ಅದರಲ್ಲಿಯೇ ನೀರನ್ನು ಸಂಗ್ರಹಿಸಿ ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ಹಳೆಯದಾದ ಓವರ್ ಹೆಡ್ ಟ್ಯಾಂಕ್ ದುಸ್ಥಿತಿಗೊಳಗಾಗಿದೆ. ಆದರೂ ಅದನ್ನು ತೆರವುಗೊಳಿಸದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದರೊಂದಿಗೆ ಅದನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಕಳೆದ ಹಲವು ವರ್ಷಗಳಿಂದ ಈ ಓವರ್ ಹೆಡ್ ಟ್ಯಾಂಕ್ನಲ್ಲಿ ನೀರು ಶೇಖರಣೆಯಾಗುತ್ತಿದೆ. ಸದ್ಯ ಟ್ಯಾಂಕ್ ಬಿರುಕು ಬಿಟ್ಟಿದ್ದು, ಯಾವಾಗ ಬೇಕಾದರೂ ಧರೆಗೆ ಉರುಳುವ ಸಾಧ್ಯತೆಯಿದೆ. ಈ ಟ್ಯಾಂಕ್ ಪಕ್ಕದಲ್ಲಿ ವಾಸ ಮಾಡುವ ಗ್ರಾಮದ ಸುಮಾರು ಇಪ್ಪತ್ತು ಕುಟುಂಬಗಳು ಯಾವಾಗ ಈ ಟ್ಯಾಂಕ್ ಬೀಳುತ್ತದೆಯೋ ಎಂಬ ಭಯದಲ್ಲಿಯೇ ದಿನ ಕಳೆಯುತ್ತಿದ್ದಾರೆ.

ಇಡೀ ಗ್ರಾಮಕ್ಕೆ ಈ ಓವರ್ ಹೆಡ್ ಟ್ಯಾಂಕ್ ನಲ್ಲಿ ನೀರು ಸಂಗ್ರಹಿಸಿ ಬಳಿಕ ಸರಬರಾಜು ಮಾಡಲಾಗುತ್ತಿದೆ. ಈ ಟ್ಯಾಂಕ್ ತೆರವುಗೊಳಿಸಬೇಕಾದರೆ ಮತ್ತೊಂದು ಸುಸ್ಥಿತಿಯಲ್ಲಿರುವ ಟ್ಯಾಂಕ್ ನಿರ್ಮಾಣ ಮಾಡಬೇಕಾದ ಅಗತ್ಯವಿದೆ. ಆದರೆ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಸದ್ಯ ಹಳೆಯ ಟ್ಯಾಂಕ್ ಸ್ಥಿತಿ ಹೀಗಿದ್ದರೂ ಅದರಲ್ಲಿಯೇ ನೀರು ಶೇಖರಣೆ ಮಾಡುತ್ತಿದ್ದಾರೆ.
Recommended Video
ಈ ನಡುವೆ ಇಲ್ಲಿನ ನಿವಾಸಿಗಳು ಓವರ್ ಹೆಡ್ ಟ್ಯಾಂಕ್ ದುರಸ್ತಿ ಪಡಿಸಿ ಎಂದು ತಾಲೂಕು ಪಂಚಾಯಿತಿ ಅಧಿಕಾರಗಳಿಗೆ ಮನವಿ ನೀಡಿದ್ದಾರೆ. ಆದರೆ ಪಂಚಾಯಿತಿ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ವಹಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇನ್ನಾದರೂ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ಹರಿಸಿ ಈ ಓವರ್ ಹೆಡ್ ಟ್ಯಾಂಕ್ ರಿಪೇರಿ ಮಾಡಿಸಬೇಕು ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಾಮು ಆಗ್ರಹಿಸಿದ್ದಾರೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications