KRS Dam: ಕೆಆರ್ಎಸ್ಗೆ ಕೇಂದ್ರ ಸಂಸದರ ಜಲ ಸಂಪನ್ಮೂಲಗಳ ಸಂಸದೀಯ ಸ್ಥಾಯಿ ಸಮಿತಿ ಭೇಟಿ
ಮಂಡ್ಯ: ಕೆಆರ್ಎಸ್ ಅಣೆಕಟ್ಟೆಗೆ ಕೇಂದ್ರ ಸಂಸದರ ಜಲ ಸಂಪನ್ಮೂಲಗಳ ಸಂಸದೀಯ ಸ್ಥಾಯಿ ಸಮಿತಿ ತಂಡ ಗುರುವಾರ ಭೇಟಿ ನೀಡಿ ಜಲಾಶಯದ ಸ್ಥಿತಿಗತಿ ಅಧ್ಯಯನ, ಪರಿಶೀಲನೆ ನಡೆಸಿದರು. ಕೇಂದ್ರ ತಂಡವನ್ನ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು, ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ನೇತೃತ್ವದಲ್ಲಿ ಅಧಿಕಾರಿಗಳ ನಿಯೋಗ ಸ್ವಾಗತಿಸಿದರು.
ಗುಜರಾತ್ ಸಂಸದ ಪರ್ಬಾತ್ಬಾಯಿ ಸವಾಬಾಯಿ ಪಟೇಲ್ ನೇತೃತ್ವದಲ್ಲಿ 17 ಜನ ಸಮಿತಿಯ ತಂಡದಲ್ಲಿ 14 ಜನರ ತಂಡ ಭೇಟಿ ನೀಡಿ ಕೆಆರ್ಎಸ್ ಅಣೆಕಟ್ಟೆ ವೀಕ್ಷಿಸಿದರು. ಇದೇ ವೇಳೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.

ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ಡ್ಯಾಂಗಳ ಸ್ಥಿತಿಗತಿ, ಈ ಭಾಗದ ರೈತರ ಸಮಸ್ಯೆ, ಡ್ಯಾಂ ಮತ್ತು ಬೃಂದಾವನ ಗಾರ್ಡನ್ ಅಭಿವೃದ್ಧಿಗೆ ಬೇಕಿರುವ ಅಗತ್ಯ ಅನುದಾನ ಕೋರಿ ಪುಟ್ಟರಾಜು ವಿಶೇಷ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಮಿತಿ ಕೂಡ ಸಕಾರಾತ್ಮವಾಗಿ ಸ್ಪಂದಿಸುವ ವಿಶ್ವಾಸವಿದೆ.
ಸಮಿತಿ ಮುಂದೆ ಸಮಸ್ಯೆಗಳ ಸರಮಾಲೆ
ಮಾಧ್ಯಮಗಳ ಜೊತೆ ಮಾಜಿ ಸಚಿವ ಪುಟ್ಟರಾಜು ಮಾತನಾಡಿ, ಬುಧವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಈ ರಾಜ್ಯದ ಕುಡಿಯುವ ನೀರಿನ ಸಮಸ್ಯೆ ಹಾಗೂ ಹಳೇ ಮೈಸೂರು ಪ್ರಾಂತ್ಯದ ಜನರು ಅನುಭವಿಸುತ್ತಿರುವ ಸಮಸ್ಯೆಗಳ ವಸ್ತುಸ್ಥಿತಿ ಬಗ್ಗೆ ಸಮಿತಿ ಸದಸ್ಯರಿಗೆ ಮನದಟ್ಟು ಮಾಡಿಕೊಡುವಂತೆ ಶ್ರೀಕಂಠೇಗೌಡ ಹಾಗೂ ನನಗೆ ಸೂಚನೆ ನೀಡಿದ್ದರು ಅದರಂತೆ ಇಂದು ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳಿಗೆ ಇಲ್ಲಿನ ನೀರಿನ ಸಮಸ್ಯೆಗಳ ಬಗ್ಗೆ ವಿವರವಾಗಿ ತಿಳಿಸಲಾಗಿದೆ ಎಂದರು.
ಮುಖ್ಯವಾಗಿ ಮೇಕೆದಾಟು ಯೋಜನೆ ಅನುಷ್ಠಾನಗೊಳ್ಳಲು ತಾವು ಇಲ್ಲಿರುವ ವಸ್ತುಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಮನದಟ್ಟು ಮಾಡಿಕೊಡುವ ಬಗ್ಗೆ ಸಹ ಅವರಿಗೆ ಮನವಿ ಮಾಡಿದ್ದೇವೆ ಎಂದು ಪುಟ್ಟರಾಜು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಈ ಹಿಂದಿನಿಂದಲೂ ಲೋಕಸಭಾ ಸದಸ್ಯರ ತಂಡವನ್ನು ಕಳುಹಿಸಿ ರಾಜ್ಯದ ನೀರಿನ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುವಂತೆ ಮನವಿ ಮಾಡುತ್ತಿದ್ದ ಹಿನ್ನಲೆಯಲ್ಲಿ ಗುರುವಾರ ಜಲ ಸಂಪನ್ಮೂಲಗಳ ಸಂಸದೀಯ ಸ್ಥಾಯಿ ಸಮಿತಿ ತಂಡ ಭೇಟಿ ನೀಡಿದೆ. ಈ ತಂಡ ಕೇಂದ್ರದ ಗಮನ ಸೆಳೆದು ರಾಜ್ಯದ ನೀರಿನ ಸಮಸ್ಯೆ ಪರಿಹರಿಸುವ ವಿಶ್ವಾಸವಿದೆ ಎಂದು ಹೇಳಿದರು. ಸಂಸದೀಯ ಸ್ಥಾಯಿ ಸಮಿತಿ ಭೇಟಿ ವೇಳೆ ಸ್ಥಳೀಯ ಸಂಸದೆ ಸುಮಲತಾ ಗೈರಾಗಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications