ಇನ್ನು ಮುಂದೆ ರಂಗನತಿಟ್ಟಿನಲ್ಲಿ ವರ್ಷ ಪೂರ್ತಿ ಪ್ರವಾಸಿಗರಿಗೆ ಬೋಟಿಂಗ್ ಅನುಭವ
ಮಂಡ್ಯ, ಜೂನ್ 22 : ಪಕ್ಷಿ ಕಾಶಿ ಎಂದೇ ಹೆಸರಾದ ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಇನ್ನುಮುಂದೆ ವರ್ಷ ಪೂರ್ತಿ ಬೋಟಿಂಗ್ ಅನುಭವ ದೊರೆಯಲಿದೆ. ನದಿಯಲ್ಲಿ ಮಂಡಿಯುದ್ದ ನೀರಿದ್ದರೂ ನಡೆಯುವ ಸಮತಟ್ಟಾದ ತಳ ಹೊಂದಿರುವ ಹೊಸ ವಿನ್ಯಾಸದ ದೋಣಿಗಳು ಕಾವೇರಿ ನದಿಗೆ ಇಳಿಯಲಿವೆ.
18 ಜನರು ಕೂರಬಹುದಾದ ಹೊಸ ಮಾದರಿಯ ದೋಣಿಯೊಂದು ವಾರದಿಂದ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದೆ. ಇಂತಹ ಇನ್ನೂ ನಾಲ್ಕು ದೋಣಿಗಳು ಪಕ್ಷಿಧಾಮಕ್ಕೆ ಶೀಘ್ರ ಬರಲಿವೆ. ಬೇಸಿಗೆ ವೇಳೆ ಕಾವೇರಿ ನದಿಯಲ್ಲಿ ನೀರು ಕಡಿಮೆಯಾಗುತ್ತಿದ್ದ ಸಂದರ್ಭದಲ್ಲಿ ಬೋಟಿಂಗ್ ಸ್ಥಗಿತಗೊಳ್ಳುತ್ತಿತ್ತು. ದೋಣಿಯಲ್ಲಿ ಸಾಗುತ್ತಾ ಪಕ್ಷಿಗಳನ್ನು ಕಣ್ತುಂಬಿ ಕೊಳ್ಳುತ್ತಿದ್ದ ಪ್ರವಾಸಿಗರು ಬೇಸರ ಮಾಡಿಕೊಳ್ಳುತ್ತಿದ್ದರು. ಕಲ್ಲುಗಳ ಮೇಲೆ ನಿದ್ದೆ ಮಾಡುತ್ತಿದ್ದ ಮೊಸಳೆಗಳನ್ನು ವೀಕ್ಷಿಸುವ ಅನುಭವ ತಪ್ಪಿ ಹೋಗುತ್ತಿತ್ತು.
ಪ್ರವಾಸಿಗರಿಗೆ ವರ್ಷದ 365 ದಿನಗಳೂ ಬೋಟಿಂಗ್ ಅನುಭವ ನೀಡುವ ಉದ್ದೇಶದಿಂದ ಎರಡು ಅಡಿ ನೀರಿನಲ್ಲೂ ನಡೆಯುವ ದೋಣಿಯನ್ನು ಅಭಿವೃದ್ಧಿ ಪಡಿಸಲಾಗಿದೆ. ಬೆಂಗಳೂರಿನ ಕರ್ನಾಟಕ ದೋಣಿ ಕೇಂದ್ರ ಐದು ಹೊಸ ದೋಣಿಗಳನ್ನು ರಂಗನತಿಟ್ಟು ಪಕ್ಷಿಧಾಮಕ್ಕೆ ನೀಡುತ್ತಿದೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ : ಮಳೆಗಾಲ ಆರಂಭಗೊಂಡಿದ್ದು, ರಂಗನತಿಟ್ಟು ಪಕ್ಷಿಧಾಮ ಹಸಿರಿನಿಂದ ಕಂಗೊಳಿಸುತ್ತಿದೆ. ದೇಶ, ವಿದೇಶಗಳ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಇತ್ತೀಚೆಗಷ್ಟೇ ಹಕ್ಕಿ ಗಣತಿ ಪೂರ್ಣಗೊಂಡಿದ್ದು, 65 ಜಾತಿಯ 3 ಸಾವಿರಕ್ಕೂ ಹೆಚ್ಚು ಹಕ್ಕಿಗಳನ್ನು ಗುರುತಿಸಲಾಗಿದೆ. ದೇಶ, ವಿದೇಶಗಳಿಂದ ಬರುವ ಪ್ರವಾಸಿಗರು ಪಕ್ಷಿಧಾಮದ ಆವರಣದಲ್ಲಿರುವ ಹಸಿರು ವಾತಾವರಣವನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ. ದ್ವೀಪಗಳ ಸುತ್ತಲೂ ದೋಣಿ ವಿಹಾರದಲ್ಲಿ ತೆರಳಿ ಪಕ್ಷಿಗಳ ಕಲರವ ಅನುಭವಿಸುತ್ತಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications