Get Updates
Get notified of breaking news, exclusive insights, and must-see stories!

ಮೈಶುಗರ್ ಉಳಿಸಿಕೊಳ್ಳುವ ಇಚ್ಚಾಶಕ್ತಿ ಸರ್ಕಾರಕ್ಕಿಲ್ಲ- ಸಿದ್ದರಾಮೇಗೌಡ ಅಸಮಾಧಾನ

ಮೈಸೂರು ಮಹಾರಾಜರಿಂದ ಕೊಡುಗೆಯಾಗಿ ಬಂದಿರುವ ಮೈಶುಗರ್ ಕಾರ್ಖಾನೆಯನ್ನು ಉಳಿಸಿಕೊಂಡು ಸಮರ್ಥವಾಗಿ ಮುನ್ನಡೆಸುವ ಇಚ್ಛಾಶಕ್ತಿ ಆಳುವ ಸರ್ಕಾರಗಳಿಗೂ ಇಲ್ಲ, ಜನಪ್ರತಿನಿಧಿಗಳಿಗೂ ಇಲ್ಲ ಎಂದು ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷರುಗಳ ವೇದಿಕೆ ಸಂಚಾಲಕ ಸಿದ್ದರಾಮೇಗೌಡ ಆರೋಪಿಸಿ

ಮಂಡ್ಯ, ಫೆಬ್ರವರಿ 9: ಮೈಸೂರು ಮಹಾರಾಜರಿಂದ ಕೊಡುಗೆಯಾಗಿ ಬಂದಿರುವ ಮೈಶುಗರ್ ಕಾರ್ಖಾನೆಯನ್ನು ಉಳಿಸಿಕೊಂಡು ಸಮರ್ಥವಾಗಿ ಮುನ್ನಡೆಸುವ ಇಚ್ಛಾಶಕ್ತಿ ಆಳುವ ಸರ್ಕಾರಗಳಿಗೂ ಇಲ್ಲ, ಜನಪ್ರತಿನಿಧಿಗಳಿಗೂ ಇಲ್ಲ. ಇದರ ಪರಿಣಾಮ ಕಾರ್ಖಾನೆ ಪುನಶ್ಚೇತನ ಕನಸಾಗಿಯೇ ಉಳಿದಿದೆ ಎಂದು ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷರುಗಳ ವೇದಿಕೆ ಸಂಚಾಲಕ ಸಿದ್ದರಾಮೇಗೌಡ ಆರೋಪಿಸಿದರು.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಗೆ ಮರುಜೀವ ನೀಡುವುದಾಗಿ ಕೈಗೆತ್ತಿಕೊಂಡ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದಂತೆ 50 ಕೋಟಿ ರೂಪಾಯಿ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಲಿಲ್ಲ. ಕಾರ್ಖಾನೆ ಯಂತ್ರೋಪಕರಣ ದುರಸ್ತಿ ಕಾರ್ಯ ಗುಣಮಟ್ಟದಿಂದ ಕೂಡಿರಲೂ ಇಲ್ಲ. ಕಬ್ಬು ನುರಿಸುವಿಕೆ ವಿಳಂಬದಿಂದ ಕಬ್ಬಿನ ಇಳುವರಿ ಕಡಿಮೆಯಾಗಿದ್ದು, ಗುಣಮಟ್ಟದ ಸಕ್ಕರೆ ಉತ್ಪಾದನೆಯಾಗಿಲ್ಲ ಎಂದು ದೂರಿದರು.

ಕಾರ್ಖಾನೆಗೆ ಗತ ವೈಭವ ಮರಳಿ ತಂದುಕೊಡುವ ಬದ್ಧತೆ ಸರ್ಕಾರಕ್ಕೆ ಇದ್ದಿದ್ದರೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಾಯಕಲ್ಪ ನೀಡುವ ಅವಕಾಶಗಳಿದ್ದವು. ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಿಲ್ಲ. ಬಾಯಿ ಮಾತಿನಲ್ಲಷ್ಟೇ ಕಾಯಕಲ್ಪದ ಹುಸಿ ನುಡಿಗಳನ್ನಾಡಿ ರೈತರ ಕಣ್ಣೊರೆಸುವ ನಾಟಕವಾಡಿದರೇ ವಿನಃ ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸುವ ದಿಸೆಯಲ್ಲಿ ಸಣ್ಣದೊಂದು ಪ್ರಯತ್ನವನ್ನೂ ಬಿಜೆಪಿ ಸರ್ಕಾರ ನಡೆಸಲಿಲ್ಲವೆಂದು ಆರೋಪಿಸಿದರು.

People Upset On Government For Stopped Mandya Mysugar Factory

ಕಾರ್ಖಾನೆಯನ್ನು ಆರಂಭಿಸಿ ಐದು ತಿಂಗಳು ಕಾರ್ಯಾಚರಣೆ ನಡೆಸಿದರೂ ಕೇವಲ 1 ಲಕ್ಷ ಟನ್ ಕಬ್ಬು ಅರೆಯುವುದಕ್ಕಷ್ಟೇ ಶಕ್ತವಾಯಿತು. ಕನಿಷ್ಟ 4 ಲಕ್ಷ ಟನ್ ಅರೆಯುವ ಗುರಿ ಹೊಂದಿದ್ದರೂ ಹಲವಾರು ಸಮಸ್ಯೆಗಳ ನಡುವೆ ನಿಂತು ನಿಂತ ಓಡಲಾರಂಭಿಸಿತು. ರೈತರ ಕಬ್ಬು ಕಟಾವಿಗೆ ಸರಿಯಾದ ಸಮಯಕ್ಕೆ ಆಳುಗಳನ್ನು ಕರೆತರುವ ಕೆಲಸ ನಡೆಯಲಿಲ್ಲ. ತರಾತುರಿಯಲ್ಲಿ ಕಾರ್ಖಾನೆ ಆರಂಭಿಸುವ ಕೆಲಸಕ್ಕೆ ಸರ್ಕಾರ, ಆಡಳಿತ ಮಂಡಳಿ ಮುಂದಾಯಿತು. ಪೂರ್ವಸಿದ್ಧತೆಗಳ ಕೊರತೆಯಿಂದ ಆರಂಭವಾದ ಕಾರ್ಖಾನೆ ಸಮರ್ಥವಾಗಿ ಕಾರ್ಯಾಚರಣೆಯನ್ನು ಮಾಡಲಿಲ್ಲ. ಕಾರ್ಯಾಚರಣೆ ಸರಾಗವಾಗಿ ನಡೆಯುವುದಕ್ಕೆ ಸರ್ಕಾರಗಳು ಮತ್ತು ಜನಪ್ರತಿನಿಧಿಗಳು ಮುತುವರ್ಜಿ ವಹಿಸಲಿಲ್ಲ. ಇದರಿಂದ ರೈತರು ನಷ್ಟ ಅನುಭವಿಸುವಂತಾಯಿತು. ಕಾರ್ಖಾನೆಯೂ ನಷ್ಟದಲ್ಲಿ ಉಳಿಯಿತು ಎಂದು ವಿಷಾದಿಸಿದರು.

ಮೈಷುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿ ಉಳಿಸಿ ಚಾಲನೆ ಕೊಟ್ಟು ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರ್ದೈವದ ಸಂಗತಿ. ಕಾರ್ಖಾನೆಗೆ ಚಾಲನೆ ಕೊಟ್ಟ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಐದು ತಿಂಗಳಲ್ಲಿ ಒಮ್ಮೆಯೂ ಕಾರ್ಖಾನೆ ಬಳಿ ಸುಳಿಯಲಿಲ್ಲ. ಕಾರ್ಖಾನೆ ಹೇಗೆ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದನ್ನು ಪರಿಶೀಲನೆ ನಡೆಸಲಿಲ್ಲ. ಕಾರ್ಖಾನೆ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಪರಿಹಾರಕ್ಕೆ ಕ್ರಮ ವಹಿಸಲಿಲ್ಲ. ಕಬ್ಬು ಅರೆಯುವಿಕೆ ಮಂದಗತಿಯಲ್ಲಿ ನಡೆಯುತ್ತಿದ್ದರೂ ಆಡಳಿತ ಮಂಡಳಿಯನ್ನು ಪ್ರಶ್ನಿಸಲಿಲ್ಲ. ಪೂರ್ಣ ಪ್ರಮಾಣದ ಹಣ ಬಿಡುಗಡೆಗೊಳಿಸುವ ಜೊತೆಗೆ ಹೆಚ್ಚುವರಿಯಾಗಿ ಹಣ ತಂದು ಕಾರ್ಖಾನೆಗೆ ಹೊಸ ಕಾಯಕಲ್ಪ ನೀಡುವ ಗೋಜಿಗೆ ಹೋಗದಿರುವುದರಿಂದ ಕಾರ್ಖಾನೆ ಯಥಾಸ್ಥಿತಿಯಲ್ಲೇ ಉಳಿಯುವಂತಾಯಿತು ಎಂದರು.

2023-24ನೇ ಸಾಲಿಗಾದರೂ ಈ ಎಲ್ಲಾ ಅಂಶಗಳನ್ನು ಮನಗಂಡಿರುವ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸರ್ಕಾರದ ಗಮನಸೆಳೆದು ಜೂನ್ ತಿಂಗಳಿನಲ್ಲಿಯೇ ಕಾರ್ಖಾನೆಯನ್ನು ಪ್ರಾರಂಭಿಸಬೇಕು. ಕಾರ್ಖಾನೆಗೆ ನೀರಿನ ತೊಂದರೆಯಿದ್ದು, ಕೋಣನಹಳ್ಳಿ ಕೆರೆಯಿಂದ ನೀರಾವರಿ ಇಲಾಖೆ ನೀರು ಕೊಡಲು ಒಪ್ಪಿರುವುದರಿಂದ ಜರೂರಾಗಿ ಕಾರ್ಖಾನೆಗೆ ನೀರಿನ ವ್ಯವಸ್ಥೆ ಮಾಡಿಕೊಂಡು ಸಮರ್ಪಕವಾಗಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಯನ್ನು ಸನ್ನದ್ಧಗೊಳಿಸುವಂತೆ ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+