Pay Farmer- ಮಂಡ್ಯದಲ್ಲಿ ರೈತರಿಂದ ಪೇ ಫಾರ್ಮರ್ ಅಭಿಯಾನ
ಮಂಡ್ಯ, ಸೆಪ್ಟೆಂಬರ್ 25: ಕಾಂಗ್ರೆಸ್ಸಿಗರು ಪೇ ಸಿಎಂ ಆಂದೋಲನ ಹಮ್ಮಿಕೊಂಡು ರಾಜ್ಯಾದ್ಯಂತ ಬಿಜೆಪಿ ಸರ್ಕಾರವನ್ನು ಪೇಚಿಗೆ ಸಿಲುಕಿಸುವ ಕರ್ಯವನ್ನು ಮಾಡುತ್ತಿದೆ. ಇತ್ತ ಮಂಡ್ಯದಲ್ಲಿ ರೈತರು ಪೇ ಫಾರ್ಮರ್ ಅಭಿಯಾನ ಪ್ರಾರಂಭಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗೆ ಸರಬರಾಜು ಮಾಡುವ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದ್ದು, ಪೇ ಫಾರ್ಮರ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಇದೀಗ ಈ ಅಭಿಯಾನ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ರೈತರು ಸರ್ಕಾರ, ಸಂಬಂಧಿಸಿದ ಸಚಿವರು, ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಮನವಿ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದ್ದರು. ಹಾಗೂ ರೈತರು ಹೋರಾಟವನ್ನು ತೀವ್ರಗೊಳಿಸಿದ್ದರು.
ಇಷ್ಟೆಲ್ಲ ಮನವಿ ಸಲ್ಲಿಸಿದರೂ ಸರ್ಕಾರ ಮಾತ್ರ ಇತ್ತ ಕಿವಿಗೊಡಲಿಲ್ಲ. ಇದೀಗ ಪೇ ಪಾರ್ಮರ್ ಎಂಬ ಅಭಿಯಾನಕ್ಕೆ ರೈತ ಸಂಘ ನಾಂದಿ ಹಾಡಿದೆ.
ಪೇ ಫಾರ್ಮರ್ ಅಕ್ಸಪ್ಟೆಡ್ ಇಯರ್, ರೂಪಾಯಿ 4,500 ಪರ್ ಟನ್ ಪಾರ್ ಶುಗರ್ ಕೇನ್ ಎಂಬ ಘೋಷವಾಕ್ಯ ಕೂಗಿದ್ದಾರೆ. ಇದರೋದಿಗೆ ಪೇಟಿಎಂ ಚಿಹ್ನೆ ಬಳಸಿ ಅದಕ್ಕೆ ರೈತನ ಚಿತ್ರವನ್ನು ಕ್ಯೂಆರ್ ಕೋಡ್ ಮೂಲಕ ಸೃಷ್ಠಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಇನ್ನಾದರೂ ಸರ್ಕಾರಗಳು ರೈತರ ಬೆಳೆಗಳಿಗೆ ಸರಿಯಾದ ಬೆಲೆ ನೀಡಬೇಕು ಎಂದು ರೈತ ಮುಖಂಡರ ಒತ್ತಾಯವಾಗಿದೆ. ಇದಕ್ಕೆ ಸರ್ಕಾರ ಯಾವ ರೀತಿ ಸ್ಪಂಧಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಬಳ್ಳಾರಿಯಲ್ಲೂ ಪೇ ಸಿಎಂ ಅಭಿಯಾನ
ರಾಜ್ಯ ಸರ್ಕಾರದ ಎದುರಿಸುತ್ತಿರುವ ಭ್ರಷ್ಟಾಚಾರ ಆರೋಪದ ಪ್ರಚಾರ ಅಭಿಯಾನದ ಭಾಗವಾಗಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪೇಸಿಎಂ ಪೋಸ್ಟರ್ ಅಭಿಯಾನವನ್ನು ಬಳ್ಳಾರಿಯಲ್ಲೂ ನಡೆಸಲಾಯಿತು. ಬಳ್ಳಾರಿಯ ಮೋತಿ ವೃತ್ತದ ಬಳಿ ರೈಲ್ವೇ ನಿಲ್ದಾಣದ ಕಾಂಪೌಂಡ್ಗೆ ಸಂಸದರಾದ ಡಾ.ಕೆ.ಎಲ್.ಹನುಮಂತಯ್ಯ, ಡಾ.ಸಯ್ಯದ್ ನಾಸಿರ್ ಹುಸೇನ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಪೇ ಸಿಎಂ ಪೋಸ್ಟರ್ ಅಂಟಿಸಿದರು. ಈ ವೇಳೆ ಪೇಸಿಎಂಗೆ ಧಿಕ್ಕಾರ ಎಂಬ ಘೋಷನೆಗಳನ್ನು ಕೂಗಲಾಯಿತು.
ಪೇ ಸಿಎಂ ಪೋಸ್ಟರ್ ಅಂಟಿಸಿದ ಬಳಿಕ ಮಾತನಾಡಿದ ಶಾಸಕ ಬಿ. ನಾಗೇಂದ್ರ ಅವರು, ಬೆಂಗಳೂರು ಒಂದೇ ಅಲ್ಲ. ಇಡೀ ರಾಜ್ಯಾದ್ಯಂತ ಪೇ ಸಿಎಂ ಅಭಿಯಾನವನ್ನ ಮಾಡುತ್ತದ್ದೇವೆ. 224 ಕ್ಷೇತ್ರಗಳಲ್ಲೂ ಪೇ ಸಿಎಂ ಭಿತ್ತಿ ಪತ್ರ ಅಂಟಿಸುತ್ತೇವೆ. ಪೇ ಸಿಎಂ ಅಭಿಯಾನ ನೋಡಿ ಹೊರ ರಾಜ್ಯದ ಶಾಸಕರೂ ಆಶ್ಚರ್ಯ ಪಡುತ್ತಿದ್ದಾರೆ. 40% ಮಾಡಿದ್ದಾರಾ ಎಂದು ಆಶ್ಚರ್ಯದಿಂದ ಕೇಳುತ್ತಾ ಇದ್ದಾರೆ. ಬೊಮ್ಮಾಯಿ ಸರ್ಕಾರ 40 % ಗುಟ್ಟನ್ನು ನಾವು ರಟ್ಟು ಮಾಡುತ್ತಿದ್ದೇವೆ ಎಂದು ಆಕ್ರೋಶವನ್ನು ಹೊರಹಾಕಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications