ಮಂಡ್ಯ ವಿಶೇಷ ಚೇತನ ಯುವಕನ ಸಮಸ್ಯೆ 2 ದಿನದಲ್ಲಿ ಪರಿಹರಿಸಿದ ಮೋದಿ
ಮಂಡ್ಯ, ಜೂನ್ 3: ಕಳೆದ ಎರಡು ವರ್ಷಗಳಿಂದ ಆಧಾರ್ ಕಾರ್ಡ್ಗಾಗಿ ಪರಿತಪಿಸುತ್ತಿದ್ದ ವಿಶೇಷಚೇತನನಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆರವಾಗಿದ್ದಾರೆ. ಜಿಲ್ಲೆಯ ತಂಡಸಹಳ್ಳಿ ಗ್ರಾಮದ 26 ವರ್ಷದ ಯುವಕ ನೂತನ್ ಹುಟ್ಟಿನಿಂದಲೇ ಅಂಗವಿಕಲರಾಗಿದ್ದು, ಚರ್ಮದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದು ಅವರಿಗೆ ಆಧಾರ್ ಕಾರ್ಡ್ ಪಡೆಯುವುದಕ್ಕೆ ದೊಡ್ಡ ಸಮಸ್ಯೆಯನ್ನು ತಂದೊಡ್ಡಿದೆ.
ಪ್ರಸ್ತುತ ಆಧಾರ್ ಕಾರ್ಡ್ ಪಡೆಯಬೇಕೆಂದರೆ ಬೆರಳಚ್ಚು ಅತ್ಯಾವಶ್ಯಕವಾಗಿದೆ. ಆದರೆ ನೂತನ್ಗೆ ಬೆರಳಚ್ಚು ಬಾರದ ಬೆನ್ನಲ್ಲೇ ಅವರು ಭಾವಚಿತ್ರದ ಆಧಾರದ ಮೇಲೆ ಅವರಿಗೆ ಅಧಿಕಾರಿಗಳು ಆಧಾರ್ ಕಾರ್ಡ್ ಮಾಡಿಕೊಟ್ಟಿದ್ದರು.
ಅದೇ ಆಧಾರದಲ್ಲಿ ಅವರು ಪಿಂಚಣಿ ಸೇರಿದಂತೆ ಸರಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳ ಹಿಂದೆ ಸರಕಾರ ಆಧಾರ್ಗೆ ಮೊಬೈಲ್ ನಂಬರ್ ನೋಂದಣಿ ಕಡ್ಡಾಯಗೊಳಿಸಿತ್ತು. ಹಿಂದೆ ಆಧಾರ್ ಮಾಡಿಸುವಾಗ ನೂತನ್ ಮೊಬೈಲ್ ನಂಬರ್ ಕೊಟ್ಟಿರಲಿಲ್ಲ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಅವರಿಗೆ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯ ಸಿಗುತ್ತಿರಲಿಲ್ಲ.

ಅಧಿಕಾರಿಗಳು ಆಧಾರ್ಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡಲು ತೆರಳುವುದಕ್ಕೆ ಸೂಚಿಸಿದ ಬೆನ್ನಲ್ಲೇ ಆಧಾರ್ ಕಚೇರಿಗೆ ತೆರಳಿದ್ದಾರೆ. ಆದರೆ ಅಲ್ಲಿ ನೂತನ್ ಬಯೋಮೆಟ್ರಿಕ್ ತೆಗೆದುಕೊಂಡಿಲ್ಲ. ಇತ್ತ ಕಣ್ಣುಗಳ ಸ್ಕ್ಯಾನ್ ಆಗಲಿಲ್ಲ. ಇದರಿಂದ ಆಧಾರ್ ಕಾರ್ಡ್ ಬ್ಲಾಕ್ ಆಗಿದೆ. ಅಲ್ಲಿಂದ ಅವರು ಎಲ್ಲಾ ಸರಕಾರಿ ಸೌಲಭ್ಯವನ್ನು ಕಳೆದುಕೊಂಡಿದ್ದರು. ಈ ಕುರಿತು ಜಿಲ್ಲಾಡಳಿತ, ಸಂಸದೆ ಸುಮಲತಾರನ್ನು ಭೇಟಿ ಮಾಡಿ ಮನವಿ ಮಾಡಿದರೂ ಕೂಡ ಏನೂ ಪ್ರಯೋಜನವಾಗಿರಲಿಲ್ಲ. ಇದು ಕುಟುಂಬಸ್ಥರಿಗೆ ಮತ್ತಷ್ಟು ಚಿಂತೆ ಉಂಟುಮಾಡಿತ್ತು.
ರೈತ ಮುಖಂಡ ಮಧುಚಂದನ್ ನೆರವು: ಅಧಿಕಾರಿಗಳಿಂದ ಯಾವುದೇ ನೆರವಾಗದಿದ್ದ ಸಂದರ್ಭದಲ್ಲಿ ಕುಟುಂಬಸ್ಥರು ಸ್ನೇಹಿತರ ಸಲಹೆಯಂತೆ ಆರ್ಗ್ಯಾನಿಕ್ ಸಂಸ್ಥಾಪಕ ಹಾಗೂ ರೈತ ಮುಖಂಡ ಮಧು ಚಂದನ್ ಭೇಟಿಯಾಗಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ನೂತನ್ ನೋವಿನ ಕಥೆ ಕೇಳಿದ ಮಧುಚಂದನ್, ನೂತನ್ ಫೋಟೋ ಮತ್ತು ಮಾಹಿತಿಯನ್ನು ಟ್ವೀಟ್ ಮಾಡಿ ಪಿಎಂ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.
Thanks to @PMOIndia @narendramodi @UIDAI @UIDAIBengaluru….Nuthan has got his Aadhar card in just 4 days!!!@AshwiniMS_TNIE https://t.co/Qok3Neo0V2
— Madhu Chandan SC (@madhuchandansc) May 31, 2022
ಮಧುಚಂದನ್ ಟ್ವೀಟ್ಗೆ ತಕ್ಷಣ ಸ್ಪಂದಿಸಿದ ಪ್ರಧಾನಮಂತ್ರಿ ಕಚೇರಿ ಅಧಿಕಾರಿಗಳು ಬೆಂಗಳೂರಿನ ಕಚೇರಿಗೆ ಮಾಹಿತಿ ರವಾನಿಸಿದ್ದಾರೆ. ಮೇ 29 ರಂದು ಬೆಂಗಳೂರಿನ ಆಧಾರ್ಕಾರ್ಡ್ ಕಚೇರಿ ಅಧಿಕಾರಿಗಳು ಮಧುಚಂದನ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡು, ಮರು ದಿನವೇ ಹಳೆಯ ಆಧಾರ್ ಕಾರ್ಡ್ ಆಕ್ಟಿವ್ಗೊಳಿಸಿ ಅಪ್ಡೇಟ್ ಮಾಡಿಕೊಟ್ಟಿದ್ದಾರೆ.
ಎರಡೂ ವರ್ಷಗಳ ಕಾಲ ಆಧಾರ್ ಕಾರ್ಡ್ ಮಾಡಿಸಲಾಗದೆ ಪರಿತಪಿಸಿದ್ದ ನೂತನ್ಗೆ ರೈತ ಮುಖಂಡ ಮಾಡಿದ ಒಂದು ಟ್ವೀಟ್ನಿಂದ ಸಮಸ್ಯೆ ಮುಕ್ತರಾಗಿದ್ದು, ಕುಟುಂಬಸ್ಥರು ಮಧುಚಂದನ್ಗೆ ಧನ್ಯವಾದ ತಿಳಿಸಿದ್ದಾರೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications