ಕೊಕ್ಕರೆಬೆಳ್ಳೂರಿನಲ್ಲಿ ಆತಂಕ ತಂದ ಪೆಲಿಕಾನ್ ಸಾವು!
ಮಂಡ್ಯ, ಜನವರಿ 11: ಹಕ್ಕಿ ಜ್ವರದ ಆತಂಕ ಮನೆ ಮಾಡಿರುವ ಬೆನ್ನಲ್ಲೇ ಪಕ್ಷಿಧಾಮ ಕೊಕ್ಕರೆಬೆಳ್ಳೂರಿನಲ್ಲಿ ಕೊಕ್ಕರೆ (ಫೆಲಿಕಾನ್)ಗಳು ಸಾವನ್ನಪ್ಪುತ್ತಿರುವುದು ಆತಂಕ ಉಂಟು ಮಾಡಿದೆ. ಒಂದೆಡೆ ಹಕ್ಕಿಜ್ವರದ ಭಯ ಮತ್ತೊಂದೆಡೆ ಪೆಲಿಕಾನ್ ಗಳ ಸಾವಿನ ಸಾವಿನ ಸರಣಿ ಮುಂದುವರೆಯುತ್ತಿರುವುದು ಪಕ್ಷಿಪ್ರಿಯರಲ್ಲಿ ಭಯವನ್ನುಂಟು ಮಾಡಿದೆ.
ಈಗ ಸಾವನ್ನಪ್ಪುತ್ತಿರುವ ಪೆಲಿಕಾನ್ ಗಳ ಸಾವಿಗೆ ಕಾರಣ ಹಕ್ಕಿ ಜ್ವರನಾ? ಅಥವಾ ಜಂತುಹುಳು ಬಾಧೆನಾ? ಎಂಬುದು ಪರೀಕ್ಷೆಯಿಂದ ಗೊತ್ತಾಗಬೇಕಾಗಿದೆ. ಮರದ ಮೇಲಿಂದ ಉರುಳಿ ಬಿದ್ದು ಪೆಲಿಕಾನ್ ಸಾವನ್ನಪ್ಪಿದ್ದು, ಇದರಿಂದ ಕಳೆದ ನವಂಬರ್ನಿಂದ ಇಲ್ಲಿವರೆಗೆ ಸಾವನ್ನಪ್ಪಿದ ಫೆಲಿಕಾನ್ಗಳ ಸಂಖ್ಯೆ 6ಕ್ಕೇ ಏರಿಕೆಯಾಗಿದೆ.
ಇದು ಇಲ್ಲಿನ ಪಕ್ಷಿ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ. ಇನ್ನು ಮೃತಪಟ್ಟ ಪೆಲಿಕಾನ್ ಕಳೆಬರದ ಪರೀಕ್ಷೆ ನಡೆಸಿದ ಪಶು ವೈದ್ಯ ಡಾ.ಸತೀಶ್ ಅವರು ಮಾತನಾಡಿ, "ಪೆಲಿಕಾನ್ ಗಳ ಸರಣಿ ಸಾವಿಗೆ ಜಂತುಹುಳುಗಳೇ ಕಾರಣವಾಗಿವೆ ಎಂಬುದು ಮೇಲ್ನೋಟಕ್ಕೆ ದೃಢಪಡುತ್ತಿದೆ. ಆದರೂ ಈ ಬಗ್ಗೆ ಹೆಚ್ಚಿನ ಪರೀಕ್ಷೆಗೆ ಉತ್ತರ ಪ್ರದೇಶದಲ್ಲಿರುವ ಇಂಡಿಯನ್ ವೆಟೆರ್ನರಿ ರೀಸರ್ಚ್ ಇನ್ಸ್ಟಿಟ್ಯೂಶನ್ ಹಾಗೂ ತಮಿಳುನಾಡು ಕೊಯಮತ್ತೂರಿನಲ್ಲಿರುವ ಸಕಾನ್ ಸಂಸ್ಥೆಗೆ ಪೆಲಿಕಾನ್ ಸ್ಯಾಂಪಲ್ ಕಳುಹಿಸಲಾಗಿದೆ. ಹಕ್ಕಿ ಜ್ವರದ ಭೀತಿಯಂತು ಇಲ್ಲ" ಎಂದು ಸ್ಪಷ್ಟಪಡಿಸಿದರು.

ಭಯದ ವಾತಾವರಣ ನಿರ್ಮಾಣ; ವಿದೇಶದಿಂದ ಸಂತಾನ ಅಭಿವೃದ್ಧಿಗಾಗಿ ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ಆಗಮಿಸುವ ಪೆಲಿಕಾನ್ ಗಳು, ಗ್ರಾಮದ ಮಧ್ಯೆಯೇ ಮರಗಳ ಮೇಲೆ ಗೂಡು ಕಟ್ಟಿ ವಾಸಿಸುವುದು ಮಾಮೂಲಿಯಾಗಿದೆ. ಇವು ಸುತ್ತಮುತ್ತಲಿನ ಜಮೀನುಗಳಿಂದ ಆಹಾರಗಳನ್ನು ಹೆಕ್ಕಿ ತಿನ್ನುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದೀಚೆಗೆ ಇವುಗಳು ಮೇಲಿಂದ ಮೇಲೆ ಸಾವನ್ನಪ್ಪುತ್ತಿವೆ.
ಮರದಲ್ಲಿ ಕುಳಿತ ಪೆಲಿಕಾನ್ ಗಳು ಇದ್ದಕ್ಕಿದ್ದಂತೆಯೇ ಮರದ ಮೇಲಿಂದ ಉರುಳಿ ಬಿದ್ದು ಸಾವನ್ನಪ್ಪುತ್ತಿವೆ. ಹೀಗೆ ಇದುವರೆಗೆ ಸುಮಾರು 125 ಕ್ಕೂ ಹೆಚ್ಚು ಫೆಲಿಕಾನ್ಗಳು ಮೃತಟ್ಟಿವೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಅರಣ್ಯ ಹಾಗೂ ಪಶು ಇಲಾಖೆ ಮತ್ತು ಹಲವು ಪಕ್ಷಿ ತಜ್ಞರು ಈ ಪೆಲಿಕಾನ್ ಗಳ ಸಾವಿಗೆ ಸಂಬಂಧಿಸಿದಂತೆ ಹಲವು ರೀತಿಯ ಪರೀಕ್ಷೆಗಳನ್ನು ಕೈಗೊಂಡಿದ್ದರೂ ಕೂಡ ಗ್ರಾಮದಲ್ಲಿ ಫೆಲಿಕಾನ್ಗಳ ಸಾವು ಮಾತ್ರ ನಿಂತಿಲ್ಲ.

ಇದು ಒಂದು ರೀತಿಯಲ್ಲಿ ಜನರನ್ನು ಭಯಭೀತರನ್ನಾಗಿಸಿದೆ. ಇದುವರೆಗೆ ಇವುಗಳ ಸಾವಿನ ಬಗ್ಗೆ ಅಷ್ಟೊಂದಾಗಿ ಜನ ತಲೆಕೆಡಿಸಿಕೊಳ್ಳದಿದ್ದರೂ ಈ ಬಾರಿ ಹಕ್ಕಿಜ್ವರ ಹಲವೆಡೆ ಕಂಡು ಬಂದಿರುವ ಈ ಸಮಯದಲ್ಲಿ ಪೆಲಿಕಾನ್ ಸಾವು ಭಯದ ವಾತಾವರಣವನ್ನು ನಿರ್ಮಿಸಿದೆ.
ಕಟ್ಟೆಚ್ಚರ: ಕೊಕ್ಕರೆ ಬೆಳ್ಳೂರಿನಲ್ಲಿ ಪೆಲಿಕಾನ್ ಮೃತಪಟ್ಟ ಕಾರಣ ಹಾಗೂ ಹಕ್ಕಿಜ್ವರದ ಭೀತಿಯಿಂದಾಗಿ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಪಕ್ಷಿಧಾಮದ ಆವರಣದಲ್ಲೆಲ್ಲಾ ಹೈಪರ್ ಕ್ಲೋರೈಡ್ನ್ನು ಸಿಂಪಡಿಸಲಾಗಿದೆ. ಪಕ್ಷಿಗಳ ಹಿಕ್ಕೆಗಳನ್ನು ಆಗಾಗ್ಗೆ ಪ್ರಯೋಗಾಲಯಕ್ಕೆ ಕಳುಹಿಸಿ ಪಕ್ಷಿಗಳಿಗೆ ತೊಂದರೆ ಇರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ










Click it and Unblock the Notifications