ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು: ನಟ ಶಿವರಾಜ್ಕುಮಾರ್ ಒತ್ತಾಯ
ಮಂಡ್ಯ, ಅಕ್ಟೋಬರ್, 22: ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಪ್ರಧಾನಿಯವರು ಮಧ್ಯಪ್ರವೇಶಿಸಿ ಎರಡೂ ರಾಜ್ಯದ ನಡುವೆ ಇರುವ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ನಟ ಶಿವರಾಜ್ಕುಮಾರ್ ಒತ್ತಾಯಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ವ್ಯವಸ್ಥೆಯೊಳಗೆ ರಾಜ್ಯಗಳ ನಡುವೆ ಏನೇ ಸಮಸ್ಯೆಗಳು, ವಿವಾದಗಳು ಉಂಟಾದರೂ ಪ್ರಧಾನಮಂತ್ರಿಗಳೇ ಅದನ್ನು ಬಗೆಹರಿಸಬೇಕು. ಆ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ರಾಜಕಾರಣವನ್ನು ಯಾರೂ ಮುಂದಕ್ಕೆ ತರಬಾರದು ಎಂದು ಮದ್ದೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಕುಳಿತು ಮಾತನಾಡಬೇಕು. ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲಿರುವವರೂ ರೈತರೇ, ಅಲ್ಲಿರುವವರೂ ರೈತರೇ. ದ್ವೇಷ, ರಾಜಕೀಯ, ಪ್ರತಿಷ್ಠೆಯನ್ನು ಮರೆತು ಒಟ್ಟಿಗೆ ಕುಳಿತು ಮಾತನಾಡಿದರೆ ಯಾವುದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದರು.
ನಮಗೇ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಹರಿದುಹೋಗುತ್ತಿದೆ. ಇದು ಸರಿಯಲ್ಲ. ಈ ವಿಷಯವಾಗಿ ಎಲ್ಲರೂ ಸೇರಿ ಕುಳಿತು ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು. ಕಾವೇರಿ ವಿಚಾರದಲ್ಲಿ ನಿಮ್ಮ ಹೋರಾಟ ಹೇಗಿರುತ್ತದೆ ಎಂದು ಪ್ರಶ್ನಿಸಿದಾಗ, ಹೋರಾಟ ಹೇಗಿರಬೇಕು ಎಂಬ ಬಗ್ಗೆಯೂ ಚರ್ಚೆಯಾಗಬೇಕು. ಸುಮ್ಮನೆ ಬೀದಿಯಲ್ಲಿ ನಿಂತು ಕಿರುಚುವುದು, ಬೆಂಕಿ ಹಚ್ಚುವುದು ಹೋರಾಟವಲ್ಲ. ಅದು ಒಳ್ಳೆಯ ರೀತಿಯಲ್ಲಿರಬೇಕು. ಶಕ್ತಿಯುತವಾಗಿಯೂ ಇರಬೇಕು ಎಂದರು.
ನಾವು ಮಾಡುವ ಹೋರಾಟ ಇನ್ನೊಬ್ಬರಿಗೆ ಪ್ರೇರಣೆಯಾಗುವಂತಿರಬೇಕೇ ವಿನಃ ಪ್ರಚೋದನೆ ನೀಡುವಂತಿರಬಾರದು. ಯಾರಿಗೂ ತೊಂದರೆ ಆಗದಂತೆ ಹೋರಾಟ ನಡೆಯಬೇಕು. ನಮ್ಮಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಬಾರದು. ಕಿಚ್ಚನ್ನು ತಡೆದಿಟ್ಟುಕೊಂಡು ಸರಿಯಾದ ರೀತಿಯಲ್ಲಿ ಹೋರಾಟವನ್ನು ಮುನ್ನಡೆಸಬೇಕು. ನಾವು ಹಚ್ಚುವ ಹೋರಾಟದ ಕಿಚ್ಚು ಯಾರನ್ನೂ ಸುಡಬಾರದು. ಹಾನಿ ಉಂಟುಮಾಡಬಾರದು ಎಂದರು.

ಸರ್ಕಾರದಿಂದ ಸರಿಯಾದ ವಾದ ಮಂಡನೆ ಆಗದಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, ನಮಗೂ ಅದೇ ಪ್ರಶ್ನೆ ಕಾಡುತ್ತಿದೆ. ಈಗ ನಾನೊಬ್ಬ ಕಲಾವಿದ. ಜನರಿಗೆಷ್ಟು ಗೊತ್ತಿದೆಯೋ ನನಗೂ ಅಷ್ಟೇ ಗೊತ್ತಿದೆ. ಈ ವಿಚಾರದಲ್ಲಿ ನನಗೆ ಹೆಚ್ಚು ಮಾಹಿತಿ ಇರುವುದಿಲ್ಲ. ನಾವು ಆರಿಸಿ ಕಳುಹಿಸಿರುವ ಪ್ರತಿನಿಧಿಗಳು ಇದರ ಬಗ್ಗೆ ಆಲೋಚಿಸಬೇಕು. ಮುಂದೇನು ಮಾಡಬೇಕೆಂಬ ಬಗ್ಗೆ ಅವರು ತೀರ್ಮಾನ ಕೈಗೊಳ್ಳಬೇಕು ಎಂದು ನುಡಿದರು.
ಶಿವರಾಜ್ಕುಮಾರ್ ರಾಜಕೀಯ ರಂಗಕ್ಕೆ ಬರುತ್ತಾರೆಯೇ ಎಂದು ಕೇಳಿದಾಗ, ನನಗೆ ಸಿನಿಮಾರಂಗ ಒಂದೇ ಸಾಕು. ಖಂಡಿತ ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಘೋಸ್ಟ್ ಚಿತ್ರದ ಕುರಿತು ಪ್ರತಿಕ್ರಿಯಿಸಿ, ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದ್ದು, ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರಿಂದ ಪ್ರೋತ್ಸಾಹ, ಸಹಕಾರ ಸಿಕ್ಕರಷ್ಟೇ ಇನ್ನಷ್ಟು ಉತ್ತಮ ಚಿತ್ರಗಳನ್ನು ಮಾಡಲು ಸಾಧ್ಯ. ಕೆಜಿಎಫ್, ಕಾಂತಾರ, ವೇದ, ಚಾರ್ಲಿ 777 ಚಿತ್ರಗಳ ಸಾಲಿನಲ್ಲಿ ನಿಲ್ಲುವ ಚಿತ್ರ ಘೋಸ್ಟ್ ಆಗಿದೆ. ಹೀಗೆಯೇ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications