ಹಲ್ಲೆಗೊಳಗಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ
ಮಂಡ್ಯ, ಅಕ್ಟೋಬರ್ 27 : ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದ ಕಾರಣ ಆತನ ಅಂಗಾಂಗಗಳನ್ನು ದಾನ ಮಾಡುವುದರೊಂದಿಗೆ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಸಚಿನ್ ಹಲ್ಲೆಗೆ ಒಳಗಾಗಿದ್ದ ಯುವಕ. ಸಂಬಂಧಿಕರಿಂದಲೇ ಹಲ್ಲೆಗೊಳಗಾಗಿದ್ದ ಸಚಿನ್ ಗಂಭೀರವಾಗಿ ಗಾಯಗೊಂಡಿದ್ದನು. 12 ದಿನಗಳ ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡಿತ್ತು. ಮಗನ ದೇಹ ಮಣ್ಣಾದರೂ ಆತನ ಅಂಗಾಂಗಗಳು ಮತ್ತಷ್ಟು ಜನರ ಬಾಳಿಗೆ ಬೆಳಕಾಗಲಿ ಎಂಬ ಉದ್ದೇಶದಿಂದ ತಂದೆ ಲಿಂಗರಾಜು ಅಂಗಾಂಗ ಮಾಡುವ ನಿರ್ಧಾರ ತೆಗೆದುಕೊಂಡು ನೋವಲ್ಲು ಸಾರ್ಥಕತೆ ಮೆರೆದರು.
ಘಟನೆ ವಿವರ
ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಚಿನ್ ಊರ ಹಬ್ಬಕ್ಕಾಗಿ ಮಲ್ಲನಾಯಕನಹಳ್ಳಿ ಗ್ರಾಮಕ್ಕೆ ಕೆಲ ದಿನಗಳ ಹಿಂದೆ ಹಿಂದಿದ್ದನು. ಅಕ್ಟೋಬರ್ 10 ರಂದು ಸಚಿನ್ ಅಣ್ಣನ ಬಾಮೈದ ರಾಜು ಮತ್ತು ಸ್ನೇಹಿತರು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಚಿನ್ ಹತ್ಯೆಗೆ ಯತ್ನಿಸಿದ್ದಾರೆ. ರಾಜು ಹಾಗೂ ಆತನ ಸ್ನೇಹಿತರಾದ ಆಕಾಶ್, ನಿತಿನ್ ಎಂಬುವರು ರಾತ್ರಿ ವೇಳೆ ದಾಳಿ ಮಾಡಿ ಸಚಿನ್ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಹಲ್ಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಶಂಕಿಸಲಾಗಿದೆ.

ಹಲ್ಲೆಗೊಳಗಾದ ಸಚಿನ್ನನ್ನು ಸ್ಥಳೀಯರ ನೆರವಿನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನ ಚಿಕಿತ್ಸೆ ಬಳಿಕ ಸಚಿನ್ನನ್ನು ಮಂಡ್ಯ ಮಿಮ್ಸ್ಗೆ ರವಾನೆ ಮಾಡಲಾಗಿತ್ತು. 12 ದಿನದ ಬಳಿಕ ಸಚಿನ್ ಮೆದುಳು ನಿಷ್ಕ್ರಿಯವಾಗಿದೆ ಎಂದು ಮಿಮ್ಸ್ ವೈದ್ಯರು ದೃಢಪಡಿಸಿದರು. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ದೇಹ ಸುಟ್ಟು ಬೂದಿಯಾಗುವ ಬದಲು ನಾಲ್ಕು ಜನಕ್ಕೆ ಅನುಕೂಲವಾಗಲಿ ಎಂದು ಎಂದು ತಂದೆ ಲಿಂಗರಾಜು ಈ ನಿರ್ಧಾರ ಮಾಡಿದರು. ಅಂಗಾಂಗ ದಾನ ಮಾಡಲು ಮಿಮ್ಸ್ನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಗಾಯಾಳು ಸಚಿನ್ನ ದೇಹವನ್ನು ರವಾನೆ ಮಾಡಲಾಯಿತು.
ಬೆಂಗಳೂರಿನಲ್ಲಿ ವೈದ್ಯರ ಚಿಕಿತ್ಸೆಗೆ ಸ್ವಲ್ಪ ಮಟ್ಟಿಗೆ ಸಚಿನ್ ಸ್ಪಂದಿಸಿದ್ದ. ಮತ್ತೆ ಕೆಲ ದಿನಗಳ ನಂತರ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಚಿಕಿತ್ಸೆ ಸ್ಪಂದಿಸುವುದಿಲ್ಲ ಎಂಬ ವೈದ್ಯರ ಘೋಷಣೆಯಿಂದಾಗಿ ಬುಧವಾರ ಅಂಗಾಂಗ ದಾನ ಮಾಡಿ ಸ್ವಗ್ರಾಮ ಮಲ್ಲನಾಯಕನಕಟ್ಟೆಗೆ ತಂದು ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಇನ್ನು ಘಟನೆ ನಡೆದು 15 ದಿನ ಕಳೆದರೂ ಆರೋಪಿಗಳನ್ನು ಬಂಧಿಸ ಶಿವಳ್ಳಿ ಪೊಲೀಸರ ಕ್ರಮಕ್ಕೆ ಕುಟುಂಬದವರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications