ಸಿಂಗಾಪುರ; ಮೆದುಳು ನಿಷ್ಕ್ರಿಯ, ಮಗನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು
ಮಂಡ್ಯ, ನವೆಂಬರ್, 30: ಪಾಂಡವಪುರ ತಾಲೂಕಿನ ಸಿಂಗಾಪುರ ಗ್ರಾಮದ 22 ವರ್ಷದ ಸಚಿನ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿದಾಗ, ವೈದ್ಯರು ಗಾಯಾಳುವಿನ ಮೆದುಳು ನಿಷ್ಕ್ರಿಯವಾಗಿರುವುದಾಗಿ ತಿಳಿಸಿದ್ದರು. ಇದೀಗ ಕುಟುಂಬದವರು ಸಚಿನ್ ಅಂಗಾಂಗಳನ್ನು ದಾನ ಮಾಡುವ ಮೂಲಕ ಅತೀವ ನೋವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.
ಮಗನ ಅಂಗಾಂಗಗಳ ದಾನ
ಮಗ ಬದುಕಿ ಉಳಿಯುವುದಿಲ್ಲ ಎಂಬುದು ತಿಳಿದ ಮೇಲೂ ಕುಟುಂಬದವರು ತಮ್ಮ ನೋವನ್ನು ನುಂಗಿಕೊಂಡು, ವೈದ್ಯರ ಸಲಹೆಯ ಮೇರೆಗೆ ಸಚಿನ್ ಅಂಗಾಂಗಳನ್ನು ದಾನ ಮಾಡಲು ನಿರ್ಧರಿಸಿದರು. ಈ ಮೂಲಕ ಹಲವು ರೋಗಿಗಳಿಗೆ ನೆರವಾಗಿದ್ದು, ಸಚಿನ್ ಅವರನ್ನು ಜೀವಂತಗೊಳಿಸಿದರು. ನಂತರ ಕುಟುಂಬದವರ ಒಪ್ಪಿಗೆಯ ಮೇರೆಗೆ ಜೆಎಸ್ಎಸ್ ಆಸ್ಪತ್ರೆಯ ವೈದ್ಯರು ಸಚಿನ್ ಅವರ ಹೃದಯ, ಕಿಡ್ನಿ, ನೇತ್ರಗಳನ್ನು ಪಡೆದರು. ಸಚಿನ್ನ ಅಂಗಾಂಗಗಳನ್ನು ಜೀವನ್ಮರಣದ ನಡುವೆ ಹೋರಾಡುತ್ತಿರುವ ರೋಗಿಗಳಿಗೆ ಹಸ್ತಾಂತರಿಸಿದರು. ಸಚಿನ್ ಅವರ ಅಂಗಾಂಗಗಳನ್ನು ದಾನ ಮಾಡಿದ ಕುಟುಂಬದವರಿಗೆ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಗೌರವ ಸಲ್ಲಿಸಿದರು.
ನವೆಂಬರ್ 28ರಂದು ನಡೆದಿದ್ದ ಅಪಘಾತ
ನವೆಂಬರ್ 28ರಂದು ಕೆ.ಆರ್.ಪೇಟೆ ತಾಲೂಕು ಚಟ್ಟಂಗೆರೆ ಬಳಿ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ ಲೇಬರ್ ಕಾಂಟ್ರ್ಯಾಕ್ಟರ್ ಮಾಲೀಕರಾಗಿದ್ದ ಸಚಿನ್ ತಲೆಗೆ ತೀವ್ರ ಪೆಟ್ಟಾಗಿತ್ತು. ಸಚಿನ್ ಕೆ.ಆರ್.ಪೇಟೆ ತಾಲೂಕಿನ ತಂಡೆಕೆರೆ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಮೂರ್ನಾಲ್ಕು ಕಾರ್ಖಾನೆಗಳಿಗೆ ಸುಮಾರು 200ಕ್ಕೂ ಹೆಚ್ಚು ನೌಕರರನ್ನು ಕೆಲಸಕ್ಕೆ ನಿಯೋಜಿಸಿದ್ದರು. ಆ ಮೂಲಕ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇದೀಗ ಅವರ ನಿಧನ ನಂತರವೂ ದೇಹದ ಅಂಗಾಂಗಗಳನ್ನು ಇತರೆ ರೋಗಿಗಳಿಗೆ ನೀಡುವ ಮೂಲಕ ಅಮರರಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದರು.

ಕ್ರಿಮಿನಾಶಕ ಮಿಶ್ರಿತ ನೀರು ಸೇವನೆ, ಅಸ್ವಸ್ಥ
ಇನ್ನು ಇತ್ತೀಗಷ್ಟೇ ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿದಂತೆ 14 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಸಮೀಪದ ಹೊಸಕೊಪ್ಪಲು ಬಳಿ ನಡೆದಿತ್ತು. ಬಳ್ಳಾರಿ ಜಿಲ್ಲೆಯ ಕಬ್ಬು ಕಡಿಯುವ ಕೂಲಿ ಕಾರ್ಮಿಕರಾದ ಚಂದ್ರನಾಯ್ಕ (26), ಮೀನಾಕ್ಷಿ ಬಾಯಿ (26), ಶಾಂತಾಬಾಯಿ (30), ಪಾಂಡುನಾಯ್ಕ (25), ರೇಣುಕಾನಾಯ್ಕ(25), ಸತ್ಯನಾಯ್ಕ (28), ಸೀತಾಬಾಯಿ (8), ಯೋಗೀಶ (10), ಅಂಬರೀಶ, ಯಕ್ಷ (5), ಸಂಜೀವ (8 ತಿಂಗಳು), ಬಾಲಾಜಿ (5), ಶರತ್ (6), ಆರತಿಬಾಯಿ (3) ಎನ್ನುವವರು ಅಸ್ವಸ್ಥರಾಗಿದ್ದರು.
ಬಳ್ಳಾರಿಯಿಂದ ಬಂದಿದ್ದ 30 ಕೂಲಿ ಕಾರ್ಮಿಕರು
ಬಳ್ಳಾರಿ ಮೂಲದ 30 ಕೂಲಿ ಕಾರ್ಮಿಕರು ಮಕ್ಕಳನ್ನು ಕರೆದುಕೊಂಡು ಮದ್ದೂರು ತಾಲೂಕಿನ ಕೊಪ್ಪಗೆ ಕಬ್ಬು ಕಟಾವಿಗೆ ಬಂದಿದ್ದರು. ಬಳ್ಳೇಕೆರೆ ಸಮೀಪದಲ್ಲಿರುವ ರೈಸ್ಮಿಲ್ ಬಳಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದರು. ಸಮೀಪದಲ್ಲಿರುವ ಗದ್ದೆಯಲ್ಲಿ ದೊಡ್ಡ ಡ್ರಂ ಇರುವುದನ್ನು ಕಂಡ ಕೂಲಿ ಕಾರ್ಮಿಕರು ಜಮೀನಿನ ಮಾಲೀಕನನ್ನು ಕೇಳಿ ನೀರು ತುಂಬಿಕೊಳ್ಳಲು ಡ್ರಂ ಪಡೆದಿದ್ದರು. ಅದರಲ್ಲಿ ನೀರು ತುಂಬಿಟ್ಟುಕೊಂಡು ಕುಡಿದಿದ್ದಾರೆ. ಜಮೀನು ಮಾಲೀಕ ಮನೆಗೆ ಬಂದು ತನ್ನ ಮಗನಿಗೆ ಕೂಲಿ ಕಾರ್ಮಿಕರಿಗೆ ಡ್ರಂ ನೀಡಿರುವ ವಿಚಾರ ತಿಳಿಸಿದ್ದ.
ಆಗ ಆ ಡ್ರಂನಲ್ಲಿ ಗದ್ದೆಗೆ ಸಿಂಪಡಿಸಲು ಕ್ರಿಮಿನಾಶಕ ತುಂಬಿದ್ದನ್ನು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಜಮೀನು ಮಾಲೀಕ ಗದ್ದೆ ಬಳಿ ಬಂದು ಕೂಲಿ ಕಾರ್ಮಿಕರಿಗೆ ನೀರು ಕುಡಿಯದಂತೆ ಎಚ್ಚರಿಕೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ನೀರು ಕುಡಿದಿದ್ದ ಕೆಲವರು ಹೊಟ್ಟೆ ಉರಿಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಸಮೀಪದ ಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ಗೆ ದಾಖಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications